Homeಮುಖಪುಟಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

ಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

- Advertisement -
- Advertisement -

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ಅವರ ಮೇಲಿನ ವಿವಾದಾತ್ಮಕ ಟೀಕೆಗೆ ಆಕ್ರೋಶದ ವ್ಯಕ್ತವಾಗುತ್ತಿದ್ದಂತೆಯೇ, 2019 ರಲ್ಲಿ ಸುಪ್ರಿಯಾ ಶ್ರೀನಾಟೆ ಸ್ಪರ್ಧಿಸಿದ್ದ ಮಹಾರಾಜ್‌ಗಂಜ್ ಲೋಕಸಭಾ ಕ್ಷೇತ್ರಕ್ಕೆ ಬೇರೆಯವರ ಹೆಸರನ್ನು ಘೋಷಣೆ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಿಂದ ಸ್ಪರ್ಧಿಸಿದ್ದ ಶ್ರೀನಾಟೆ, ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಈ ಬಾರಿ, ಕಂಗನಾ ರಣಾವತ್ ಕುರಿತ ವಿವಾದಾತ್ಮಕ ಪೋಸ್ಟ್‌ನಿಂದಾಗಿ ಅವರು ಭಾರೀ ರಾಜಕೀಯ ಸುಳಿಯಲ್ಲಿ ಸಿಲುಕಿದ್ದುಮ ಕಾಂಗ್ರೆಸ್ ಅವರ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಆಯ್ಕೆ ಮಾಡಿದೆ.

ಶ್ರೀನಾಟೆ ಅವರು ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರಾಗಿ ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ; ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿಕೊಂಡಿದ್ದಾಗಿ ಅವರು ಹೇಳಿದ್ದು, ತನ್ನ ಬದಲಿಗೆ ಅಭ್ಯರ್ಥಿಯನ್ನು ಸಹ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಶ್ರೀನಾಟೆ ಅವರ ಇನ್‌ಸ್ಟಾಗ್ರಾಂ ಖಾತೆಯಿಂದ ಸೋಮವಾರ, ಕಂಗನಾ ರಣಾವತ್ ಅವರ ಚಿತ್ರ ಮತ್ತು ಅವಹೇಳನಕಾರಿ ಶೀರ್ಷಿಕೆಯೊಂದಿಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್‌ ಮಾಡಲಾಗಿತ್ತು. “ಹಲವಾರು ಜನರು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ; ಅವರಲ್ಲಿ ಒಬ್ಬರು ಅನುಚಿತ ಪೋಸ್ಟ್ ಮಾಡಿದ್ದಾರೆ” ಎಂದು ಅವರು ವಿವಾದದ ನಂತರ ಸ್ಪಷ್ಟಪಡಿಸಿದ್ದಾರೆ.

“ನನಗೆ ಗೊತ್ತಾದ ತಕ್ಷಣ, ನಾನು ಆ ಪೋಸ್ಟ್ ಅನ್ನು ಅಳಿಸಿದ್ದೇನೆ. ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ಚೆನ್ನಾಗಿ ತಿಳಿದಿದೆ, ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ಹೇಳಿದರು. ಹಿಂದಿನ ದಿನ, ಚುನಾವಣಾ ಆಯೋಗವು ಶ್ರೀನಾಟೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು.

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಎಂಟನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಜಾರ್ಖಂಡ್ ಎಂಬ ನಾಲ್ಕು ರಾಜ್ಯಗಳಿಗೆ 14 ಅಭ್ಯರ್ಥಿಗಳನ್ನು ಹೆಸರಿಸಿದೆ. ಪಕ್ಷವು ಇದುವರೆಗೆ 208 ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭಾ ಚುನಾವಣೆ 2024: ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ಗೋವಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...