Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...