Homeಮುಖಪುಟಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

ಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

- Advertisement -
- Advertisement -

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ಅವರ ಮೇಲಿನ ವಿವಾದಾತ್ಮಕ ಟೀಕೆಗೆ ಆಕ್ರೋಶದ ವ್ಯಕ್ತವಾಗುತ್ತಿದ್ದಂತೆಯೇ, 2019 ರಲ್ಲಿ ಸುಪ್ರಿಯಾ ಶ್ರೀನಾಟೆ ಸ್ಪರ್ಧಿಸಿದ್ದ ಮಹಾರಾಜ್‌ಗಂಜ್ ಲೋಕಸಭಾ ಕ್ಷೇತ್ರಕ್ಕೆ ಬೇರೆಯವರ ಹೆಸರನ್ನು ಘೋಷಣೆ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಿಂದ ಸ್ಪರ್ಧಿಸಿದ್ದ ಶ್ರೀನಾಟೆ, ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಈ ಬಾರಿ, ಕಂಗನಾ ರಣಾವತ್ ಕುರಿತ ವಿವಾದಾತ್ಮಕ ಪೋಸ್ಟ್‌ನಿಂದಾಗಿ ಅವರು ಭಾರೀ ರಾಜಕೀಯ ಸುಳಿಯಲ್ಲಿ ಸಿಲುಕಿದ್ದುಮ ಕಾಂಗ್ರೆಸ್ ಅವರ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಆಯ್ಕೆ ಮಾಡಿದೆ.

ಶ್ರೀನಾಟೆ ಅವರು ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರಾಗಿ ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ; ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿಕೊಂಡಿದ್ದಾಗಿ ಅವರು ಹೇಳಿದ್ದು, ತನ್ನ ಬದಲಿಗೆ ಅಭ್ಯರ್ಥಿಯನ್ನು ಸಹ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಶ್ರೀನಾಟೆ ಅವರ ಇನ್‌ಸ್ಟಾಗ್ರಾಂ ಖಾತೆಯಿಂದ ಸೋಮವಾರ, ಕಂಗನಾ ರಣಾವತ್ ಅವರ ಚಿತ್ರ ಮತ್ತು ಅವಹೇಳನಕಾರಿ ಶೀರ್ಷಿಕೆಯೊಂದಿಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್‌ ಮಾಡಲಾಗಿತ್ತು. “ಹಲವಾರು ಜನರು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ; ಅವರಲ್ಲಿ ಒಬ್ಬರು ಅನುಚಿತ ಪೋಸ್ಟ್ ಮಾಡಿದ್ದಾರೆ” ಎಂದು ಅವರು ವಿವಾದದ ನಂತರ ಸ್ಪಷ್ಟಪಡಿಸಿದ್ದಾರೆ.

“ನನಗೆ ಗೊತ್ತಾದ ತಕ್ಷಣ, ನಾನು ಆ ಪೋಸ್ಟ್ ಅನ್ನು ಅಳಿಸಿದ್ದೇನೆ. ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ಚೆನ್ನಾಗಿ ತಿಳಿದಿದೆ, ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ಹೇಳಿದರು. ಹಿಂದಿನ ದಿನ, ಚುನಾವಣಾ ಆಯೋಗವು ಶ್ರೀನಾಟೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು.

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಎಂಟನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಜಾರ್ಖಂಡ್ ಎಂಬ ನಾಲ್ಕು ರಾಜ್ಯಗಳಿಗೆ 14 ಅಭ್ಯರ್ಥಿಗಳನ್ನು ಹೆಸರಿಸಿದೆ. ಪಕ್ಷವು ಇದುವರೆಗೆ 208 ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭಾ ಚುನಾವಣೆ 2024: ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ಗೋವಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...