Homeಕರ್ನಾಟಕಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

- Advertisement -
- Advertisement -

“ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಮುಸಲ್ಮಾನರಲ್ಲಿ ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಇಂದು (ನ.27) ಅವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಬಾಯಿ ತಪ್ಪಿ ನೀಡಿದ ಹೇಳಿಕೆಯನ್ನು ಬೆಳೆಸದಂತೆ ಮತ್ತು ವಿವಾದವನ್ನು ಕೊನೆಗೊಳಿಸುವಂತೆ ಅವರು ಮುಸ್ಲಿಮರಲ್ಲಿ ಕೇಳಿಕೊಂಡಿದ್ದಾರೆ.

ಚಂದ್ರಶೇಖರ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. “ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ” ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ವಾಮಿ “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು. ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದಿದ್ದರು.

ಈ ಹೇಳಿಕೆ ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿವಾದವು ತೀವ್ರಗೊಳ್ಳುತ್ತಿದ್ದಂತೆ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಕ್ಫ್‌ ಮಂಡಳಿ ರೈತಾಪಿ ಜನಗಳ ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಗಳಲ್ಲಿ ಗಮನಿಸಿದ್ದೆ. ಹಾಗಾಗಿ ರೈತನನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆಯನ್ನಾಗಲಿ ನಾವು ಒಪ್ಪಲಾಗದು. ವಕ್ಫ್‌ ಮಂಡಳಿಗೆ ಅವರು ಹೊಂದಿರುವ ಜಮೀನುಗಳು ಯಾವ ರೀತಿ ಅವರಿಗೆ ಬಂದಿವೆ ಎಂಬುವುದರ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ ಆ ಜಮೀನುಗಳನ್ನು ಅವರು ಉಳಿಸಿಕೊಳ್ಳುವುದರ ಬಗ್ಗೆ ನಮಗೆ ಯಾವುದೇ ಅಭ್ಯಂತರವಿರುವುದಿಲ್ಲ” ಎಂದು ಹೇಳಿದ್ದಾರೆ.

“ಆದರೆ ತಲ ತಲಾಂತರಗಳಿಂದ ಕೃಷಿ ಮಾಡುತ್ತಿರುವ ನಮ್ಮ ರೈತನನ್ನು ವಕ್ಫ್‌ ಮಂಡಳಿಯ ಹೆಸರೇಳಿ ಜಾಗ ಖಾಲಿ ಮಾಡಿಸುವಂತಿಲ್ಲ. ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳಾಗಿದ್ದು, ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿದ್ದೇವೆ. ನಮ್ಮ ಮಠಕ್ಕೆ ಮುಸ್ಲಿಮರು ಸಹ ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾನು ಕೂಡಾ ಸಹ ಮುಸ್ಲಿಮರ ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ ಭಾಗಿಯಾಗಿರುತ್ತೇನೆ. ಆದ್ದರಿ೦ದ ಮುಸ್ಲಿಮರ ಬಗ್ಗೆ ಯಾವುದೇ ಅಸಹಿಷ್ಣುತೆ ನನಗೆ ಇಲ್ಲ” ಎಂದು ತಿಳಿಸಿದ್ದಾರೆ.

“ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ ಆಗಿದ್ದು, ಅವರಿಗೂ ಎಲ್ಲರಂತೆ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ನಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ನಾವು ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಈ ವಿಷಯವನ್ನು ಬೆಳೆಸದಂತೆ ಇಲ್ಲಿಗೆ ಮುಕ್ತಾಯ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ” ಎಂದು ಕೋರಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ನಿನ್ನೆಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ. ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಎನ್ನುತ್ತಾರೆ” ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದರು.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದರು.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಟೀಕಿಸಿದ್ದರು.  ಮತದಾನದ ಹಕ್ಕಿನ

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...