Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಕಮ್ರಾಗೆ 2ನೇ ಸಮನ್ಸ್ ನೀಡಿದ ಮುಂಬೈ ಪೊಲೀಸ್

- Advertisement -
- Advertisement -

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮುಂಬೈ ಪೊಲೀಸರು ಬುಧವಾರ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ವಿರುದ್ಧ ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗಲು ಕುನಾಲ್ ಅವರನ್ನು ಕೇಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಅವರು ಯಾವಾಗ ಹಾಜರಾಗಬೇಕು ಎಂಬುದು ಸ್ಪಷ್ಟವಾಗಿಲ್ಲ.

ಮಂಗಳವಾರ ಕುನಾಲ್ ಅವರಿಗೆ ಮೊದಲ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಅವರ ವಿರುದ್ಧದ ಮಾನನಷ್ಟ ಪ್ರಕರಣದ ತನಿಖೆಯನ್ನು ಪ್ರಾರಂಭಿಸುವಂತೆ ಕೋರಿದ್ದರು. ಮೊದಲ ನೋಟಿಸ್ ನಂತರ, ಶಿವಸೇನೆ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಇದೆ ಎಂದು ಉಲ್ಲೇಖಿಸಿ ಕುನಾಲ್ ಅವರು ಪೊಲೀಸರ ಮುಂದೆ ಹಾಜರಾಗಲು ಒಂದು ವಾರದ ಸಮಯ ಕೋರಿದ್ದರು.

ಕೆಲವು ದಿನಗಳ ಹಿಂದೆ ಮುಂಬೈನ ಸ್ಟುಡಿಯೋವೊಂದರಲ್ಲಿ ರೆಕಾರ್ಡ್ ಮಾಡಲಾದ ತಮ್ಮ ಕಾರ್ಯಕ್ರಮದಲ್ಲಿ ಶಿವಸೇನಾ ಮುಖ್ಯಸ್ಥ ಶಿಂಧೆ ವಿರುದ್ಧ ಹಾಸ್ಯನಟ ಕುನಾಲ್ ಕಮ್ರಾ ತೀವ್ರ ಟೀಕೆಗಳನ್ನು ಮಾಡುವ ಮೂಲಕ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ, ಉಪಮುಖ್ಯಮಂತ್ರಿ ಅವರ ರಾಜಕೀಯ ಜೀವನದ ಬಗ್ಗೆ ಕುನಾಲ್ ಟೀಕಿಸಿದ್ದರು. ಅದರಲ್ಲಿ 2022 ರಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ದಂಗೆಯ ವಿಚಾರವೂ ಸೇರಿತ್ತು.

ಶಿಂಧೆ ಅವರನ್ನು “ಗದ್ದರ್” (ದೇಶದ್ರೋಹಿ) ಎಂದು ಉಲ್ಲೇಖಿಸಿ “ದಿಲ್ ತೋ ಪಾಗಲ್ ಹೈ” ಚಿತ್ರದ ಜನಪ್ರಿಯ ಹಿಂದಿ ಹಾಡಿನ ವಿಡಂಬನೆಯನ್ನು ಕುನಾಲ್ ಪ್ರದರ್ಶಿಸಿದ್ದರು. ಶಿವಸೇನೆ (2022) ಮತ್ತು ಎನ್‌ಸಿಪಿ (2023) ವಿಭಜನೆ ಸೇರಿದಂತೆ ಮಹಾರಾಷ್ಟ್ರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅವರು ಹಾಸ್ಯ ಚಟಾಕಿ ಹಾರಿಸಿದ್ದರು.

ಭಾನುವಾರ ರಾತ್ರಿ, ಶಿವಸೇನೆ ಸದಸ್ಯರು ಕುನಾಲ್ ಅವರ ಕಾರ್ಯಕ್ರಮ ನಡೆದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್ ಮತ್ತು ಸ್ಥಳ ಇರುವ ಹೋಟೆಲ್‌ಗೆ ಹಾನಿ ಮಾಡಿದ್ದರು. ಇದರ ನಂತರ ಶಿವಸೇನೆ ಶಾಸಕ ಪಟೇಲ್ ಅವರ ದೂರಿನ ಆಧಾರದ ಮೇಲೆ, ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖಾರ್ ಪೊಲೀಸರು ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈ ನಡುವೆ ಕುನಾಲ್ ಅವರ ಕಾರ್ಯಕ್ರಮ ನಡೆದ ಸ್ಥಳವನ್ನು ಧ್ವಂಸ ಮಾಡಿದ್ದಕ್ಕಾಗಿ ಶಿಂಧೆ ನೇತೃತ್ವದ ಶಿವಸೇನೆಯ 40 ದುಷ್ಕರ್ಮಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೋಮವಾರ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ದರೋಡೆ ಮಾಡಿದ್ದಕ್ಕಾಗಿ ಪೊಲೀಸರು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಮತ್ತು ಇತರ 11 ಜನರನ್ನು ಬಂಧಿಸಿದ್ದಾರೆ. ಅದೇ ದಿನ ಸ್ಥಳೀಯ ನ್ಯಾಯಾಲಯವು ಅವರಿಗೆ ಜಾಮೀನು ನೀಡಿತು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಕಮ್ರಾ ಅವರ ಹಾಸ್ಯವನ್ನು ಖಂಡಿಸಿದರೆ, ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಗಳನ್ನು ಟೀಕಿಸಿದ್ದಾರೆ. ಇದನ್ನು ಅವರು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಅದೇ ರೀತಿ, ಮಹಾರಾಷ್ಟ್ರ ಸರ್ಕಾರವು ಕುನಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಮಂಗಳವಾರದಂದು ಕುನಾಲ್ ಅವರು ಪ್ರದರ್ಶನ ನೀಡಿದ್ದ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನೆ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅದಕ್ಕೂ ಒಂದು ದಿನ ಮೊದಲು ಅವರು ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ ಮತ್ತು ಸಾಯುವವರೆಗೆ ಕಾಯುತ್ತಾ ನನ್ನ ಹಾಸಿಗೆಯ ಕೆಳಗೆ ಅಡಗಿಕೊಳ್ಳುವುದಿಲ್ಲ” ಎಂದು ಹೇಳಿದ್ದರು.

ತನ್ನ ವಿರುದ್ಧ ತೆಗೆದುಕೊಂಡ ಯಾವುದೇ ಕಾನೂನುಬದ್ಧ ಕ್ರಮಕ್ಕೆ ಪೊಲೀಸರು ಮತ್ತು ನ್ಯಾಯಾಲಯಗಳೊಂದಿಗೆ ಸಹಕರಿಸುವುದಾಗಿ ಹೇಳಿರುವ ಕುನಾಲ್, ತನ್ನ ಹಾಸ್ಯ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಸ್ಥಳವನ್ನು ಧ್ವಂಸ ಮಾಡಿದವರ ವಿರುದ್ಧ ನ್ಯಾಯಯುತ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ಚಾಮರಾಜನಗರ ಆಕ್ಸಿಜನ್ ದುರಂತ | ನ್ಯಾ.ಬಿ.ಎ ಪಾಟೀಲ್ ವರದಿ ತಿರಸ್ಕಾರ; ಡಿಸಿಎಂ ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...