Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...