Homeಕರ್ನಾಟಕ'ಸಂವಿಧಾನ ಬದಲಾವಣೆ' ಹೇಳಿಕೆ; ಹೆಗಡೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ, ಎಂಪಿ ಟಿಕೆಟ್ ಸಿಗುವುದು ಅನುಮಾನ!

‘ಸಂವಿಧಾನ ಬದಲಾವಣೆ’ ಹೇಳಿಕೆ; ಹೆಗಡೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ, ಎಂಪಿ ಟಿಕೆಟ್ ಸಿಗುವುದು ಅನುಮಾನ!

- Advertisement -
- Advertisement -

ಮೂರ್ನಾಲ್ಕು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯವರು, ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಹೊರಗೆ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ನಾಲಿಗೆ ಹರಿಬಿಟ್ಟು ವಿವಾದ ಮಾಡಿಕೊಂಡಿದ್ದ ಹೆಗಡೆ, ಇದೀಗ ಪುನಃ ಸಂವಿಧಾನ ಬದಲಾವಣೆಯ ಮಾತನಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

‘ಸಂವಿಧಾನವನ್ನು ಬದಲಾಯಿಸಲು’ ಪಕ್ಷಕ್ಕೆ 400 ಸ್ಥಾನಗಳು ಬೇಕು ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ನೀಡಿರು ಹೇಳಿಕೆಯು ಅವರಿಗೆ ದುಬಾರಿ ಆಗಲಿದೆಯಾ ಎಂಬ ಮಾತುಗಳು ಕೇಳಿಬರುತ್ತಿವೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ರಾಜ್ಯ ಮತ್ತು ರಾಷ್ಟ್ರೀಯ ಮಾಧ್ಯಮಗಳು ಮೂಲಗಳನ್ನು ಲ್ಲೇಖಿಸಿ ವರದಿ ಮಾಡಿವೆ. ಉತ್ತರ ಕನ್ನಡ ಸಂಸದರ ‘ಸಂವಿಧಾನ ಬದಲಾವಣೆ’ ಹೇಳಿಕೆಗಳಿಂದ ಬಿಜೆಪಿ ನಾಯಕರು ಅಂತರ ಕಾಯ್ದುಕೊಂಡಿದ್ದು, ಅದು ಅವರ ವೈಯಕ್ತಿಕ ಅಭಿಪ್ರಾಯಗಳನ್ನು ಪ್ರತಿಬಿಂಬಿಸುತ್ತದೆಯೇ ಹೊರತು ಪಕ್ಷದ ನಿಲುವು ಅಲ್ಲ ಎಂದು ಹೇಳಿದೆ. ಐದು ಬಾರಿ ಬಿಜೆಪಿ ಸಂಸದರಾಗಿರುವ ಅವರಿಂದ ಪಕ್ಷ ವಿವರಣೆ ಕೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಲ್ಪಸಂಖ್ಯಾತರು ಮತ್ತು ಪ್ರಗತಿಪರರ ಕುರಿತು ತನ್ನ ದ್ವೇಷ ಭಾಷಣಗಳನ್ನು ಪುನರಾವರ್ತಿಸುತ್ತಿರುವ ಹೆಗಡೆ, ಬಿಜೆಪಿ ನಾಯಕತ್ವವನ್ನು ಇಕ್ಕಟ್ಟಿಗೆ ಸಿಲುಕಿಸುವ ರೀತಿ ಹಲವಾರು ಟೀಕೆಗಳನ್ನು ಮಾಡಿದ್ದಾರೆ. ಲೋಕಸಭಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ವರಿಷ್ಠರು ಕಸರತ್ತು ನಡೆಸುತ್ತಿರುವ ಈ ಹೊತ್ತಿನಲ್ಲಿ, ಹೆಗಡೆ ನೀಡಿರುವ ಹೇಳಿಕೆಗಳು ಅವರ ಟಿಕೆಟ್ ಮೇಲೆ ಪರಿಣಾಮ ಬೀರಬಹುದು ಎಂದು ಪಕ್ಷದ ಮೂಲಗಳು ಹೇಳಿವೆ. ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಹೆಗಡೆ ತೀವ್ರ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಬಿಜೆಪಿಯ 195 ಸ್ಥಾನಗಳ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ, ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಹಲವಾರು ಸಂಸದರನ್ನು ಬದಲಾಯಿಸಲಾಗಿದೆ. ಇವರಲ್ಲಿ ದೆಹಲಿ ಸಂಸದರಾದ ರಮೇಶ್ ಬಿಧುರಿ, ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಕೂಡ ಸೇರಿದ್ದಾರೆ.

‘ನಾವು ಗೆಲ್ಲುವುದು ಮುಖ್ಯ; ಆದರೆ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ನಾಯಕತ್ವವನ್ನು ಮುಜುಗರಕ್ಕೀಡು ಮಾಡಿದ ಅಭ್ಯರ್ಥಿಗಳನ್ನು ಪಕ್ಷವು ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಅವರಿಗೆ ಟಿಕೆಟ್ ನಿರಾಕರಿಸುವ ಮೂಲಕ ಸಾರ್ವಜನಿಕ ಜೀವನದಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂಬ ಸಂದೇಶವನ್ನು ರವಾನಿಸುತ್ತದೆ. ಈ ಹಿಂದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದು ಪ್ರಧಾನಿ ಹಲವು ಸಂದರ್ಭಗಳಲ್ಲಿ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದ್ದರು ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಹೆಗ್ಡೆಯವರು ಸಂವಿಧಾನದ ಬದಲಾವಣೆಗೆ ಕರೆ ನೀಡಿದ್ದಾರೆ; ಇದನ್ನು ಜಾರಿಗೆ ತರಲು 543 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದರು. ‘ಹಿಂದೂಗಳನ್ನು ಹತ್ತಿಕ್ಕಲು’ ಕಾಂಗ್ರೆಸ್‌ ಸಂವಿಧಾನವನ್ನು ಬದಲಾಯಿಸಿದೆ ಎಂದು ಆರೋಪಿಸಿದರು.

‘ಕಾಂಗ್ರೆಸ್ ಮೂಲಭೂತವಾಗಿ ಸಂವಿಧಾನದಲ್ಲಿ ಅನಗತ್ಯವಾದ ವಿಷಯಗಳನ್ನು ತುಂಬುವ ಮೂಲಕ ಸಂವಿಧಾನವನ್ನು ವಿರೂಪಗೊಳಿಸಿದೆ. ವಿಶೇಷವಾಗಿ ಹಿಂದೂ ಸಮಾಜವನ್ನು ಹತ್ತಿಕ್ಕುವ ಉದ್ದೇಶದಿಂದ ಕಾನೂನುಗಳನ್ನು ತರುವ ಮೂಲಕ; ಇವೆಲ್ಲವನ್ನೂ ಬದಲಾಯಿಸಬೇಕಾದರೆ, ಸಂವಿಧಾನವನ್ನು ತಿದ್ದುಪಡಿ ಮಾಡಬೇಕಾದರೆ ಈ (ಪ್ರಸ್ತುತ) ಬಹುಮತದಿಂದ ಸಾಧ್ಯವಿಲ್ಲ’ ಎಂದು ಬಿಜೆಪಿ ಸಂಸದರು ಶನಿವಾರ ಬಿಜೆಪಿ ಸಭೆಯಲ್ಲಿ ತಿಳಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ಸಿಗೆ ಬಹುಮತ ಇಲ್ಲದಿರುವುದರಿಂದ ಮತ್ತು (ಪ್ರಧಾನಿ ನರೇಂದ್ರ) ಮೋದಿ ಅವರಿಗೆ ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತವಿರುವುದರಿಂದ ಇದನ್ನು ಮಾಡಬಹುದು ಎಂದು ನಾವು ಭಾವಿಸಿದರೆ ಮತ್ತು ಸುಮ್ಮನಿದ್ದರೆ ಅದು ಸಾಧ್ಯವಿಲ್ಲ. ರಾಜ್ಯಸಭೆ ಮತ್ತು ರಾಜ್ಯಗಳಲ್ಲೂ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

“ಅಬ್ ಕಿ ಬಾರ್ 400 ಪಾರ್ (ಪ್ರಧಾನಿ ನರೇಂದ್ರ) ಮೋದಿ ಹೇಳಿದರು. ನಮಗೆ ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತವಿದೆ, (ಆದರೆ) ರಾಜ್ಯಸಭೆಯಲ್ಲಿ ನಮಗೆ ಮೂರನೇ ಎರಡರಷ್ಟು ಬಹುಮತವಿಲ್ಲ. ಅಲ್ಪ ಬಹುಮತವಿದ್ದು, ರಾಜ್ಯ ಸರ್ಕಾರಗಳಲ್ಲಿ ನಮಗೆ ಸಾಕಷ್ಟು ಬಹುಮತವಿಲ್ಲ’ ಎಂದು ಅವರು ಹೇಳಿದರು.

ಕರ್ನಾಟಕದ ಬಿಜೆಪಿ ಘಟಕವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ‘ಸಂವಿಧಾನದ ಕುರಿತು ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು ಮತ್ತು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಬಿಜೆಪಿ ಪುನರುಚ್ಚರಿಸುತ್ತದೆ’ ಎಂದು ಹೇಳಿದೆ.

ಬಿಜೆಪಿ ನಾಯಕ ಗೌರವ್ ಭಾಟಿಯಾ ಕೂಡ ಹೆಗ್ಡೆಯವರ ಮಾತುಗಳು ಅವರ ವೈಯಕ್ತಿಕ ಅಭಿಪ್ರಾಯಗಳನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ್ದಾರೆ. “ಪಕ್ಷವು ಈ ಹೇಳಿಕೆಯನ್ನು ಗಮನಿಸಿದೆ ಮತ್ತು ಸ್ಪಷ್ಟೀಕರಣವನ್ನು ಕೇಳಿದೆ” ಎಂದು ಭಾಟಿಯಾ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸೀಟು ಹಂಚಿಕೆ

ಬಿಜೆಪಿಯು ತನ್ನ ಮಿತ್ರ ಪಕ್ಷವಾದ ಜನತಾ ದಳ (ಜಾತ್ಯತೀತ) ಜೊತೆ ಕರ್ನಾಟಕದಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲು ಚರ್ಚೆ ನಡೆಸುತ್ತಿರುವ ಸಮಯದಲ್ಲಿ ಹೆಗ್ಡೆಯವರ ಹೇಳಿಕೆಗಳು ಬಂದಿವೆ. 28ರಲ್ಲಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಜೆಡಿಎಸ್ ಕೇಳಿದ್ದರೆ, ಮೂರಕ್ಕಿಂತ ಹೆಚ್ಚು ಸ್ಥಾನ ನೀಡಲು ಬಿಜೆಪಿ ಮನಸ್ಸು ಮಾಡುತ್ತಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಸುಮಾರು 20 ಸ್ಥಾನಗಳಿಗೆ ಹೆಸರುಗಳನ್ನು ಪ್ರಕಟಿಸಬಹುದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪಟ್ಟಿಯಲ್ಲಿ ಸ್ಥಾನ ಪಡೆಯಬಹುದು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಥವಾ ಅವರ ಕುಟುಂಬದ ಸದಸ್ಯರೊಬ್ಬರಿಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಸಿಗಬಹುದು. ಬಿಜೆಪಿ, ಕರ್ನಾಟಕದಲ್ಲಿ 8-10 ಹೊಸ ಮುಖಗಳನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ಹೊಸ ಚುನಾವಣಾ ಆಯುಕ್ತರ ನೇಮಕ: ಅನುಮಾನಗಳಿಗೆ ಕಾರಣವಾದ ಮೋದಿ ಸರ್ಕಾರದ ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...