Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...