Homeಕರ್ನಾಟಕಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

- Advertisement -
- Advertisement -

“ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಮುಸಲ್ಮಾನರಲ್ಲಿ ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಇಂದು (ನ.27) ಅವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಬಾಯಿ ತಪ್ಪಿ ನೀಡಿದ ಹೇಳಿಕೆಯನ್ನು ಬೆಳೆಸದಂತೆ ಮತ್ತು ವಿವಾದವನ್ನು ಕೊನೆಗೊಳಿಸುವಂತೆ ಅವರು ಮುಸ್ಲಿಮರಲ್ಲಿ ಕೇಳಿಕೊಂಡಿದ್ದಾರೆ.

ಚಂದ್ರಶೇಖರ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. “ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ” ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ವಾಮಿ “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು. ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದಿದ್ದರು.

ಈ ಹೇಳಿಕೆ ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿವಾದವು ತೀವ್ರಗೊಳ್ಳುತ್ತಿದ್ದಂತೆ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಕ್ಫ್‌ ಮಂಡಳಿ ರೈತಾಪಿ ಜನಗಳ ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಗಳಲ್ಲಿ ಗಮನಿಸಿದ್ದೆ. ಹಾಗಾಗಿ ರೈತನನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆಯನ್ನಾಗಲಿ ನಾವು ಒಪ್ಪಲಾಗದು. ವಕ್ಫ್‌ ಮಂಡಳಿಗೆ ಅವರು ಹೊಂದಿರುವ ಜಮೀನುಗಳು ಯಾವ ರೀತಿ ಅವರಿಗೆ ಬಂದಿವೆ ಎಂಬುವುದರ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ ಆ ಜಮೀನುಗಳನ್ನು ಅವರು ಉಳಿಸಿಕೊಳ್ಳುವುದರ ಬಗ್ಗೆ ನಮಗೆ ಯಾವುದೇ ಅಭ್ಯಂತರವಿರುವುದಿಲ್ಲ” ಎಂದು ಹೇಳಿದ್ದಾರೆ.

“ಆದರೆ ತಲ ತಲಾಂತರಗಳಿಂದ ಕೃಷಿ ಮಾಡುತ್ತಿರುವ ನಮ್ಮ ರೈತನನ್ನು ವಕ್ಫ್‌ ಮಂಡಳಿಯ ಹೆಸರೇಳಿ ಜಾಗ ಖಾಲಿ ಮಾಡಿಸುವಂತಿಲ್ಲ. ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳಾಗಿದ್ದು, ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿದ್ದೇವೆ. ನಮ್ಮ ಮಠಕ್ಕೆ ಮುಸ್ಲಿಮರು ಸಹ ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾನು ಕೂಡಾ ಸಹ ಮುಸ್ಲಿಮರ ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ ಭಾಗಿಯಾಗಿರುತ್ತೇನೆ. ಆದ್ದರಿ೦ದ ಮುಸ್ಲಿಮರ ಬಗ್ಗೆ ಯಾವುದೇ ಅಸಹಿಷ್ಣುತೆ ನನಗೆ ಇಲ್ಲ” ಎಂದು ತಿಳಿಸಿದ್ದಾರೆ.

“ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ ಆಗಿದ್ದು, ಅವರಿಗೂ ಎಲ್ಲರಂತೆ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ನಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ನಾವು ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಈ ವಿಷಯವನ್ನು ಬೆಳೆಸದಂತೆ ಇಲ್ಲಿಗೆ ಮುಕ್ತಾಯ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ” ಎಂದು ಕೋರಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ನಿನ್ನೆಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ. ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಎನ್ನುತ್ತಾರೆ” ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದರು.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದರು.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಟೀಕಿಸಿದ್ದರು.  ಮತದಾನದ ಹಕ್ಕಿನ

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...