Homeಕರ್ನಾಟಕಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

- Advertisement -
- Advertisement -

ಕರ್ನಾಟಕದ ಶಿಶು ಮರಣ ಪ್ರಮಾಣ (IMR) 2021 ರಲ್ಲಿ 17 ರಿಂದ 2022 ರಲ್ಲಿ 15 ಕ್ಕೆ ಎರಡು ಅಂಕಗಳಷ್ಟು ಕುಸಿದಿದೆ ಎಂದು ಕಳೆದ ವಾರ ಬಿಡುಗಡೆಯಾದ ಮಾದರಿ ನೋಂದಣಿ ವ್ಯವಸ್ಥೆಯ ಬುಲೆಟಿನ್ ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಮಾದರಿ ನೋಂದಣಿ ವ್ಯವಸ್ಥೆ (SRS) ಎನ್ನುವುದು ಭಾರತದಲ್ಲಿ ಜನನ ಮತ್ತು ಮರಣಗಳ ದರಗಳನ್ನು ಅಂದಾಜು ಮಾಡಲು ಬಳಸುವ ಒಂದು ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಶಿಶು ಮರಣ ಪ್ರಮಾಣ (IMR) ಎಂದರೆ 1,000 ಜೀವಂತ ಜನನಗಳಿಗೆ ಒಂದು ವರ್ಷದೊಳಗಿನ ಶಿಶುಗಳ ಸಾವಿನ ಸಂಖ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ

ಕರ್ನಾಟಕದಲ್ಲಿ, IMR 2020-22 ರಲ್ಲಿ ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ 50.4 ರಷ್ಟು ಕುಸಿತ ಕಂಡಿದೆ ಎಂದು ವರದಿ ಹೇಳಿದೆ. 2010-12 ರಲ್ಲಿ 34.9 ಇದ್ದ ಐಎಂಆರ್‌ ಸರಾಸರಿ 17.3 ಕ್ಕೆ ಇಳಿದಿದೆ. ಕರ್ನಾಟಕದ ನಗರ ಮತ್ತು ಗ್ರಾಮೀಣ ಪ್ರದೇಶಗಳು ಇದೇ ರೀತಿಯ ಬೆಳವಣಿಗೆಯನ್ನು ಕಂಡಿವೆ, ಸುಮಾರು ಶೇಕಡಾ 50 ರಷ್ಟು ಕುಸಿತ ಕಂಡಿವೆ. ವೈದ್ಯರು ಇದಕ್ಕೆ ಉತ್ತಮ ಆರೋಗ್ಯ ನಿರ್ವಹಣೆ ಮತ್ತು ರಾಜ್ಯದಲ್ಲಿ ಸುಧಾರಿತ ನವಜಾತ ಶಿಶು ಆರೈಕೆ ಕಾರಣ ಎಂದು ಹೇಳುತ್ತಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಪ್ರಮುಖ ನವಜಾತ ಶಿಶುಶಾಸ್ತ್ರಜ್ಞ ಮತ್ತು ಹಿರಿಯ ಸಲಹೆಗಾರ ಡಾ. ರಜತ್ ಆತ್ರೇಯ, ಸರ್ಕಾರಿ ಮತ್ತು ಖಾಸಗಿ ಅರೋಗ್ಯ ಕೇಂದ್ರಗಳು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ಕಳೆದ ಕೆಲವು ವರ್ಷಗಳಿಂದ, ಸಾಂಸ್ಥಿಕ ಹೆರಿಗೆಗಳು ಮತ್ತು ಸುರಕ್ಷಿತ ಹೆರಿಗೆ ಪದ್ಧತಿಗಳು ಹೆಚ್ಚಿವೆ. ಅನೇಕ ಸರ್ಕಾರಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಮತ್ತು ವಿಶೇಷ ನವಜಾತ ಶಿಶು ಆರೈಕೆ ಘಟಕಗಳನ್ನು (SNCU) ಸ್ಥಾಪಿಸಲಾಗಿದೆ. ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳು ಸಹ ಸುಧಾರಿಸಿವೆ” ಎಂದು ಅವರು ಹೇಳಿದ್ದಾರೆ.

ಸೋಂಕು, ಅಕಾಲಿಕ ಜನನಗಳು ಮತ್ತು ಜನ್ಮಜಾತ ದೋಷಗಳು ಶಿಶು ಮರಣದ ಪ್ರಮುಖ ಕಾರಣಗಳು ಇನ್ನೂ ಸವಾಲುಗಳಾಗಿ ಉಳಿದಿವೆ ಎಂದು ಅವರು ಹೇಳಿದ್ದಾರೆ. “ಸೋಂಕುಗಳನ್ನು ನಿಯಂತ್ರಿಸುವ ಮೂಲಕ ಮತ್ತು ಅಕಾಲಿಕ ಶಿಶುಗಳಿಗೆ ಉತ್ತಮ ಆರೈಕೆಯನ್ನು ನೀಡುವ ಮೂಲಕ ಸಾವುಗಳು ಕಡಿಮೆಯಾಗುತ್ತಿವೆ. ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ಖಾಸಗಿ ಸೌಲಭ್ಯಗಳಿಗೆ ಜನರಿಗೆ ಪ್ರವೇಶ ಸುಧಾರಿಸಿದೆ ಮತ್ತು ಲಸಿಕೆ ವ್ಯಾಪ್ತಿಯೂ ಸುಧಾರಿಸಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವುದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಮಾಡಿರುವುದನ್ನು ಪುನರಾವರ್ತಿಸುವ ಮೂಲಕ ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯವನ್ನು ಸುಧಾರಿಸುವುದು ಮತ್ತು ಲಭ್ಯವಿರುವ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದು ಸುಧಾರಣೆಯ ಕ್ಷೇತ್ರಗಳಾಗಿರಬೇಕು ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ.

ನವಜಾತ ಶಿಶು ಮರಣವು ಅತ್ಯಂತ ದೊಡ್ಡ ಕಳವಳಕಾರಿ ವಿಷಯವಾಗಿದೆ ಎಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನವಜಾತ ಶಿಶುಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಮನ್ ರಾವ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2030 ರ ವೇಳೆಗೆ ನವಜಾತ ಶಿಶು ಮರಣವನ್ನು ಒಂದೇ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸಲು ಸರ್ಕಾರದೊಂದಿಗೆ ಸಹಭಾಗಿತ್ವ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವಜಾತ ಶಿಶು ಮರಣ ಪ್ರಮಾಣ, ಅಂದರೆ ಜನನದ 28 ದಿನಗಳಲ್ಲಿ ಸಾಯುವ ಶಿಶುಗಳ ಸಂಖ್ಯೆ, ಒಂದು ಪ್ರಮುಖ ಕಳವಳಕಾರಿ ವಿಷಯವಾಗಿದೆ. 2021 ರಲ್ಲಿ ಭಾರತದ ನವಜಾತ ಶಿಶು ಮರಣ ಪ್ರಮಾಣ(NMR) 19 ರಷ್ಟಿತ್ತು, ಆದರೆ ಕರ್ನಾಟಕದ ಪ್ರಮಾಣ 13 ರಷ್ಟಿತ್ತು. 2022ರಲ್ಲಿ ಇದು ಭಾರತದಾದ್ಯಂತ ಸರಾಸರಿ 19 ರಷ್ಟಿದ್ದರೆ, ಕರ್ನಾಟಕದಲ್ಲಿ 12 ಕ್ಕೆ ಇಳಿದಿದೆ.

ರಾಜ್ಯದಲ್ಲಿ ಕಾಂಗರೂ ತಾಯಿಯ ಆರೈಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಆರೈಕೆಯ ಗುಣಮಟ್ಟದಲ್ಲಿನ ಒಟ್ಟಾರೆ ಸುಧಾರಣೆಯು ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಕಾಂಗರೂ ಆರೈಕೆ ಅಥವಾ ಕಾಂಗರೂ ತಾಯಿಯ ಆರೈಕೆ ಎಂದರೆ ನವಜಾತ ಶಿಶುಗಳನ್ನು ತಾಯಿಯ ಎದೆಯ ಮೇಲೆ ಇರಿಸಿ ಬೆಚ್ಚಗೆ ಇಡುವ ವಿಧಾನ. ಇದು ವಿಶೇಷವಾಗಿ ಕಡಿಮೆ ತೂಕದ ಅಥವಾ ಅಕಾಲಿಕವಾಗಿ ಜನಿಸಿದ ಶಿಶುಗಳಿಗೆ ಬಹಳ ಮುಖ್ಯವಾಗಿದೆ.

“ಅವಧಿಪೂರ್ವ ಜನನವಾದ ಮಹಿಳೆಯರಿಗೆ ಪ್ರಸವಪೂರ್ವ ಕಾರ್ಟಿಕೊಸ್ಟೆರಾಯ್ಡ್‌ಗಳನ್ನು ಸರಿಯಾದ ಸಮದಯದಲ್ಲಿ ನೀಡುವುದನ್ನು ನಾವು ಸುಧಾರಿಸಬೇಕಾಗಿದೆ. ಇದರಿಂದಾಗಿ ಶಿಶುಗಳು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಜನನದ ಸಮಯದಲ್ಲಿ ನವಜಾತ ಶಿಶುಗಳಿಗೆ ನೀಡಲಾಗುವ ಆರೈಕೆ ಸುಧಾರಿಸಬೇಕಾಗಿದೆ. ಪ್ರತಿಯೊಂದು ಹೆರಿಗೆ ಸೌಲಭ್ಯದಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯಾದರೂ ಮೂಲಭೂತ ನವಜಾತ ಶಿಶು ಪುನರುಜ್ಜೀವನದಲ್ಲಿ ತರಬೇತಿ ಪಡೆಯುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕಾರ್ಟಿಕೊಸ್ಟೆರಾಯ್ಡ್‌ಗಳು ಗರ್ಭಿಣಿಯರಿಗೆ ನೀಡಲಾಗುವ ಔಷಧಿಗಳಾಗಿದ್ದು, ಸಾಮಾನ್ಯವಾಗಿ ಇಂಜೆಕ್ಷನ್ ಮೂಲಕ ಇದನ್ನು ನೀಡಲಾಗುತ್ತದೆ. ವಿಶೇಷವಾಗಿ ಅವಧಿಪೂರ್ವ ಜನನದ ಅಪಾಯವಿದ್ದಾಗ, ಇದು ಭ್ರೂಣದಲ್ಲಿ ಶ್ವಾಸಕೋಶದ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಈ ಸ್ಟೀರಾಯ್ಡ್‌ಗಳು ಅವಧಿಪೂರ್ವ ಜನನವಾಗುವ ಶಿಶುಗಳಿಗೆ ಉಸಿರಾಟದ ತೊಂದರೆಗಳು ಮತ್ತು ಇತರ ತೊಡಕುಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಕಳೆದ 10 ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...