Homeಮುಖಪುಟಲಾಕ್‌ಡೌನ್ 4.0 ಮಾರ್ಗಸೂಚಿಗಳನ್ನು ರಾಜ್ಯಗಳು ದುರ್ಬಲಗೊಳಿಸುವಂತಿಲ್ಲ: ಕೇಂದ್ರ ಸರ್ಕಾರ

ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ನು ರಾಜ್ಯಗಳು ದುರ್ಬಲಗೊಳಿಸುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೊರೊನಾ ಲಾಕ್‌ಡೌನ್ 4.0 ಮಾರ್ಗಸೂಚಿಗಳ ಅಡಿಯಲ್ಲಿರುವ ನಿರ್ಬಂಧಗಳನ್ನು ದುರ್ಬಲಗೊಳಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಕೊರೊನಾ ವೈರಸ್ ವಿರುದ್ಧ ಹೋರಾಡಲು ದೇಶವೂ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ನಾಲ್ಕನೇ ಹಂತವನ್ನು ಪ್ರವೇಶಿಸಿದ್ದರಿಂದ ಕೇಂದ್ರ ಸರ್ಕಾರ ಕೊರೊನಾ ಲಾಕ್‌ಡೌನ್ 4.0 ಮಾರ್ಗಸೂಚಿಗಳ ಅಡಿಯಲ್ಲಿ ನಿರ್ಬಂಧಗಳನ್ನು ದುರ್ಬಲಗೊಳಿವುದರ ವಿರುದ್ಧ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

“ನನ್ನ ಹಿಂದಿನ ಪತ್ರಗಳಲ್ಲಿ ಒತ್ತಿಹೇಳಿದಂತೆ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಗೃಹ ಸಚಿವಾಲಯದ ಮಾರ್ಗಸೂಚಿಗಳಲ್ಲಿ ವಿಧಿಸಲಾದ ನಿರ್ಬಂಧಗಳನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ನಾನು ಮತ್ತೆ ಪುನರುಚ್ಚರಿಸಲು ಬಯಸುತ್ತೇನೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ, ವಿವಿಧ ವಲಯಗಳಲ್ಲಿ ಇತರ ಕೆಲವು ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವಿರುವಂತಹ ನಿರ್ಬಂಧಗಳನ್ನು ವಿಧಿಸಬಹುದು ”ಎಂದು ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರದಲ್ಲಿ ತಿಳಿಸಿದ್ದಾರೆ.

ಮೇ 11 ರಂದು ಪ್ರಧಾನಿ ಮೋದಿಯವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಮ್ಮೇಳನದ ನಂತರ ರಾಜ್ಯ ಸರ್ಕಾರಗಳ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡ ನಂತರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಸಚಿವಾಲಯ ಒತ್ತಿಹೇಳಿದೆ.

“ಹೊಸ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅವರ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ನಿರ್ದೇಶಿಸಲು ನಾನು ನಿಮ್ಮೆಲ್ಲರನ್ನೂ ಕೋರುತ್ತೇನೆ” ಎಂದು ಕಾರ್ಯದರ್ಶಿ ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಅಡಿಯಲ್ಲಿ, ಆರೋಗ್ಯ ಸಚಿವಾಲಯ ಹೊರಡಿಸಿದ ಪರಿಷ್ಕೃತ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯಗಳು ಈಗ ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ವರ್ಗೀಕರಿಸುತ್ತವೆ. ಈ ವಲಯಗಳ ಒಳಗೆ, ಕಂಟೈನ್‌ಮೆಂಟ್ ಮತ್ತು ಬಫರ್ ವಲಯಗಳನ್ನು ಜಿಲ್ಲಾಡಳಿತ ಗುರುತಿಸುತ್ತದೆ. ಧಾರಕ ವಲಯಗಳಲ್ಲಿ, ಅಗತ್ಯ ಸೇವೆಗಳನ್ನು ಮಾತ್ರ ಅನುಮತಿಸಲಾಗುತ್ತದೆ.


ಓದಿ: ಕರ್ನಾಟಕದಲ್ಲಿ ಬಹುತೇಕ ಲಾಕ್‌ಡೌನ್‌ ಸಡಿಲಿಕೆ: ಬಸ್, ರೈಲು‌ ಸಂಚಾರಕ್ಕೆ ಅವಕಾಶ


ವಿಡಿಯೊ ನೋಡಿ: ಹಣ ಹೊಂದಿಸಲು ಸರ್ಕಾರಕ್ಕೆ ಸಾಧ್ಯವಿಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...