Homeಕರ್ನಾಟಕಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

- Advertisement -
- Advertisement -

“ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಮುಸಲ್ಮಾನರಲ್ಲಿ ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಇಂದು (ನ.27) ಅವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಬಾಯಿ ತಪ್ಪಿ ನೀಡಿದ ಹೇಳಿಕೆಯನ್ನು ಬೆಳೆಸದಂತೆ ಮತ್ತು ವಿವಾದವನ್ನು ಕೊನೆಗೊಳಿಸುವಂತೆ ಅವರು ಮುಸ್ಲಿಮರಲ್ಲಿ ಕೇಳಿಕೊಂಡಿದ್ದಾರೆ.

ಚಂದ್ರಶೇಖರ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. “ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ” ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ವಾಮಿ “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು. ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದಿದ್ದರು.

ಈ ಹೇಳಿಕೆ ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿವಾದವು ತೀವ್ರಗೊಳ್ಳುತ್ತಿದ್ದಂತೆ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಕ್ಫ್‌ ಮಂಡಳಿ ರೈತಾಪಿ ಜನಗಳ ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಗಳಲ್ಲಿ ಗಮನಿಸಿದ್ದೆ. ಹಾಗಾಗಿ ರೈತನನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆಯನ್ನಾಗಲಿ ನಾವು ಒಪ್ಪಲಾಗದು. ವಕ್ಫ್‌ ಮಂಡಳಿಗೆ ಅವರು ಹೊಂದಿರುವ ಜಮೀನುಗಳು ಯಾವ ರೀತಿ ಅವರಿಗೆ ಬಂದಿವೆ ಎಂಬುವುದರ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ ಆ ಜಮೀನುಗಳನ್ನು ಅವರು ಉಳಿಸಿಕೊಳ್ಳುವುದರ ಬಗ್ಗೆ ನಮಗೆ ಯಾವುದೇ ಅಭ್ಯಂತರವಿರುವುದಿಲ್ಲ” ಎಂದು ಹೇಳಿದ್ದಾರೆ.

“ಆದರೆ ತಲ ತಲಾಂತರಗಳಿಂದ ಕೃಷಿ ಮಾಡುತ್ತಿರುವ ನಮ್ಮ ರೈತನನ್ನು ವಕ್ಫ್‌ ಮಂಡಳಿಯ ಹೆಸರೇಳಿ ಜಾಗ ಖಾಲಿ ಮಾಡಿಸುವಂತಿಲ್ಲ. ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳಾಗಿದ್ದು, ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿದ್ದೇವೆ. ನಮ್ಮ ಮಠಕ್ಕೆ ಮುಸ್ಲಿಮರು ಸಹ ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾನು ಕೂಡಾ ಸಹ ಮುಸ್ಲಿಮರ ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ ಭಾಗಿಯಾಗಿರುತ್ತೇನೆ. ಆದ್ದರಿ೦ದ ಮುಸ್ಲಿಮರ ಬಗ್ಗೆ ಯಾವುದೇ ಅಸಹಿಷ್ಣುತೆ ನನಗೆ ಇಲ್ಲ” ಎಂದು ತಿಳಿಸಿದ್ದಾರೆ.

“ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ ಆಗಿದ್ದು, ಅವರಿಗೂ ಎಲ್ಲರಂತೆ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ನಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ನಾವು ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಈ ವಿಷಯವನ್ನು ಬೆಳೆಸದಂತೆ ಇಲ್ಲಿಗೆ ಮುಕ್ತಾಯ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ” ಎಂದು ಕೋರಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ನಿನ್ನೆಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ. ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಎನ್ನುತ್ತಾರೆ” ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದರು.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದರು.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಟೀಕಿಸಿದ್ದರು.  ಮತದಾನದ ಹಕ್ಕಿನ

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...