Homeಮುಖಪುಟಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

ಕಂಗನಾ ರಣಾವತ್ ಮೇಲಿನ ಹೇಳಿಕೆ ವಿವಾದ; ಮಹಾರಾಜ್‌ಗಂಜ್‌ ಕ್ಷೇತ್ರದಿಂದ ಸುಪ್ರಿಯಾ ಹೆಸರು ಕೈಬಿಟ್ಟ ಕಾಂಗ್ರೆಸ್!

- Advertisement -
- Advertisement -

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ಅವರ ಮೇಲಿನ ವಿವಾದಾತ್ಮಕ ಟೀಕೆಗೆ ಆಕ್ರೋಶದ ವ್ಯಕ್ತವಾಗುತ್ತಿದ್ದಂತೆಯೇ, 2019 ರಲ್ಲಿ ಸುಪ್ರಿಯಾ ಶ್ರೀನಾಟೆ ಸ್ಪರ್ಧಿಸಿದ್ದ ಮಹಾರಾಜ್‌ಗಂಜ್ ಲೋಕಸಭಾ ಕ್ಷೇತ್ರಕ್ಕೆ ಬೇರೆಯವರ ಹೆಸರನ್ನು ಘೋಷಣೆ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಿಂದ ಸ್ಪರ್ಧಿಸಿದ್ದ ಶ್ರೀನಾಟೆ, ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಈ ಬಾರಿ, ಕಂಗನಾ ರಣಾವತ್ ಕುರಿತ ವಿವಾದಾತ್ಮಕ ಪೋಸ್ಟ್‌ನಿಂದಾಗಿ ಅವರು ಭಾರೀ ರಾಜಕೀಯ ಸುಳಿಯಲ್ಲಿ ಸಿಲುಕಿದ್ದುಮ ಕಾಂಗ್ರೆಸ್ ಅವರ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಆಯ್ಕೆ ಮಾಡಿದೆ.

ಶ್ರೀನಾಟೆ ಅವರು ಪಕ್ಷದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರಾಗಿ ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ; ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿಕೊಂಡಿದ್ದಾಗಿ ಅವರು ಹೇಳಿದ್ದು, ತನ್ನ ಬದಲಿಗೆ ಅಭ್ಯರ್ಥಿಯನ್ನು ಸಹ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಶ್ರೀನಾಟೆ ಅವರ ಇನ್‌ಸ್ಟಾಗ್ರಾಂ ಖಾತೆಯಿಂದ ಸೋಮವಾರ, ಕಂಗನಾ ರಣಾವತ್ ಅವರ ಚಿತ್ರ ಮತ್ತು ಅವಹೇಳನಕಾರಿ ಶೀರ್ಷಿಕೆಯೊಂದಿಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್‌ ಮಾಡಲಾಗಿತ್ತು. “ಹಲವಾರು ಜನರು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ; ಅವರಲ್ಲಿ ಒಬ್ಬರು ಅನುಚಿತ ಪೋಸ್ಟ್ ಮಾಡಿದ್ದಾರೆ” ಎಂದು ಅವರು ವಿವಾದದ ನಂತರ ಸ್ಪಷ್ಟಪಡಿಸಿದ್ದಾರೆ.

“ನನಗೆ ಗೊತ್ತಾದ ತಕ್ಷಣ, ನಾನು ಆ ಪೋಸ್ಟ್ ಅನ್ನು ಅಳಿಸಿದ್ದೇನೆ. ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ಚೆನ್ನಾಗಿ ತಿಳಿದಿದೆ, ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ಹೇಳಿದರು. ಹಿಂದಿನ ದಿನ, ಚುನಾವಣಾ ಆಯೋಗವು ಶ್ರೀನಾಟೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು.

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಎಂಟನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಜಾರ್ಖಂಡ್ ಎಂಬ ನಾಲ್ಕು ರಾಜ್ಯಗಳಿಗೆ 14 ಅಭ್ಯರ್ಥಿಗಳನ್ನು ಹೆಸರಿಸಿದೆ. ಪಕ್ಷವು ಇದುವರೆಗೆ 208 ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ; ಲೋಕಸಭಾ ಚುನಾವಣೆ 2024: ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ಗೋವಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...