Homeಮುಖಪುಟಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

ಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

- Advertisement -
- Advertisement -

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ಅವರ ಮೇಲಿನ ವಿವಾದಾತ್ಮಕ ಟೀಕೆಗೆ ಆಕ್ರೋಶದ ವ್ಯಕ್ತವಾಗುತ್ತಿದ್ದಂತೆಯೇ, 2019 ರಲ್ಲಿ ಸುಪ್ರಿಯಾ ಶ್ರೀನಾಟೆ ಸ್ಪರ್ಧಿಸಿದ್ದ ಮಹಾರಾಜ್‌ಗಂಜ್ ಲೋಕಸಭಾ ಕ್ಷೇತ್ರಕ್ಕೆ ಬೇರೆಯವರ ಹೆಸರನ್ನು ಘೋಷಣೆ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಿಂದ ಸ್ಪರ್ಧಿಸಿದ್ದ ಶ್ರೀನಾಟೆ, ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಈ ಬಾರಿ, ಕಂಗನಾ ರಣಾವತ್ ಕುರಿತ ವಿವಾದಾತ್ಮಕ ಪೋಸ್ಟ್‌ನಿಂದಾಗಿ ಅವರು ಭಾರೀ ರಾಜಕೀಯ ಸುಳಿಯಲ್ಲಿ ಸಿಲುಕಿದ್ದುಮ ಕಾಂಗ್ರೆಸ್ ಅವರ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಆಯ್ಕೆ ಮಾಡಿದೆ.

ಶ್ರೀನಾಟೆ ಅವರು ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರಾಗಿ ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ; ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿಕೊಂಡಿದ್ದಾಗಿ ಅವರು ಹೇಳಿದ್ದು, ತನ್ನ ಬದಲಿಗೆ ಅಭ್ಯರ್ಥಿಯನ್ನು ಸಹ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಶ್ರೀನಾಟೆ ಅವರ ಇನ್‌ಸ್ಟಾಗ್ರಾಂ ಖಾತೆಯಿಂದ ಸೋಮವಾರ, ಕಂಗನಾ ರಣಾವತ್ ಅವರ ಚಿತ್ರ ಮತ್ತು ಅವಹೇಳನಕಾರಿ ಶೀರ್ಷಿಕೆಯೊಂದಿಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್‌ ಮಾಡಲಾಗಿತ್ತು. “ಹಲವಾರು ಜನರು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ; ಅವರಲ್ಲಿ ಒಬ್ಬರು ಅನುಚಿತ ಪೋಸ್ಟ್ ಮಾಡಿದ್ದಾರೆ” ಎಂದು ಅವರು ವಿವಾದದ ನಂತರ ಸ್ಪಷ್ಟಪಡಿಸಿದ್ದಾರೆ.

“ನನಗೆ ಗೊತ್ತಾದ ತಕ್ಷಣ, ನಾನು ಆ ಪೋಸ್ಟ್ ಅನ್ನು ಅಳಿಸಿದ್ದೇನೆ. ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ಚೆನ್ನಾಗಿ ತಿಳಿದಿದೆ, ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ಹೇಳಿದರು. ಹಿಂದಿನ ದಿನ, ಚುನಾವಣಾ ಆಯೋಗವು ಶ್ರೀನಾಟೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು.

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಎಂಟನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಜಾರ್ಖಂಡ್ ಎಂಬ ನಾಲ್ಕು ರಾಜ್ಯಗಳಿಗೆ 14 ಅಭ್ಯರ್ಥಿಗಳನ್ನು ಹೆಸರಿಸಿದೆ. ಪಕ್ಷವು ಇದುವರೆಗೆ 208 ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭಾ ಚುನಾವಣೆ 2024: ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ಗೋವಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...