Homeಮುಖಪುಟಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್

ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್

- Advertisement -
- Advertisement -

ಇನ್ನು ಮುಂದೆ ಅನುಮತಿಯಿಲ್ಲದೆ ಯಾವುದೇ ರಾಜ್ಯಗಳು ಉತ್ತರ ಪ್ರದೇಶದಿಂದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ತಮ್ಮ ರಾಜ್ಯದಿಂದ ವಲಸೆ ಕಾರ್ಮಿಕರನ್ನು ನೇಮಿಸಿಕೊಳ್ಳಲು ಬಯಸುವ ಯಾವುದೇ ರಾಜ್ಯ ಸರ್ಕಾರವು ಮೊದಲು ನಮ್ಮ ಅನುಮತಿ ಪಡೆಯಬೇಕಾಗುತ್ತದೆ. ಸರ್ಕಾರವು ವಲಸಿಗರ ಆಯೋಗವನ್ನು ರಚಿಸುತ್ತದೆ ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದೊಳಗೆ ಉದ್ಯೋಗ ಪಡೆಯಲು ಆಯೋಗ ಇರಬೇಕು ಎಂದು ನಾನು ನನ್ನ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಯೋಗಿ ಆದಿತ್ಯನಾಥ್ ಮಾಧ್ಯಮಗಳೊಂದಿಗೆ ನಡೆದ ಆನ್‌ಲೈನ್ ಸಂವಾದದ ಸಂದರ್ಭದಲ್ಲಿ ಹೇಳಿದ್ದಾರೆ.

“ಬೇರೆ ಯಾವುದಾದರೂ ರಾಜ್ಯವು ಈ ಮಾನವಶಕ್ತಿಯನ್ನು ಬಯಸಿದರೆ, ನಾವು ಅವರಿಗೆ ವಿಮೆ ಮತ್ತು ಸಾಮಾಜಿಕ ಭದ್ರತೆಯನ್ನು ನೀಡುತ್ತೇವೆ. ಆದರೆ ನಮ್ಮ ರಾಜ್ಯದ ಕಾರ್ಮಿಕರನ್ನು ಇತರ ರಾಜ್ಯಗಳಲ್ಲಿ ಹೇಗೆ ನಡೆಸಿಕೊಳ್ಳಲಾಗಿದೆ ಎಂಬ ಕಾರಣದಿಂದಾಗಿ ನಮ್ಮ ಅನುಮತಿಯಿಲ್ಲದೆ ಜನರನ್ನು ಇಲ್ಲಿಂದ ಕರೆದೊಯ್ಯಲು ಸಾಧ್ಯವಾಗುವುದಿಲ್ಲ” ಎಂದು ಅವರು ಹೇಳಿದರು.

ಲಾಕ್ ಡೌನ್ ತೆಗೆದುಹಾಕಿದ ನಂತರ ಮತ್ತು ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಂಡ ನಂತರ ಉತ್ತರ ಪ್ರದೇಶ ಸರ್ಕಾರವು ಹೇಗೆ ಅನುಮತಿ ನೀಡುತ್ತದೆ ಅಥವಾ ಲಕ್ಷಾಂತರ ವಲಸೆ ಕಾರ್ಮಿಕರ ಚಲನೆಯನ್ನು ಹೇಗೆ ಮೇಲ್ವಿಚಾರಣೆ ಮಾಡುತ್ತದೆ ಎಂಬುದನ್ನು ಅವರು ವಿವರಿಸಿಲ್ಲ.

ಲಾಕ್‌ಡೌನ್ ಸರಾಗಗೊಳಿಸುವಿಕೆಯು ಪ್ರಾರಂಭವಾದಾಗಿನಿಂದ, ಕರ್ನಾಟಕದಂತಹ ರಾಜ್ಯಗಳು ವಲಸೆ ಕಾರ್ಮಿಕರನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿವೆ, ನಿರ್ಮಾಣ ಕಾರ್ಯಗಳು ಮತ್ತು ಕೈಗಾರಿಕಾ ಚಟುವಟಿಕೆಗಳು ಪ್ರಾರಂಭವಾದ ನಂತರ ಅವರು ಅಗತ್ಯವೆಂದು ಭಾವಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬರಲಿರುವ ಆಯೋಗವು ವಲಸೆ ಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. “ಅವರು ಎಲ್ಲಿಗೆ ಹೋದರೂ ನಾವು ವಲಸೆ ಕಾರ್ಮಿಕರೊಂದಿಗೆ ನಿಲ್ಲುತ್ತೇವೆ” ಎಂದಿದ್ದಾರೆ. ಈವರೆಗೆ 20 ಲಕ್ಷಕ್ಕೂ ಹೆಚ್ಚು ವಲಸಿಗರು ಇತರ ರಾಜ್ಯಗಳಿಂದ ಉತ್ತರ ಪ್ರದೇಶಕ್ಕೆ ಮರಳಿದ್ದಾರೆ.

ಕರೋನಾ ವೈರಸ್ ಪಾಸಿಟಿವ್ ಆಗಿ ಯುಪಿಗೆ ಮರಳಿದ ವಲಸೆ ಕಾರ್ಮಿಕರು ರಾಜ್ಯದ ಇತರ ರೋಗಿಗಳಿಗಿಂತ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೂ ಇದನ್ನು ಖಚಿತಪಡಿಸಲು ಅವರು ಯಾವುದೇ ಡೇಟಾವನ್ನು ನೀಡಿಲ್ಲ.

“ವಲಸೆ ಕಾರ್ಮಿಕರು ಸೋಂಕನ್ನು ತರುತ್ತಾರೆ ಎಂದು ನಮಗೆ ತಿಳಿದಿದೆ. ಆದರೆ ಕಾರ್ಮಿಕನಿಗೆ ಸೋಂಕಿನ ವಿರುದ್ಧ ಹೋರಾಡುವ ಶಕ್ತಿಯಿದೆ. ನೀವು ಫಲಿತಾಂಶಗಳನ್ನು ನೋಡುತ್ತೀರಿ. ಸಾಮಾನ್ಯ ವ್ಯಕ್ತಿಯು ಗುಣಮುಖರಾಗಲು 14 – 20 ದಿನಗಳನ್ನು ತೆಗೆದುಕೊಳ್ಳುತ್ತಿದ್ದಾನೆ, ಆದರೆ ವಲಸೆ ಕಾರ್ಮಿಕರು ಏಳು ಅಥವಾ ಎಂಟು ದಿನಗಳಲ್ಲಿ ಗುಣಮುಖರಾಗುತ್ತಾರೆ. ಇದು ದೊಡ್ಡ ಶಕ್ತಿ” ಎಂದು ಅವರು ಹೇಳಿದ್ದಾರೆ.

ದೇಶದ 1.3 ಲಕ್ಷ ಕೊರೊನಾವೈರಸ್ ಪ್ರಕರಣಗಳಲ್ಲಿ ಉತ್ತರಪ್ರದೇಶದಲ್ಲಿ ಇದುವರೆಗೆ 6,200 ಕ್ಕೂ ಹೆಚ್ಚು ಪ್ರಕರಣಗಳಿವೆ. ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಮರಳಲು ಪ್ರಾರಂಭಿಸಿದಾಗಿನಿಂದ ಅಲ್ಲಿ ಸಂಖ್ಯೆಗಳು ಹೆಚ್ಚಾಗತೊಡಗಿವೆ. 3,500 ಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದಾರೆ ಮತ್ತು 161 ರೋಗಿಗಳು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಜನಾಕ್ರೋಶಕ್ಕೆ ಮಣಿದ ಯುಪಿ ಸರ್ಕಾರ : ಕಾರ್ಮಿಕರ 12 ಗಂಟೆಗಳ ಕೆಲಸದ ನಿಯಮ ವಾಪಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...