Homeಕರ್ನಾಟಕಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ; ರಾಜ್ಯ ಬಿಜೆಪಿ ನಾಯಕರನ್ನು 'ಮಲ್ಲಪ್ಪ ಶೆಟ್ಟಿ'ಗೆ ಹೋಲಿಸಿದ ಕಾಂಗ್ರೆಸ್

ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ; ರಾಜ್ಯ ಬಿಜೆಪಿ ನಾಯಕರನ್ನು ‘ಮಲ್ಲಪ್ಪ ಶೆಟ್ಟಿ’ಗೆ ಹೋಲಿಸಿದ ಕಾಂಗ್ರೆಸ್

- Advertisement -
- Advertisement -

ಲೋಕಸಭೆ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದಿಂದ ತೀವ್ರ ಟೀಕೆ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, “ಕರ್ನಾಟಕದ ಸರ್ಕಾರವನ್ನು ಉರುಳಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರ ಸಹಕಾರ ಕೋರಿರುವ ಕರ್ನಾಟಕದ ಬಿಜೆಪಿ ನಾಯಕರನ್ನು ಕಿತ್ತೂರು ರಾಣಿ ಚೆನ್ನಮ್ಮನ ಬೆನ್ನಿಗೆ ಚೂರಿ ಹಾಕಿದ ಮಲ್ಲಪ್ಪ ಶೆಟ್ಟಿಗೆ ಹೋಲಿಸಬಹುದು. ಏಕನಾಥ್ ಶಿಂಧೆ ಅವರೇ, ಈ ಸರ್ಕಾರ ಕನ್ನಡಿಗರ ಸ್ವಾಭಿಮಾನದ ಸರ್ಕಾರ, ಕನ್ನಡಿಗರ ಆಶೀರ್ವಾದದ ಸರ್ಕಾರ, ಕನ್ನಡಿಗರ ಪ್ರೀತಿಯ ಸರ್ಕಾರ. ಕನ್ನಡಿಗರ ತಂಟೆಗೆ ಬರುವ ಮುನ್ನ ವೀರ ರಾಣಿ ಬೆಳವಡಿ ಮಲ್ಲಮರನ್ನು ಒಮ್ಮೆ ನೆನಪು ಮಾಡಿಕೊಳ್ಳಿ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

“ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ಬಿಜೆಪಿಗರ ಹಗಲುಗನಸು. ಈ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬೀಳುವುದು ಕಾಂಗ್ರೆಸ್ ಸರ್ಕಾರವಲ್ಲ, ನರೇಂದ್ರ ಮೋದಿಯವರ ಸರ್ಕಾರ. ಈ ಚುನಾವಣೆಯ ನಂತರ ಅಪಾಯವಿರುವುದು ಬಿಜೆಪಿಯ ವಿರೋಧ ಪಕ್ಷದ ನಾಯಕನ ಕುರ್ಚಿಗೆ ಹೊರತು ಕಾಂಗ್ರೆಸ್ಸಿಗಲ್ಲ. ಈ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೂನ್ಯ ಸಾಧನೆ ಮಾಡುವ ಬಿಜೆಪಿ ನಾಯಕರು ತಮ್ಮ ಹೈಕಮಾಂಡ್ ನಾಯಕರ ಉಗ್ರಾವಾತಾರದ ಕೋಪವನ್ನು ಎದುರಿಸಲು ಸಜ್ಜಾಗಲಿ” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು:

“ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಈಗಾಗಲೇ ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

“ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರ ಸರ್ಕಾರ ಪತನವಾಗಲಿದೆ. ಮೋದಿಯವರು ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು ಏಕೆ? ಉದ್ಧವ್ ಠಾಕ್ರೆ ಅವರಿಗೆ ಅಲ್ಲಿ ಶಕ್ತಿ ಇದೆ ಎಂದರ್ಥವಲ್ಲವೇ? ಪರೇಷನ್ ಕಮಲಕ್ಕೆ ಒಳಗಾಗಿದ್ದ ಶಾಸಕರೆಲ್ಲ ಅಲ್ಲಿ ಯೂಟರ್ನ್ ಆಗಲಿದ್ದಾರೆ. ಮಹಾರಾಷ್ಟ್ರದಲ್ಲಿ ಮತ್ತೆ ನಮ್ಮ ಸರ್ಕಾರ ರಚನೆ ಆಗಲಿದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

“ಕಾಂಗ್ರೆಸ್ ಶಾಸಕರು ಅತೃಪ್ತರಾಗಿದ್ದಾರೆ. ಆದರೆ ಈ ಆಂತರಿಕ ಕಚ್ಚಾಟವು ಸರ್ಕಾರದ ಸ್ಥಿರತೆಗೆ ಧಕ್ಕೆ ತರುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಸ್ಥಿರತೆಯನ್ನು ಎದುರಿಸಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸುಳಿವು ಕುರಿತು ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. “ನಮ್ಮ ಹೋರಾಟವು ಪಕ್ಷದೊಳಗೆ ಇದೆ, ಸಮಸ್ಯೆಗಳಿರಬಹುದು, ಆದರೆ ಅವು ಆಂತರಿಕವಾಗಿವೆ, ಅವುಗಳು ಹೊರಗಡೆ ಸೋರಿಕೆ ಆಗುವುದಿಲ್ಲ” ಎಂದರು.

ಇದನ್ನೂ ಓದಿ; ‘ಆಪರೇಶನ್ ಕಮಲ’ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...