Homeಮುಖಪುಟಜಿಎಸ್‌ಟಿ ಬಗ್ಗೆ ರಾಜ್ಯಗಳ ಭಯ ನಿಜವಾಗಿದೆ: ತಮಿಳುನಾಡು ಹಣಕಾಸು ಸಚಿವ

ಜಿಎಸ್‌ಟಿ ಬಗ್ಗೆ ರಾಜ್ಯಗಳ ಭಯ ನಿಜವಾಗಿದೆ: ತಮಿಳುನಾಡು ಹಣಕಾಸು ಸಚಿವ

- Advertisement -
- Advertisement -

‘ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಯಿಂದ ರಾಜ್ಯಗಳು ಸ್ವಾಯತ್ತತೆ ಕಳೆದುಕೊಳ್ಳುತ್ತದೆ ಎಂಬ ಭಯ ಈಗ ನಿಜವಾಗಿದೆ’, ಎಂದು ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರು ಬುಧವಾರ ಹೇಳಿದ್ದಾರೆ. ಅವರು ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FICCI) ಆಯೋಜಿಸಿದ್ದ, ‘ದಕ್ಷಿಣ ಭಾರತ GST ಕಾನ್ಕ್ಲೇವ್‌’ನಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡುತ್ತಿದ್ದರು.

“ನನಗೆ ಸ್ಪಷ್ಟವಾದ ಒಂದು ವಿಷಯವೇನೆಂದರೆ, ಸ್ವಾಯತ್ತತೆಯ ಕಳೆದುಕೊಳ್ಳುವ ಭಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದೇನೆ. ತೆರಿಗೆ ವಿಧಿಸುವ ವಿಷಯಗಳಲ್ಲಿ ರಾಜ್ಯಗಳಿಗೆ ಈಗ ಬಹಳ ಕಡಿಮೆ ಸ್ವಾತಂತ್ರ್ಯವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

“ದೇಶದ ಕಾನೂನಿನ ಪ್ರಕಾರ, ನಮ್ಮ ಕೆಲಸವನ್ನು ಈಗ ದೃಢವಾಗಿ, ವಿಶ್ವಾಸಾರ್ಹವಾಗಿ, ಸಾಧ್ಯವಾದಷ್ಟು ಹೆಚ್ಚಿನ ಉಪಯುಕ್ತತೆಯನ್ನಾಗಿ ಮಾಡಬೇಕು. ಜಿಎಸ್‌ಟಿಯ ನಿರ್ಬಂಧಗಳ ಒಳಗೆ, ವ್ಯವಸ್ಥೆಗಳ ಸುಧಾರಣೆಯ ವಿಷಯದಲ್ಲಿ ಸಾಕಷ್ಟು ವಿಷಯಗಳು ತಲೆಕೆಳಗಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಕೂಡಾ ತ್ಯಾಗರಾಜನ್‌ ಅವರ ಹೇಳಿಕೆಯನ್ನೇ ಪ್ರತಿಧ್ವನಿಸಿ, ಜಿಎಸ್ಟಿ ಫೆಡರಲಿಸಂನ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. “ಜಿಎಸ್‌ಟಿ ಬಗ್ಗೆ ನಾವು ಏನು ಅಂದುಕೊಂಡಿದ್ದೆವೋ ಅದುವೆ ಪ್ರಾಯೋಗಿಕವಾಗಿ ಆಗುತ್ತಿದೆ” ಎಂದು ಹೇಳಿದ ಅವರು, ಜಿಎಸ್‌ಟಿಯಿಂದಾಗಿ ರಾಜ್ಯ ಸರ್ಕಾರಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. 2022 ರ ಜುಲೈ ತಿಂಗಳಿನಿಂದ ಆದಾಯದ ನಷ್ಟಕ್ಕೆ ರಾಜ್ಯಗಳಿಗೆ ಒಕ್ಕೂಟ ಸರ್ಕಾರದಿಂದ ಪರಿಹಾರ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ನೀತಿ ಮತ್ತು ರಾಜ್ಯಗಳ ಬಗೆಗಿನ ಧೋರಣೆಯನ್ನು ಸಮಸ್ಯೆಯೆಂದು ದೂಷಿಸಿದ ಅವರು, ಬಲಿಷ್ಠ ಆರ್ಥಿಕತೆಗಾಗಿ ಉದ್ಯಮಗಳು ಮತ್ತು ಸರ್ಕಾರ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ: ಲಾಕ್‌ಡೌನ್‌ ನಂತರ ಮೊದಲ ಬಾರಿಗೆ 1.05 ಲಕ್ಷ ಕೋಟಿ ಸಂಗ್ರಹ!

ಕರ್ನಾಟಕ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಅವರು, “ಜಿಎಸ್‌ಟಿಯಲ್ಲಿ ಇನ್ನೂ ಕೆಲವು ಪ್ರಮುಖ ಸಮಸ್ಯೆಗಳಿದ್ದು, ಅದನ್ನು ಪರಿಹರಿಸಬೇಕಾಗಿದೆ” ಎಂದು ಹೇಳಿದ್ದಾರೆ. ಆದರೆ, ಜಿಎಸ್‌ಟಿಯಿಂದಾಗಿ ತೆರಿಗೆ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆ ಉಂಟಾಗಿದೆ. ಇಂತಹ ಪ್ರಮುಖ ತೆರಿಗೆ ಸುಧಾರಣೆಗೆ ನಾಂದಿ ಹಾಡಿದ ಪ್ರಧಾನಿ, ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಮತ್ತು ಜಿಎಸ್‌ಟಿ ಕೌನ್ಸಿಲ್ ಸದಸ್ಯರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಎಫ್ಐಸಿಸಿಐ ತೆಲಂಗಾಣ ಅಧ್ಯಕ್ಷ ಟಿ.ಮುರಳೀಧರನ್ ಅವರು ಮಾತನಾಡಿ, “ಈ ಸಭೆಯು ಜಿಎಸ್‌ಟಿಯಲ್ಲಿ ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಪ್ರಯತ್ನವಾಗಿದೆ. ಜಿಎಸ್‌ಟಿ ಹಂಚಿಕೆ ಸೂತ್ರದಲ್ಲಿ ದಕ್ಷಿಣದ ರಾಜ್ಯಗಳಿಗೆ ಬೃಹತ್‌ ಮಟ್ಟದಲ್ಲಿ ಸೋಲುಂಡಿದೆ” ಎಂದು ಹೇಳಿದ್ದಾರೆ.

ಎಫ್ಐಸಿಸಿಐ ಪ್ರಸ್ತುತ ನಡೆದ ಚರ್ಚೆಯ ಆಧಾರದ ಮೇಲೆ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ.

ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...