Homeಕರ್ನಾಟಕಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

- Advertisement -
- Advertisement -

“ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಮುಸಲ್ಮಾನರಲ್ಲಿ ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಇಂದು (ನ.27) ಅವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಬಾಯಿ ತಪ್ಪಿ ನೀಡಿದ ಹೇಳಿಕೆಯನ್ನು ಬೆಳೆಸದಂತೆ ಮತ್ತು ವಿವಾದವನ್ನು ಕೊನೆಗೊಳಿಸುವಂತೆ ಅವರು ಮುಸ್ಲಿಮರಲ್ಲಿ ಕೇಳಿಕೊಂಡಿದ್ದಾರೆ.

ಚಂದ್ರಶೇಖರ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. “ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ” ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ವಾಮಿ “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು. ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದಿದ್ದರು.

ಈ ಹೇಳಿಕೆ ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿವಾದವು ತೀವ್ರಗೊಳ್ಳುತ್ತಿದ್ದಂತೆ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಕ್ಫ್‌ ಮಂಡಳಿ ರೈತಾಪಿ ಜನಗಳ ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಗಳಲ್ಲಿ ಗಮನಿಸಿದ್ದೆ. ಹಾಗಾಗಿ ರೈತನನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆಯನ್ನಾಗಲಿ ನಾವು ಒಪ್ಪಲಾಗದು. ವಕ್ಫ್‌ ಮಂಡಳಿಗೆ ಅವರು ಹೊಂದಿರುವ ಜಮೀನುಗಳು ಯಾವ ರೀತಿ ಅವರಿಗೆ ಬಂದಿವೆ ಎಂಬುವುದರ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ ಆ ಜಮೀನುಗಳನ್ನು ಅವರು ಉಳಿಸಿಕೊಳ್ಳುವುದರ ಬಗ್ಗೆ ನಮಗೆ ಯಾವುದೇ ಅಭ್ಯಂತರವಿರುವುದಿಲ್ಲ” ಎಂದು ಹೇಳಿದ್ದಾರೆ.

“ಆದರೆ ತಲ ತಲಾಂತರಗಳಿಂದ ಕೃಷಿ ಮಾಡುತ್ತಿರುವ ನಮ್ಮ ರೈತನನ್ನು ವಕ್ಫ್‌ ಮಂಡಳಿಯ ಹೆಸರೇಳಿ ಜಾಗ ಖಾಲಿ ಮಾಡಿಸುವಂತಿಲ್ಲ. ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳಾಗಿದ್ದು, ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿದ್ದೇವೆ. ನಮ್ಮ ಮಠಕ್ಕೆ ಮುಸ್ಲಿಮರು ಸಹ ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾನು ಕೂಡಾ ಸಹ ಮುಸ್ಲಿಮರ ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ ಭಾಗಿಯಾಗಿರುತ್ತೇನೆ. ಆದ್ದರಿ೦ದ ಮುಸ್ಲಿಮರ ಬಗ್ಗೆ ಯಾವುದೇ ಅಸಹಿಷ್ಣುತೆ ನನಗೆ ಇಲ್ಲ” ಎಂದು ತಿಳಿಸಿದ್ದಾರೆ.

“ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ ಆಗಿದ್ದು, ಅವರಿಗೂ ಎಲ್ಲರಂತೆ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ನಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ನಾವು ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಈ ವಿಷಯವನ್ನು ಬೆಳೆಸದಂತೆ ಇಲ್ಲಿಗೆ ಮುಕ್ತಾಯ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ” ಎಂದು ಕೋರಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ನಿನ್ನೆಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ. ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಎನ್ನುತ್ತಾರೆ” ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದರು.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದರು.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಟೀಕಿಸಿದ್ದರು.  ಮತದಾನದ ಹಕ್ಕಿನ

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...