Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...