Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...