Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...