Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

- Advertisement -
- Advertisement -

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮುಂಬೈ ಪೊಲೀಸರು ಬುಧವಾರ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ವಿರುದ್ಧ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗಲು ಕುನಾಲ್ ಅವರನ್ನು ಕೇಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಅವರು ಯಾವಾಗ ಹಾಜರಾಗಬೇಕು ಎಂಬುದು ಸ್ಪಷ್ಟವಾಗಿಲ್ಲ.

ಮಂಗಳವಾರ ಕುನಾಲ್ ಅವರಿಗೆ ಮೊದಲ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಅವರ ವಿರುದ್ಧದ ಮಾನನಷ್ಟ ಪ್ರಕರಣದ ತನಿಖೆಯನ್ನು ಪ್ರಾರಂಭಿಸುವಂತೆ ಕೋರಿದ್ದರು. ಮೊದಲ ನೋಟಿಸ್ ನಂತರ, ಶಿವಸೇನೆ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಇದೆ ಎಂದು ಉಲ್ಲೇಖಿಸಿ ಕುನಾಲ್ ಅವರು ಪೊಲೀಸರ ಮುಂದೆ ಹಾಜರಾಗಲು ಒಂದು ವಾರದ ಸಮಯ ಕೋರಿದ್ದರು.

ಕೆಲವು ದಿನಗಳ ಹಿಂದೆ ಮುಂಬೈನ ಸ್ಟುಡಿಯೋವೊಂದರಲ್ಲಿ ರೆಕಾರ್ಡ್ ಮಾಡಲಾದ ತಮ್ಮ ಕಾರ್ಯಕ್ರಮದಲ್ಲಿ ಶಿವಸೇನಾ ಮುಖ್ಯಸ್ಥ ಶಿಂಧೆ ವಿರುದ್ಧ ಹಾಸ್ಯನಟ ಕುನಾಲ್ ಕಮ್ರಾ ತೀವ್ರ ಟೀಕೆಗಳನ್ನು ಮಾಡುವ ಮೂಲಕ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ, ಉಪಮುಖ್ಯಮಂತ್ರಿ ಅವರ ರಾಜಕೀಯ ಜೀವನದ ಬಗ್ಗೆ ಕುನಾಲ್ ಟೀಕಿಸಿದ್ದರು. ಅದರಲ್ಲಿ 2022 ರಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ದಂಗೆಯ ವಿಚಾರವೂ ಸೇರಿತ್ತು.

ಶಿಂಧೆ ಅವರನ್ನು “ಗದ್ದರ್” (ದೇಶದ್ರೋಹಿ) ಎಂದು ಉಲ್ಲೇಖಿಸಿ “ದಿಲ್ ತೋ ಪಾಗಲ್ ಹೈ” ಚಿತ್ರದ ಜನಪ್ರಿಯ ಹಿಂದಿ ಹಾಡಿನ ವಿಡಂಬನೆಯನ್ನು ಕುನಾಲ್ ಪ್ರದರ್ಶಿಸಿದ್ದರು. ಶಿವಸೇನೆ (2022) ಮತ್ತು ಎನ್‌ಸಿಪಿ (2023) ವಿಭಜನೆ ಸೇರಿದಂತೆ ಮಹಾರಾಷ್ಟ್ರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅವರು ಹಾಸ್ಯ ಚಟಾಕಿ ಹಾರಿಸಿದ್ದರು.

ಭಾನುವಾರ ರಾತ್ರಿ, ಶಿವಸೇನೆ ಸದಸ್ಯರು ಕುನಾಲ್ ಅವರ ಕಾರ್ಯಕ್ರಮ ನಡೆದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್ ಮತ್ತು ಸ್ಥಳ ಇರುವ ಹೋಟೆಲ್‌ಗೆ ಹಾನಿ ಮಾಡಿದ್ದರು. ಇದರ ನಂತರ ಶಿವಸೇನೆ ಶಾಸಕ ಪಟೇಲ್ ಅವರ ದೂರಿನ ಆಧಾರದ ಮೇಲೆ, ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖಾರ್ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈ ನಡುವೆ ಕುನಾಲ್ ಅವರ ಕಾರ್ಯಕ್ರಮ ನಡೆದ ಸ್ಥಳವನ್ನು ಧ್ವಂಸ ಮಾಡಿದ್ದಕ್ಕಾಗಿ ಶಿಂಧೆ ನೇತೃತ್ವದ ಶಿವಸೇನೆಯ 40 ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೋಮವಾರ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದರೋಡೆ ಮಾಡಿದ್ದಕ್ಕಾಗಿ ಪೊಲೀಸರು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಮತ್ತು ಇತರ 11 ಜನರನ್ನು ಬಂಧಿಸಿದ್ದಾರೆ. ಅದೇ ದಿನ ಸ್ಥಳೀಯ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಕಮ್ರಾ ಅವರ ಹಾಸ್ಯವನ್ನು ಖಂಡಿಸಿದರೆ, ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಗಳನ್ನು ಟೀಕಿಸಿದ್ದಾರೆ. ಇದನ್ನು ಅವರು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಅದೇ ರೀತಿ, ಮಹಾರಾಷ್ಟ್ರ ಸರ್ಕಾರವು ಕುನಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಮಂಗಳವಾರದಂದು ಕುನಾಲ್ ಅವರು ಪ್ರದರ್ಶನ ನೀಡಿದ್ದ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅದಕ್ಕೂ ಒಂದು ದಿನ ಮೊದಲು ಅವರು ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ ಮತ್ತು ಸಾಯುವವರೆಗೆ ಕಾಯುತ್ತಾ ನನ್ನ ಹಾಸಿಗೆಯ ಕೆಳಗೆ ಅಡಗಿಕೊಳ್ಳುವುದಿಲ್ಲ” ಎಂದು ಹೇಳಿದ್ದರು.

ತನ್ನ ವಿರುದ್ಧ ತೆಗೆದುಕೊಂಡ ಯಾವುದೇ ಕಾನೂನುಬದ್ಧ ಕ್ರಮಕ್ಕೆ ಪೊಲೀಸರು ಮತ್ತು ನ್ಯಾಯಾಲಯಗಳೊಂದಿಗೆ ಸಹಕರಿಸುವುದಾಗಿ ಹೇಳಿರುವ ಕುನಾಲ್, ತನ್ನ ಹಾಸ್ಯ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಸ್ಥಳವನ್ನು ಧ್ವಂಸ ಮಾಡಿದವರ ವಿರುದ್ಧ ನ್ಯಾಯಯುತ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...