Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

- Advertisement -
- Advertisement -

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮುಂಬೈ ಪೊಲೀಸರು ಬುಧವಾರ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ವಿರುದ್ಧ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗಲು ಕುನಾಲ್ ಅವರನ್ನು ಕೇಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಅವರು ಯಾವಾಗ ಹಾಜರಾಗಬೇಕು ಎಂಬುದು ಸ್ಪಷ್ಟವಾಗಿಲ್ಲ.

ಮಂಗಳವಾರ ಕುನಾಲ್ ಅವರಿಗೆ ಮೊದಲ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಅವರ ವಿರುದ್ಧದ ಮಾನನಷ್ಟ ಪ್ರಕರಣದ ತನಿಖೆಯನ್ನು ಪ್ರಾರಂಭಿಸುವಂತೆ ಕೋರಿದ್ದರು. ಮೊದಲ ನೋಟಿಸ್ ನಂತರ, ಶಿವಸೇನೆ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಇದೆ ಎಂದು ಉಲ್ಲೇಖಿಸಿ ಕುನಾಲ್ ಅವರು ಪೊಲೀಸರ ಮುಂದೆ ಹಾಜರಾಗಲು ಒಂದು ವಾರದ ಸಮಯ ಕೋರಿದ್ದರು.

ಕೆಲವು ದಿನಗಳ ಹಿಂದೆ ಮುಂಬೈನ ಸ್ಟುಡಿಯೋವೊಂದರಲ್ಲಿ ರೆಕಾರ್ಡ್ ಮಾಡಲಾದ ತಮ್ಮ ಕಾರ್ಯಕ್ರಮದಲ್ಲಿ ಶಿವಸೇನಾ ಮುಖ್ಯಸ್ಥ ಶಿಂಧೆ ವಿರುದ್ಧ ಹಾಸ್ಯನಟ ಕುನಾಲ್ ಕಮ್ರಾ ತೀವ್ರ ಟೀಕೆಗಳನ್ನು ಮಾಡುವ ಮೂಲಕ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ, ಉಪಮುಖ್ಯಮಂತ್ರಿ ಅವರ ರಾಜಕೀಯ ಜೀವನದ ಬಗ್ಗೆ ಕುನಾಲ್ ಟೀಕಿಸಿದ್ದರು. ಅದರಲ್ಲಿ 2022 ರಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ದಂಗೆಯ ವಿಚಾರವೂ ಸೇರಿತ್ತು.

ಶಿಂಧೆ ಅವರನ್ನು “ಗದ್ದರ್” (ದೇಶದ್ರೋಹಿ) ಎಂದು ಉಲ್ಲೇಖಿಸಿ “ದಿಲ್ ತೋ ಪಾಗಲ್ ಹೈ” ಚಿತ್ರದ ಜನಪ್ರಿಯ ಹಿಂದಿ ಹಾಡಿನ ವಿಡಂಬನೆಯನ್ನು ಕುನಾಲ್ ಪ್ರದರ್ಶಿಸಿದ್ದರು. ಶಿವಸೇನೆ (2022) ಮತ್ತು ಎನ್‌ಸಿಪಿ (2023) ವಿಭಜನೆ ಸೇರಿದಂತೆ ಮಹಾರಾಷ್ಟ್ರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅವರು ಹಾಸ್ಯ ಚಟಾಕಿ ಹಾರಿಸಿದ್ದರು.

ಭಾನುವಾರ ರಾತ್ರಿ, ಶಿವಸೇನೆ ಸದಸ್ಯರು ಕುನಾಲ್ ಅವರ ಕಾರ್ಯಕ್ರಮ ನಡೆದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್ ಮತ್ತು ಸ್ಥಳ ಇರುವ ಹೋಟೆಲ್‌ಗೆ ಹಾನಿ ಮಾಡಿದ್ದರು. ಇದರ ನಂತರ ಶಿವಸೇನೆ ಶಾಸಕ ಪಟೇಲ್ ಅವರ ದೂರಿನ ಆಧಾರದ ಮೇಲೆ, ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖಾರ್ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈ ನಡುವೆ ಕುನಾಲ್ ಅವರ ಕಾರ್ಯಕ್ರಮ ನಡೆದ ಸ್ಥಳವನ್ನು ಧ್ವಂಸ ಮಾಡಿದ್ದಕ್ಕಾಗಿ ಶಿಂಧೆ ನೇತೃತ್ವದ ಶಿವಸೇನೆಯ 40 ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೋಮವಾರ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದರೋಡೆ ಮಾಡಿದ್ದಕ್ಕಾಗಿ ಪೊಲೀಸರು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಮತ್ತು ಇತರ 11 ಜನರನ್ನು ಬಂಧಿಸಿದ್ದಾರೆ. ಅದೇ ದಿನ ಸ್ಥಳೀಯ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಕಮ್ರಾ ಅವರ ಹಾಸ್ಯವನ್ನು ಖಂಡಿಸಿದರೆ, ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಗಳನ್ನು ಟೀಕಿಸಿದ್ದಾರೆ. ಇದನ್ನು ಅವರು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಅದೇ ರೀತಿ, ಮಹಾರಾಷ್ಟ್ರ ಸರ್ಕಾರವು ಕುನಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಮಂಗಳವಾರದಂದು ಕುನಾಲ್ ಅವರು ಪ್ರದರ್ಶನ ನೀಡಿದ್ದ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅದಕ್ಕೂ ಒಂದು ದಿನ ಮೊದಲು ಅವರು ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ ಮತ್ತು ಸಾಯುವವರೆಗೆ ಕಾಯುತ್ತಾ ನನ್ನ ಹಾಸಿಗೆಯ ಕೆಳಗೆ ಅಡಗಿಕೊಳ್ಳುವುದಿಲ್ಲ” ಎಂದು ಹೇಳಿದ್ದರು.

ತನ್ನ ವಿರುದ್ಧ ತೆಗೆದುಕೊಂಡ ಯಾವುದೇ ಕಾನೂನುಬದ್ಧ ಕ್ರಮಕ್ಕೆ ಪೊಲೀಸರು ಮತ್ತು ನ್ಯಾಯಾಲಯಗಳೊಂದಿಗೆ ಸಹಕರಿಸುವುದಾಗಿ ಹೇಳಿರುವ ಕುನಾಲ್, ತನ್ನ ಹಾಸ್ಯ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಸ್ಥಳವನ್ನು ಧ್ವಂಸ ಮಾಡಿದವರ ವಿರುದ್ಧ ನ್ಯಾಯಯುತ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...