HomeUncategorizedಸಾವರ್ಕರ್ ವಿರುದ್ಧ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಯ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಸಾವರ್ಕರ್ ವಿರುದ್ಧ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಯ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

- Advertisement -
- Advertisement -

ಅಲಹಾಬಾದ್: ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಹೊರಡಿಸಲಾದ ಸಮನ್ಸ್ ಆದೇಶದ ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.

2022ರ ಭಾರತ್ ಜೋಡೋ ಯಾತ್ರೆಯ ರ್ಯಾಲಿಯಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 397 (ಕೆಳ ನ್ಯಾಯಾಲಯದ ದಾಖಲೆಗಳ ಪರಿಶೀಲನೆ) ಅಡಿಯಲ್ಲಿ ಗಾಂಧಿಯವರು ಸೆಷನ್ಸ್ ನ್ಯಾಯಾಧೀಶರನ್ನು ಸಂಪರ್ಕಿಸಲು ಅವಕಾಶವಿದೆ ಎಂದು ಗಮನಿಸಿದ ನಂತರ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಗಾಂಧಿಯವರ ಅರ್ಜಿಯನ್ನು ಪುರಸ್ಕರಿಸಲು ನಿರಾಕರಿಸಿದರು.

ವಕೀಲರಾದ ಪ್ರಾಂಶು ಅಗರ್ವಾಲ್, ಮೊಹಮ್ಮದ್ ಸಮರ್ ಅನ್ಸಾರಿ ಮತ್ತು ಮೊಹಮ್ಮದ್ ಯಾಸಿರ್ ಅಬ್ಬಾಸಿ ರಾಹುಲ್ ಗಾಂಧಿ ಪರವಾಗಿ ವಾದ ಮಂಡಿಸಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಕ್ನೋ ಸೆಷನ್ಸ್ ನ್ಯಾಯಾಲಯವು ಸಮನ್ಸ್ ಆದೇಶವನ್ನು ಅಂಗೀಕರಿಸಿತು.

ಆದೇಶದಲ್ಲಿ ಸಾವರ್ಕರ್ ಪಿಂಚಣಿ ಪಡೆಯುತ್ತಿದ್ದ ಬ್ರಿಟಿಷ್ ಸೇವಕ ಎಂದು ಗಾಂಧಿಯವರು ಹೇಳಿದ್ದಾರೆ ಎಂದು ವಿಚಾರಣಾ ನ್ಯಾಯಾಲಯ ಗಮನಿಸಿದೆ. ಈ ಹೇಳಿಕೆಗಳು ಸಮಾಜದಲ್ಲಿ ದ್ವೇಷ ಮತ್ತು ಕೆಟ್ಟಭಾವನೆಯನ್ನು ಹರಡಿವೆ ಎಂದು ವಿಚಾರಣಾ ನ್ಯಾಯಾಲಯ ಗಮನಿಸಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯವು ಗಾಂಧಿಯವರ ವಿರುದ್ಧ ಮೇಲ್ನೋಟಕ್ಕೆ ಪ್ರಕರಣವಿದೆ ಎಂದು ಕಂಡುಕೊಂಡು ಅವರು ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ. ತರುವಾಯ, ಗಾಂಧಿಯವರು ಸಮನ್ಸ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ವಕೀಲ ನೃಪೇಂದ್ರ ಪಾಂಡೆಯವರು ಅವರ ವಿರುದ್ಧ ದೂರು ದಾಖಲಿಸಿದ ನಂತರ ಗಾಂಧಿಯವರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (ಸಾರ್ವಜನಿಕ ದುಷ್ಕೃತ್ಯ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಸಾವರ್ಕರ್ ಅವರ ಕುರಿತಾದ ಹೇಳಿಕೆಗಳಿಗಾಗಿ ಗಾಂಧಿಯವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲು ಪಾಂಡೆ ಆರಂಭದಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ಅವರನ್ನು ಅರ್ಜಿಯೊಂದಿಗೆ ಸಂಪರ್ಕಿಸಿದ್ದರು.

ನವೆಂಬರ್ 17, 2022ರಂದು ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು ಬ್ರಿಟಿಷರೊಂದಿಗೆ ಸಹಯೋಗಿ ಎಂದು ಉಲ್ಲೇಖಿಸಿದಾಗ ಮತ್ತು ಸರ್ವರ್ಕರ್ ಬ್ರಿಟಿಷರಿಂದ ಪಿಂಚಣಿ ಪಡೆದಿದ್ದಾರೆ ಎಂದು ನೀಡಿದ ಹೇಳಿಕೆಗಳ ಬಗ್ಗೆ ಪಾಂಡೆ ದೂರು ಸಲ್ಲಿಸಿದ್ದಾರೆ. ಸಮಾಜದಲ್ಲಿ ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ ಈ ಹೇಳಿಕೆಗಳನ್ನು ನೀಡಲಾಗಿದೆ ಎಂದು ಪಾಂಡೆ ಪ್ರತಿಪಾದಿಸಿದರು.

ಮಹಾತ್ಮಾ ಗಾಂಧಿಯವರು ಈ ಹಿಂದೆ ಸಾವರ್ಕರ್ ಅವರನ್ನು ದೇಶಭಕ್ತ ಎಂದು ಗುರುತಿಸಿದ್ದರು ಎಂದು ಪಾಂಡೆ ಅವರು ತಮ್ಮ ದೂರಿನಲ್ಲಿ ಪ್ರತಿಪಾದಿಸಿದ್ದಾರೆ. ಜೂನ್ 2023ರಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಂಬರೀಶ್ ಕುಮಾರ್ ಶ್ರೀವಾಸ್ತವ ಅವರು ಪಾಂಡೆ ಅವರ ದೂರನ್ನು ವಜಾಗೊಳಿಸಿದರು, ಇದರಿಂದಾಗಿ ಪಾಂಡೆ ಸೆಷನ್ಸ್ ನ್ಯಾಯಾಲಯದಲ್ಲಿ ಅದನ್ನು ಪ್ರಶ್ನಿಸಿದರು.

ನಂತರ ಸೆಷನ್ಸ್ ನ್ಯಾಯಾಲಯವು ಅರ್ಜಿಯನ್ನು ಅಂಗೀಕರಿಸಿತು ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿಷಯವನ್ನು ಹಿಂತಿರುಗಿಸಿತು, ಅದು ನಂತರ ಗಾಂಧಿಗೆ ಸಮನ್ಸ್ ನೀಡಿತು. ಇತ್ತೀಚೆಗೆ ಲಕ್ನೋ ನ್ಯಾಯಾಲಯವು ಪ್ರಕರಣದಲ್ಲಿ ಗೈರು ಹಾಜರಾಗಿದ್ದಕ್ಕಾಗಿ ರಾಹುಲ್ ಗಾಂಧಿಯ ಮೇಲೆ 200 ರೂ. ದಂಡವನ್ನು ವಿಧಿಸಿತು.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...