Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

- Advertisement -
- Advertisement -

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮುಂಬೈ ಪೊಲೀಸರು ಬುಧವಾರ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ವಿರುದ್ಧ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗಲು ಕುನಾಲ್ ಅವರನ್ನು ಕೇಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಅವರು ಯಾವಾಗ ಹಾಜರಾಗಬೇಕು ಎಂಬುದು ಸ್ಪಷ್ಟವಾಗಿಲ್ಲ.

ಮಂಗಳವಾರ ಕುನಾಲ್ ಅವರಿಗೆ ಮೊದಲ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಅವರ ವಿರುದ್ಧದ ಮಾನನಷ್ಟ ಪ್ರಕರಣದ ತನಿಖೆಯನ್ನು ಪ್ರಾರಂಭಿಸುವಂತೆ ಕೋರಿದ್ದರು. ಮೊದಲ ನೋಟಿಸ್ ನಂತರ, ಶಿವಸೇನೆ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಇದೆ ಎಂದು ಉಲ್ಲೇಖಿಸಿ ಕುನಾಲ್ ಅವರು ಪೊಲೀಸರ ಮುಂದೆ ಹಾಜರಾಗಲು ಒಂದು ವಾರದ ಸಮಯ ಕೋರಿದ್ದರು.

ಕೆಲವು ದಿನಗಳ ಹಿಂದೆ ಮುಂಬೈನ ಸ್ಟುಡಿಯೋವೊಂದರಲ್ಲಿ ರೆಕಾರ್ಡ್ ಮಾಡಲಾದ ತಮ್ಮ ಕಾರ್ಯಕ್ರಮದಲ್ಲಿ ಶಿವಸೇನಾ ಮುಖ್ಯಸ್ಥ ಶಿಂಧೆ ವಿರುದ್ಧ ಹಾಸ್ಯನಟ ಕುನಾಲ್ ಕಮ್ರಾ ತೀವ್ರ ಟೀಕೆಗಳನ್ನು ಮಾಡುವ ಮೂಲಕ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ, ಉಪಮುಖ್ಯಮಂತ್ರಿ ಅವರ ರಾಜಕೀಯ ಜೀವನದ ಬಗ್ಗೆ ಕುನಾಲ್ ಟೀಕಿಸಿದ್ದರು. ಅದರಲ್ಲಿ 2022 ರಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ದಂಗೆಯ ವಿಚಾರವೂ ಸೇರಿತ್ತು.

ಶಿಂಧೆ ಅವರನ್ನು “ಗದ್ದರ್” (ದೇಶದ್ರೋಹಿ) ಎಂದು ಉಲ್ಲೇಖಿಸಿ “ದಿಲ್ ತೋ ಪಾಗಲ್ ಹೈ” ಚಿತ್ರದ ಜನಪ್ರಿಯ ಹಿಂದಿ ಹಾಡಿನ ವಿಡಂಬನೆಯನ್ನು ಕುನಾಲ್ ಪ್ರದರ್ಶಿಸಿದ್ದರು. ಶಿವಸೇನೆ (2022) ಮತ್ತು ಎನ್‌ಸಿಪಿ (2023) ವಿಭಜನೆ ಸೇರಿದಂತೆ ಮಹಾರಾಷ್ಟ್ರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅವರು ಹಾಸ್ಯ ಚಟಾಕಿ ಹಾರಿಸಿದ್ದರು.

ಭಾನುವಾರ ರಾತ್ರಿ, ಶಿವಸೇನೆ ಸದಸ್ಯರು ಕುನಾಲ್ ಅವರ ಕಾರ್ಯಕ್ರಮ ನಡೆದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್ ಮತ್ತು ಸ್ಥಳ ಇರುವ ಹೋಟೆಲ್‌ಗೆ ಹಾನಿ ಮಾಡಿದ್ದರು. ಇದರ ನಂತರ ಶಿವಸೇನೆ ಶಾಸಕ ಪಟೇಲ್ ಅವರ ದೂರಿನ ಆಧಾರದ ಮೇಲೆ, ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖಾರ್ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈ ನಡುವೆ ಕುನಾಲ್ ಅವರ ಕಾರ್ಯಕ್ರಮ ನಡೆದ ಸ್ಥಳವನ್ನು ಧ್ವಂಸ ಮಾಡಿದ್ದಕ್ಕಾಗಿ ಶಿಂಧೆ ನೇತೃತ್ವದ ಶಿವಸೇನೆಯ 40 ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೋಮವಾರ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದರೋಡೆ ಮಾಡಿದ್ದಕ್ಕಾಗಿ ಪೊಲೀಸರು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಮತ್ತು ಇತರ 11 ಜನರನ್ನು ಬಂಧಿಸಿದ್ದಾರೆ. ಅದೇ ದಿನ ಸ್ಥಳೀಯ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಕಮ್ರಾ ಅವರ ಹಾಸ್ಯವನ್ನು ಖಂಡಿಸಿದರೆ, ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಗಳನ್ನು ಟೀಕಿಸಿದ್ದಾರೆ. ಇದನ್ನು ಅವರು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಅದೇ ರೀತಿ, ಮಹಾರಾಷ್ಟ್ರ ಸರ್ಕಾರವು ಕುನಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಮಂಗಳವಾರದಂದು ಕುನಾಲ್ ಅವರು ಪ್ರದರ್ಶನ ನೀಡಿದ್ದ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅದಕ್ಕೂ ಒಂದು ದಿನ ಮೊದಲು ಅವರು ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ ಮತ್ತು ಸಾಯುವವರೆಗೆ ಕಾಯುತ್ತಾ ನನ್ನ ಹಾಸಿಗೆಯ ಕೆಳಗೆ ಅಡಗಿಕೊಳ್ಳುವುದಿಲ್ಲ” ಎಂದು ಹೇಳಿದ್ದರು.

ತನ್ನ ವಿರುದ್ಧ ತೆಗೆದುಕೊಂಡ ಯಾವುದೇ ಕಾನೂನುಬದ್ಧ ಕ್ರಮಕ್ಕೆ ಪೊಲೀಸರು ಮತ್ತು ನ್ಯಾಯಾಲಯಗಳೊಂದಿಗೆ ಸಹಕರಿಸುವುದಾಗಿ ಹೇಳಿರುವ ಕುನಾಲ್, ತನ್ನ ಹಾಸ್ಯ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಸ್ಥಳವನ್ನು ಧ್ವಂಸ ಮಾಡಿದವರ ವಿರುದ್ಧ ನ್ಯಾಯಯುತ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...