Homeಮುಖಪುಟಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ...

ಸಿಎಎ ವಿರುದ್ಧ ದನಿಯೆತ್ತಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ…

- Advertisement -
- Advertisement -

ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾಡೆಲ್ಲಾ, ಸಿಎಎ ಭಾರತಕ್ಕೆ ಬೇಡವಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಸಿಎಎ ವಿರೋಧಿ ನಡೆಯುತ್ತಿರುವ ದೊಡ್ಡ ಪ್ರತಿಭಟನೆಗಳ ಮಧ್ಯೆ ಅವರು “ಈಗ ನಡೆಯುತ್ತಿರುವುದು ದುಃಖಕರವಾದ ವಿಷಯವಾಗಿದೆ ಎಂದು ನಾನು ಭಾವಿಸುತ್ತೇನೆ … ಇದು ಕೆಟ್ಟದ್ದಾಗಿದೆ … ಬಾಂಗ್ಲಾದೇಶಿ ವಲಸಿಗನೊಬ್ಬ ಭಾರತಕ್ಕೆ ಬಂದು, ಭಾರತದಲ್ಲಿ ಮುಂದಿನ ಯುನಿಕಾರ್ನ್ ಅನ್ನು ರಚಿಸುವ ಅಥವಾ ಇನ್ಫೋಸಿಸ್‌ನ ಮುಂದಿನ ಸಿಇಒ ಆಗುವುದನ್ನು ನೋಡಲು ನಾನು ಇಷ್ಟಪಡುತ್ತೇನೆ” ಎಂದು ಸತ್ಯ ನಾಡೆಲ್ಲಾ ಬುಜ್‌ಫೀಡ್‌ ಸಂಪಾದಕ ಬೆನ್ ಸ್ಮಿತ್‌ರವರಿಗೆ ಅಮೆರಿಕದಲ್ಲಿ ನಡೆದ ಮೈಕ್ರೋಸಾಫ್ಟ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.

ತದನಂತರ ಮೈಕ್ರೋಸಾಫ್ಟ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಟ್ವೀಟ್‌ ಮಾಡಿದೆ. ಅದರಲ್ಲಿ ಅವರು “ಪ್ರತಿಯೊಂದು ದೇಶವು ತನ್ನ ಗಡಿಗಳನ್ನು ವ್ಯಾಖ್ಯಾನಿಸುತ್ತದೆ, ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ವಲಸೆ ನೀತಿಯನ್ನು ರೂಪಿಸುತ್ತದೆ. ಪ್ರಜಾಪ್ರಭುತ್ವಗಳಲ್ಲಿ, ಜನರು ಮತ್ತು ಅವರ ಸರ್ಕಾರಗಳು ಆ ಮಿತಿಗಳಲ್ಲಿ ಚರ್ಚಿಸಿ ವ್ಯಾಖ್ಯಾನಿಸುತ್ತವೆ. ನನ್ನ ಭಾರತೀಯ ಪರಂಪರೆಯಿಂದ ನಾನು ರೂಪುಗೊಂಡಿದ್ದೇನೆ, ಬಹುಸಾಂಸ್ಕೃತಿಕ ಭಾರತದಲ್ಲಿ ಬೆಳೆದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನನ್ನ ವಲಸೆ ಅನುಭವವಿದೆ. ನನ್ನ ಆಶಯವೆಂದರೆ ವಲಸಿಗನು ಭಾರತದಲ್ಲಿ ಎನ್ನ ಏಳ್ಗೆಯನ್ನು ಬಯಸುವುದು ಅಥವಾ ಭಾರತೀಯ ಸಮಾಜ ಮತ್ತು ಆರ್ಥಿಕತೆಗೆ ಹೆಚ್ಚಿನ ಲಾಭವನ್ನು ನೀಡುವ ಬಹುರಾಷ್ಟ್ರೀಯ ಸಂಸ್ಥೆಯನ್ನು ಮುನ್ನಡೆಸುವುದಾಗಿದೆ” ಎಂದಿದ್ದಾರೆ.

ನಾಡೆಲ್ಲಾ ಅವರ ಅಭಿಪ್ರಾಯವನ್ನು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರು ಬೆಂಬಲಿಸಿದ್ದಾರೆ. “ಸತ್ಯ ನಾಡೆಲ್ಲಾ ಅವರ ಹೇಳಿಕೆಯಿಂದ ನನಗೆ ಖುಷಿಯಾಗಿದೆ. ನಮ್ಮ ಸ್ವಂತ ಐಟಿ ಕಂಪನಿಗಳಲ್ಲಿ ಒಬ್ಬರು ಇದನ್ನು ಮೊದಲು ಹೇಳುವ ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ಅಥವಾ ಈಗಲಾದರು ಅದನ್ನು ಹೇಳಲು ಮುಂದಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೂಗಲ್, ಉಬರ್, ಅಮೆಜಾನ್ ಮತ್ತು ಫೇಸ್‌ಬುಕ್‌ನಂತಹ ಟೆಕ್ ದೈತ್ಯರೊಂದಿಗೆ ಕೆಲಸ ಮಾಡುತ್ತಿರುವ 150 ಕ್ಕೂ ಹೆಚ್ಚು ಭಾರತೀಯ ಮೂಲದ ವೃತ್ತಿಪರರ ಗುಂಪು ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿಯ ವಿರುದ್ಧ ಮುಕ್ತ ಪತ್ರ ಬರೆದಿದ್ದು, ಎರಡೂ ಉಪಕ್ರಮಗಳನ್ನು “ಫ್ಯಾಸಿಸ್ಟ್” ಎಂದು ಕರೆದಿದೆ.

ಆನ್‌ಲೈನ್ ಪಬ್ಲಿಷಿಂಗ್ ಪ್ಲಾಟ್‌ಫಾರ್ಮ್ ಮೀಡಿಯಂನಲ್ಲಿ “ಟೆಕ್ ಅಗೈನ್ಸ್ಟ್ ಫ್ಯಾಸಿಸಂ” ಬರೆದ ಪತ್ರವು ದೊಡ್ಡ ವ್ಯಾಪಾರ ವಹಿವಾಟು ನಾಯಕರಾದ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಕೇಂದ್ರ ಸರ್ಕಾರದ ಕ್ರಮಗಳನ್ನು “ಸಾರ್ವಜನಿಕವಾಗಿ ಖಂಡಿಸಬೇಕು” ಎಂದು ಒತ್ತಾಯಿಸಿದೆ. “ಸಿಎಎ, ಎನ್‌ಆರ್‌ಸಿಯೊಂದಿಗೆ ಸೇರಿ ಆಳವಾದ ಮುಸ್ಲಿಂ ವಿರೋಧಿ ಯೋಜನೆಯಾಗಿದ್ದು, ಇದು ಜಾಗತಿಕ ಅಸಮಾನತೆಯನ್ನು ಉಂಟುಮಾಡುತ್ತದೆ. ಇದು ಭಾರತದ ಆರ್ಥಿಕ ಕುಸಿತ ಮತ್ತು ಹವಾಮಾನ ಬದಲಾವಣೆಯೊಂದಿಗೆ ಕೆಟ್ಟದಾಗಿ ಬೆಳೆಯುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರ ಸಿಎಎ ಹೇಳಿಕೆಯನ್ನು ಬಿಜೆಪಿ ಸಂಸದ ಮೀನಾಕ್ಷಿ ಲೇಖಿ ಅವರು ‘ಸಾಕ್ಷರರು ಶಿಕ್ಷಣ ಪಡೆಯಬೇಕು’ ಎಂದು ಖಂಡಿಸಿದ್ದಾರೆ.

ಇದು ಸಾಕ್ಷರರು ಹೇಗೆ ಶಿಕ್ಷಣ ಪಡೆಯಬೇಕು ಎಂಬುದಕ್ಕೆ ಪರಿಪೂರ್ಣ ಉದಾಹರಣೆ ಎಂದು ಕರೆದ ಲೇಖಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಸಿಎಎ ಅವಕಾಶಗಳನ್ನು ನೀಡಲು ನಿಖರವಾದ ಕಾರಣವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...