Homeಕರ್ನಾಟಕಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

- Advertisement -
- Advertisement -

ಕರ್ನಾಟಕದ ಶಿಶು ಮರಣ ಪ್ರಮಾಣ (IMR) 2021 ರಲ್ಲಿ 17 ರಿಂದ 2022 ರಲ್ಲಿ 15 ಕ್ಕೆ ಎರಡು ಅಂಕಗಳಷ್ಟು ಕುಸಿದಿದೆ ಎಂದು ಕಳೆದ ವಾರ ಬಿಡುಗಡೆಯಾದ ಮಾದರಿ ನೋಂದಣಿ ವ್ಯವಸ್ಥೆಯ ಬುಲೆಟಿನ್ ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಮಾದರಿ ನೋಂದಣಿ ವ್ಯವಸ್ಥೆ (SRS) ಎನ್ನುವುದು ಭಾರತದಲ್ಲಿ ಜನನ ಮತ್ತು ಮರಣಗಳ ದರಗಳನ್ನು ಅಂದಾಜು ಮಾಡಲು ಬಳಸುವ ಒಂದು ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಶಿಶು ಮರಣ ಪ್ರಮಾಣ (IMR) ಎಂದರೆ 1,000 ಜೀವಂತ ಜನನಗಳಿಗೆ ಒಂದು ವರ್ಷದೊಳಗಿನ ಶಿಶುಗಳ ಸಾವಿನ ಸಂಖ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ

ಕರ್ನಾಟಕದಲ್ಲಿ, IMR 2020-22 ರಲ್ಲಿ ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ 50.4 ರಷ್ಟು ಕುಸಿತ ಕಂಡಿದೆ ಎಂದು ವರದಿ ಹೇಳಿದೆ. 2010-12 ರಲ್ಲಿ 34.9 ಇದ್ದ ಐಎಂಆರ್‌ ಸರಾಸರಿ 17.3 ಕ್ಕೆ ಇಳಿದಿದೆ. ಕರ್ನಾಟಕದ ನಗರ ಮತ್ತು ಗ್ರಾಮೀಣ ಪ್ರದೇಶಗಳು ಇದೇ ರೀತಿಯ ಬೆಳವಣಿಗೆಯನ್ನು ಕಂಡಿವೆ, ಸುಮಾರು ಶೇಕಡಾ 50 ರಷ್ಟು ಕುಸಿತ ಕಂಡಿವೆ. ವೈದ್ಯರು ಇದಕ್ಕೆ ಉತ್ತಮ ಆರೋಗ್ಯ ನಿರ್ವಹಣೆ ಮತ್ತು ರಾಜ್ಯದಲ್ಲಿ ಸುಧಾರಿತ ನವಜಾತ ಶಿಶು ಆರೈಕೆ ಕಾರಣ ಎಂದು ಹೇಳುತ್ತಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಪ್ರಮುಖ ನವಜಾತ ಶಿಶುಶಾಸ್ತ್ರಜ್ಞ ಮತ್ತು ಹಿರಿಯ ಸಲಹೆಗಾರ ಡಾ. ರಜತ್ ಆತ್ರೇಯ, ಸರ್ಕಾರಿ ಮತ್ತು ಖಾಸಗಿ ಅರೋಗ್ಯ ಕೇಂದ್ರಗಳು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ಕಳೆದ ಕೆಲವು ವರ್ಷಗಳಿಂದ, ಸಾಂಸ್ಥಿಕ ಹೆರಿಗೆಗಳು ಮತ್ತು ಸುರಕ್ಷಿತ ಹೆರಿಗೆ ಪದ್ಧತಿಗಳು ಹೆಚ್ಚಿವೆ. ಅನೇಕ ಸರ್ಕಾರಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಮತ್ತು ವಿಶೇಷ ನವಜಾತ ಶಿಶು ಆರೈಕೆ ಘಟಕಗಳನ್ನು (SNCU) ಸ್ಥಾಪಿಸಲಾಗಿದೆ. ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳು ಸಹ ಸುಧಾರಿಸಿವೆ” ಎಂದು ಅವರು ಹೇಳಿದ್ದಾರೆ.

ಸೋಂಕು, ಅಕಾಲಿಕ ಜನನಗಳು ಮತ್ತು ಜನ್ಮಜಾತ ದೋಷಗಳು ಶಿಶು ಮರಣದ ಪ್ರಮುಖ ಕಾರಣಗಳು ಇನ್ನೂ ಸವಾಲುಗಳಾಗಿ ಉಳಿದಿವೆ ಎಂದು ಅವರು ಹೇಳಿದ್ದಾರೆ. “ಸೋಂಕುಗಳನ್ನು ನಿಯಂತ್ರಿಸುವ ಮೂಲಕ ಮತ್ತು ಅಕಾಲಿಕ ಶಿಶುಗಳಿಗೆ ಉತ್ತಮ ಆರೈಕೆಯನ್ನು ನೀಡುವ ಮೂಲಕ ಸಾವುಗಳು ಕಡಿಮೆಯಾಗುತ್ತಿವೆ. ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ಖಾಸಗಿ ಸೌಲಭ್ಯಗಳಿಗೆ ಜನರಿಗೆ ಪ್ರವೇಶ ಸುಧಾರಿಸಿದೆ ಮತ್ತು ಲಸಿಕೆ ವ್ಯಾಪ್ತಿಯೂ ಸುಧಾರಿಸಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವುದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಮಾಡಿರುವುದನ್ನು ಪುನರಾವರ್ತಿಸುವ ಮೂಲಕ ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯವನ್ನು ಸುಧಾರಿಸುವುದು ಮತ್ತು ಲಭ್ಯವಿರುವ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದು ಸುಧಾರಣೆಯ ಕ್ಷೇತ್ರಗಳಾಗಿರಬೇಕು ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ.

ನವಜಾತ ಶಿಶು ಮರಣವು ಅತ್ಯಂತ ದೊಡ್ಡ ಕಳವಳಕಾರಿ ವಿಷಯವಾಗಿದೆ ಎಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನವಜಾತ ಶಿಶುಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಮನ್ ರಾವ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2030 ರ ವೇಳೆಗೆ ನವಜಾತ ಶಿಶು ಮರಣವನ್ನು ಒಂದೇ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸಲು ಸರ್ಕಾರದೊಂದಿಗೆ ಸಹಭಾಗಿತ್ವ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವಜಾತ ಶಿಶು ಮರಣ ಪ್ರಮಾಣ, ಅಂದರೆ ಜನನದ 28 ದಿನಗಳಲ್ಲಿ ಸಾಯುವ ಶಿಶುಗಳ ಸಂಖ್ಯೆ, ಒಂದು ಪ್ರಮುಖ ಕಳವಳಕಾರಿ ವಿಷಯವಾಗಿದೆ. 2021 ರಲ್ಲಿ ಭಾರತದ ನವಜಾತ ಶಿಶು ಮರಣ ಪ್ರಮಾಣ(NMR) 19 ರಷ್ಟಿತ್ತು, ಆದರೆ ಕರ್ನಾಟಕದ ಪ್ರಮಾಣ 13 ರಷ್ಟಿತ್ತು. 2022ರಲ್ಲಿ ಇದು ಭಾರತದಾದ್ಯಂತ ಸರಾಸರಿ 19 ರಷ್ಟಿದ್ದರೆ, ಕರ್ನಾಟಕದಲ್ಲಿ 12 ಕ್ಕೆ ಇಳಿದಿದೆ.

ರಾಜ್ಯದಲ್ಲಿ ಕಾಂಗರೂ ತಾಯಿಯ ಆರೈಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಆರೈಕೆಯ ಗುಣಮಟ್ಟದಲ್ಲಿನ ಒಟ್ಟಾರೆ ಸುಧಾರಣೆಯು ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಕಾಂಗರೂ ಆರೈಕೆ ಅಥವಾ ಕಾಂಗರೂ ತಾಯಿಯ ಆರೈಕೆ ಎಂದರೆ ನವಜಾತ ಶಿಶುಗಳನ್ನು ತಾಯಿಯ ಎದೆಯ ಮೇಲೆ ಇರಿಸಿ ಬೆಚ್ಚಗೆ ಇಡುವ ವಿಧಾನ. ಇದು ವಿಶೇಷವಾಗಿ ಕಡಿಮೆ ತೂಕದ ಅಥವಾ ಅಕಾಲಿಕವಾಗಿ ಜನಿಸಿದ ಶಿಶುಗಳಿಗೆ ಬಹಳ ಮುಖ್ಯವಾಗಿದೆ.

“ಅವಧಿಪೂರ್ವ ಜನನವಾದ ಮಹಿಳೆಯರಿಗೆ ಪ್ರಸವಪೂರ್ವ ಕಾರ್ಟಿಕೊಸ್ಟೆರಾಯ್ಡ್‌ಗಳನ್ನು ಸರಿಯಾದ ಸಮದಯದಲ್ಲಿ ನೀಡುವುದನ್ನು ನಾವು ಸುಧಾರಿಸಬೇಕಾಗಿದೆ. ಇದರಿಂದಾಗಿ ಶಿಶುಗಳು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಜನನದ ಸಮಯದಲ್ಲಿ ನವಜಾತ ಶಿಶುಗಳಿಗೆ ನೀಡಲಾಗುವ ಆರೈಕೆ ಸುಧಾರಿಸಬೇಕಾಗಿದೆ. ಪ್ರತಿಯೊಂದು ಹೆರಿಗೆ ಸೌಲಭ್ಯದಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯಾದರೂ ಮೂಲಭೂತ ನವಜಾತ ಶಿಶು ಪುನರುಜ್ಜೀವನದಲ್ಲಿ ತರಬೇತಿ ಪಡೆಯುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕಾರ್ಟಿಕೊಸ್ಟೆರಾಯ್ಡ್‌ಗಳು ಗರ್ಭಿಣಿಯರಿಗೆ ನೀಡಲಾಗುವ ಔಷಧಿಗಳಾಗಿದ್ದು, ಸಾಮಾನ್ಯವಾಗಿ ಇಂಜೆಕ್ಷನ್ ಮೂಲಕ ಇದನ್ನು ನೀಡಲಾಗುತ್ತದೆ. ವಿಶೇಷವಾಗಿ ಅವಧಿಪೂರ್ವ ಜನನದ ಅಪಾಯವಿದ್ದಾಗ, ಇದು ಭ್ರೂಣದಲ್ಲಿ ಶ್ವಾಸಕೋಶದ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಈ ಸ್ಟೀರಾಯ್ಡ್‌ಗಳು ಅವಧಿಪೂರ್ವ ಜನನವಾಗುವ ಶಿಶುಗಳಿಗೆ ಉಸಿರಾಟದ ತೊಂದರೆಗಳು ಮತ್ತು ಇತರ ತೊಡಕುಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಕಳೆದ 10 ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...