Homeಮುಖಪುಟಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

ಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಕುರಿತು ಹೇಳಿಕೆ ನೀಡಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಿಂದ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಬೂ ಅಝ್ಮಿ ಅವರನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ.

ಕಳೆದ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಾಸಕ ಅಝ್ಮಿ, “ಔರಂಗಜೇಬ್‌ರನ್ನು ಒಬ್ಬ ಕ್ರೂರ ಆಡಳಿತಗಾರ ಎಂದು ನೋಡಬಾರದು, ಬದಲಾಗಿ ದೇವಾಲಯಗಳನ್ನು ನಿರ್ಮಿಸಿದ ಮಹಾನ್ ಆಡಳಿತಗಾರ ಎಂದು ನೋಡಬೇಕು. ಔರಂಗಜೇಬರ ಆಳ್ವಿಕೆಯಲ್ಲಿ, ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೆ (ಈಗ ಮ್ಯಾನ್ಮಾರ್) ವಿಸ್ತರಿಸಿತ್ತು” ಎಂದು ಹೇಳಿದ್ದರು.

ಅಲ್ಲದೆ, “ಛತ್ರಪತಿ ಸಂಭಾಜಿ ಮಹಾರಾಜ್ ಮತ್ತು ಔರಂಗಜೇಬ್ ನಡುವಿನ ಯುದ್ಧವು ಧರ್ಮದ ವಿಷಯಕ್ಕೆ ನಡೆದಿರುವುದು ಎಂದು ನಾನು ನಂಬುವುದಿಲ್ಲ; ಅದೊಂದು ರಾಜಕೀಯ ಯುದ್ಧವಾಗಿತ್ತು” ಎಂದಿದ್ದರು.

ತನ್ನ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ್ದ ಅಝ್ಮಿ, “ಇತಿಹಾಸಕಾರರು ಏನು ಹೇಳಿದ್ದಾರೋ, ಅದನ್ನೇ ನಾನು ಹೇಳಿದ್ದೇನೆ. ಅದು ಛತ್ರಪತಿ ಶಿವಾಜಿ ಮಹಾರಾಜ್ ಅಥವಾ ಸಂಭಾಜಿ ಮಹಾರಾಜ್ ವಿರುದ್ಧ ನೀಡಿದ್ದ ಹೇಳಿಕೆಯಾಗಿರಲಿಲ್ಲ” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಅಝ್ಮಿಯ ಹೇಳಿಕೆಯನ್ನು ಖಂಡಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ‘ಅಝ್ಮಿ ದೇಶದ್ರೋಹಿ’ ಎಂದಿದ್ದರು.

“ಅಝ್ಮಿ ಒಬ್ಬರು ದೇಶದ್ರೋಹಿ. ಅವರಿಗೆ ವಿಧಾನಸಭೆಯಲ್ಲಿ ಕುಳಿತುಕೊಳ್ಳುವ ಹಕ್ಕಿಲ್ಲ. ಅವರು ಯಾವಾಗಲೂ ಛತ್ರಪತಿ ಶಿವಾಜಿ ಮತ್ತು ಸಂಭಾಜಿ ಮಹಾರಾಜರನ್ನು ಅವಮಾನಿಸುತ್ತಲೇ ಬಂದಿದ್ದಾರೆ” ಎಂದು ಶಿಂಧೆ ಕಿಡಿಕಾರಿದ್ದರು.

ಮಂಖುರ್ದ್-ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಝ್ಮಿ “ಛಾವಾ ಸಿನಿಮಾ’ಗೆ ಸಂಬಂಧಿಸಿದಂತೆ ನಾನು ಹೇಳಿಕೆ ನೀಡಿದ್ದೇನೆ ಎಂದರೂ, ಅವರ ವಿರುದ್ದ ಬಿಎನ್‌ಎಸ್‌ ಕಾಯ್ದೆಯಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಮಾನನಷ್ಠೆ ಮೊಕದ್ದಮೆ” ದಾಖಲಿಸಲಾಗಿದೆ.

ಅಬೂ ಅಝ್ಮಿ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವ ಕುರಿತು ಮಾತನಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ತಮ್ಮ ಪಕ್ಷದ ನಾಯಕನ ವಿರುದ್ಧದ ಕ್ರಮವು ‘ಸತ್ಯವನ್ನು ಮೌನಗೊಳಿಸುವ’ ಪ್ರಯತ್ನವಾಗಿದೆ ಎಂದಿದ್ದಾರೆ.

“ಸಿದ್ದಾಂತದ ವಿಚಾರಕ್ಕೆ ಅಮಾನತು ಮಾಡುವುದಾದರೆ ವಾಕ್ ಸ್ವಾತಂತ್ರ್ಯ ಮತ್ತು ತಲೆ ಬಾಗುವುದರ ನಡುವೆ ಏನು ವ್ಯತ್ಯಾಸ ಇರಲಿದೆ? ನಮ್ಮ ಶಾಸಕರು ನಿರ್ಭೀತ ಬುದ್ದಿವಂತರು. ಅಮಾನತು ಸತ್ಯವನ್ನು ಮೌನಗೊಳಿಸಬಹುದು ಎಂದುಕೊಂಡರೆ, ಅದು ಅವರ ಅಪ್ರಭುದ್ದತೆಯಷ್ಟೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...