Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....