Homeಮುಖಪುಟಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

ಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಕುರಿತು ಹೇಳಿಕೆ ನೀಡಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಿಂದ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಬೂ ಅಝ್ಮಿ ಅವರನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ.

ಕಳೆದ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಾಸಕ ಅಝ್ಮಿ, “ಔರಂಗಜೇಬ್‌ರನ್ನು ಒಬ್ಬ ಕ್ರೂರ ಆಡಳಿತಗಾರ ಎಂದು ನೋಡಬಾರದು, ಬದಲಾಗಿ ದೇವಾಲಯಗಳನ್ನು ನಿರ್ಮಿಸಿದ ಮಹಾನ್ ಆಡಳಿತಗಾರ ಎಂದು ನೋಡಬೇಕು. ಔರಂಗಜೇಬರ ಆಳ್ವಿಕೆಯಲ್ಲಿ, ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೆ (ಈಗ ಮ್ಯಾನ್ಮಾರ್) ವಿಸ್ತರಿಸಿತ್ತು” ಎಂದು ಹೇಳಿದ್ದರು.

ಅಲ್ಲದೆ, “ಛತ್ರಪತಿ ಸಂಭಾಜಿ ಮಹಾರಾಜ್ ಮತ್ತು ಔರಂಗಜೇಬ್ ನಡುವಿನ ಯುದ್ಧವು ಧರ್ಮದ ವಿಷಯಕ್ಕೆ ನಡೆದಿರುವುದು ಎಂದು ನಾನು ನಂಬುವುದಿಲ್ಲ; ಅದೊಂದು ರಾಜಕೀಯ ಯುದ್ಧವಾಗಿತ್ತು” ಎಂದಿದ್ದರು.

ತನ್ನ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ್ದ ಅಝ್ಮಿ, “ಇತಿಹಾಸಕಾರರು ಏನು ಹೇಳಿದ್ದಾರೋ, ಅದನ್ನೇ ನಾನು ಹೇಳಿದ್ದೇನೆ. ಅದು ಛತ್ರಪತಿ ಶಿವಾಜಿ ಮಹಾರಾಜ್ ಅಥವಾ ಸಂಭಾಜಿ ಮಹಾರಾಜ್ ವಿರುದ್ಧ ನೀಡಿದ್ದ ಹೇಳಿಕೆಯಾಗಿರಲಿಲ್ಲ” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಅಝ್ಮಿಯ ಹೇಳಿಕೆಯನ್ನು ಖಂಡಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ‘ಅಝ್ಮಿ ದೇಶದ್ರೋಹಿ’ ಎಂದಿದ್ದರು.

“ಅಝ್ಮಿ ಒಬ್ಬರು ದೇಶದ್ರೋಹಿ. ಅವರಿಗೆ ವಿಧಾನಸಭೆಯಲ್ಲಿ ಕುಳಿತುಕೊಳ್ಳುವ ಹಕ್ಕಿಲ್ಲ. ಅವರು ಯಾವಾಗಲೂ ಛತ್ರಪತಿ ಶಿವಾಜಿ ಮತ್ತು ಸಂಭಾಜಿ ಮಹಾರಾಜರನ್ನು ಅವಮಾನಿಸುತ್ತಲೇ ಬಂದಿದ್ದಾರೆ” ಎಂದು ಶಿಂಧೆ ಕಿಡಿಕಾರಿದ್ದರು.

ಮಂಖುರ್ದ್-ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಝ್ಮಿ “ಛಾವಾ ಸಿನಿಮಾ’ಗೆ ಸಂಬಂಧಿಸಿದಂತೆ ನಾನು ಹೇಳಿಕೆ ನೀಡಿದ್ದೇನೆ ಎಂದರೂ, ಅವರ ವಿರುದ್ದ ಬಿಎನ್‌ಎಸ್‌ ಕಾಯ್ದೆಯಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಮಾನನಷ್ಠೆ ಮೊಕದ್ದಮೆ” ದಾಖಲಿಸಲಾಗಿದೆ.

ಅಬೂ ಅಝ್ಮಿ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವ ಕುರಿತು ಮಾತನಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ತಮ್ಮ ಪಕ್ಷದ ನಾಯಕನ ವಿರುದ್ಧದ ಕ್ರಮವು ‘ಸತ್ಯವನ್ನು ಮೌನಗೊಳಿಸುವ’ ಪ್ರಯತ್ನವಾಗಿದೆ ಎಂದಿದ್ದಾರೆ.

“ಸಿದ್ದಾಂತದ ವಿಚಾರಕ್ಕೆ ಅಮಾನತು ಮಾಡುವುದಾದರೆ ವಾಕ್ ಸ್ವಾತಂತ್ರ್ಯ ಮತ್ತು ತಲೆ ಬಾಗುವುದರ ನಡುವೆ ಏನು ವ್ಯತ್ಯಾಸ ಇರಲಿದೆ? ನಮ್ಮ ಶಾಸಕರು ನಿರ್ಭೀತ ಬುದ್ದಿವಂತರು. ಅಮಾನತು ಸತ್ಯವನ್ನು ಮೌನಗೊಳಿಸಬಹುದು ಎಂದುಕೊಂಡರೆ, ಅದು ಅವರ ಅಪ್ರಭುದ್ದತೆಯಷ್ಟೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...