Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...