Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...