Homeಅಂತರಾಷ್ಟ್ರೀಯ'ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ' ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

- Advertisement -
- Advertisement -

ಬಿಜೆಪಿಯನ್ನು ನೆರೆಯ ರಾಷ್ಟ್ರಗಳಾದ ನೇಪಾಳ ಮತ್ತು ಶ್ರೀಲಂಕಾದಲ್ಲೂ ಸಂಘಟಿಸುವ ಯೋಜನೆಯಿದೆ ಎಂದಿರುವ ಅಮಿತ್ ಶಾ ಹೇಳಿಕೆಯ ವಿರುದ್ಧ ನೇಪಾಳವು ಕಳವಳ ವ್ಯಕ್ತಪಡಿಸಿದೆ.

‘ಕಠ್ಮಂಡು ಪೋಸ್ಟ್’ ಪ್ರಕಾರ, “ಭಾರತದ ನೇಪಾಳಿ ರಾಯಭಾರಿ ನಿಲಾಂಬರ್ ಆಚಾರ್ಯ ಅವರು ಭಾರತದ ವಿದೇಶಾಂಗ ಸಚಿವಾಲಯದ ನೇಪಾಳ ಮತ್ತು ಭೂತಾನ್‌ನ ಜಂಟಿ ಕಾರ್ಯದರ್ಶಿ ಅರಿಂದಮ್ ಬಾಗ್‌ಚಿಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ದೇವ್ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ವಿವಿಧ ಸುದ್ದಿ ಮಾಧ್ಯಮಗಳು ವರದಿ ಪ್ರಸಾರ ಮಾಡುತ್ತಿರುವುದು ದುರದೃಷ್ಟಕರ. ಇದಕ್ಕೆ ಸಂಬಂಧಿಸಿದಂತೆ ಗುರುವಾರದ ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭರವಸೆ ನೀಡಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಗರ್ತಲಾದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ, “ಪಕ್ಷವನ್ನು ದೇಶಾದ್ಯಂತ ಮಾತ್ರವಲ್ಲದೆ, ನೆರೆಯ ರಾಷ್ಟ್ರಗಳಲ್ಲೂ ವಿಸ್ತರಿಸುವ ಯೋಜನೆ ಇದೆ. ಗೃಹ ಸಚಿವ ಅಮಿತ್ ಶಾ ಅವರು ನೇಪಾಳ ಮತ್ತು ಶ್ರೀಲಂಕಾದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸುವ ಯೋಜನೆ ಹೊಂದಿದ್ದಾರೆ” ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

“2018ರಲ್ಲಿ ತ್ರಿಪುರಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು, ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗೆದ್ದು ಬಂದ ಬಳಿಕ ವಿದೇಶಗಳಲ್ಲೂ ಪಕ್ಷವನ್ನು ವಿಸ್ತರಿಸುವ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದರು” ಎಂದು ಬಿಪ್ಲವ್ ದೇವ್ ಹೇಳಿದ್ದರು.

ಈ ಹೇಳಿಕೆಯ ವಿರುದ್ಧ ದೇಶದಾದ್ಯಂತ ಖಂಡನೆ ವ್ಯಕ್ತವಾಗಿತ್ತು.

ಇನ್ನು ಈ ಕುರಿತು ಶ್ರೀಲಂಕಾ ಕೂಡ ಪ್ರತಿಕ್ರಿಯಿಸಿದ್ದು, ಶ್ರೀಲಂಕಾ ಚುನಾವಣಾ ಆಯೋಗದ ಅಧ್ಯಕ್ಷ ನಿಮಲ್ ಪುಂಚಿಹೆವಾ ಸೋಮವಾರ, “ದೇಶದ ಚುನಾವಣಾ ಕಾನೂನು ಹೊರಗಿನ ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವುದಿಲ್ಲ. ಶ್ರೀಲಂಕಾದ ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯು ವಿದೇಶದಲ್ಲಿರುವ ಯಾವುದೇ ಪಕ್ಷ ಅಥವಾ ಸಂಘಟನೆಯೊಂದಿಗೆ ಬಾಹ್ಯ ಸಂಪರ್ಕ ಹೊಂದಬಹುದು. ಆದರೆ, ಸಾಗರೋತ್ತರ ರಾಜಕೀಯ ಪಕ್ಷಗಳು ನಮ್ಮ ನೆಲದಲ್ಲಿ ಕಾರ್ಯನಿರ್ವಹಿಸಲು ನಮ್ಮ ಚುನಾವಣಾ ಕಾನೂನುಗಳು ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.


ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಮತ್ತೊಬ್ಬ ಆರೋಪಿ ಶಾಂತನು ಮುಲುಕ್‌ಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...