Homeಕರ್ನಾಟಕಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

- Advertisement -
- Advertisement -

ಕರ್ನಾಟಕದ ಶಿಶು ಮರಣ ಪ್ರಮಾಣ (IMR) 2021 ರಲ್ಲಿ 17 ರಿಂದ 2022 ರಲ್ಲಿ 15 ಕ್ಕೆ ಎರಡು ಅಂಕಗಳಷ್ಟು ಕುಸಿದಿದೆ ಎಂದು ಕಳೆದ ವಾರ ಬಿಡುಗಡೆಯಾದ ಮಾದರಿ ನೋಂದಣಿ ವ್ಯವಸ್ಥೆಯ ಬುಲೆಟಿನ್ ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಮಾದರಿ ನೋಂದಣಿ ವ್ಯವಸ್ಥೆ (SRS) ಎನ್ನುವುದು ಭಾರತದಲ್ಲಿ ಜನನ ಮತ್ತು ಮರಣಗಳ ದರಗಳನ್ನು ಅಂದಾಜು ಮಾಡಲು ಬಳಸುವ ಒಂದು ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಶಿಶು ಮರಣ ಪ್ರಮಾಣ (IMR) ಎಂದರೆ 1,000 ಜೀವಂತ ಜನನಗಳಿಗೆ ಒಂದು ವರ್ಷದೊಳಗಿನ ಶಿಶುಗಳ ಸಾವಿನ ಸಂಖ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ

ಕರ್ನಾಟಕದಲ್ಲಿ, IMR 2020-22 ರಲ್ಲಿ ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ 50.4 ರಷ್ಟು ಕುಸಿತ ಕಂಡಿದೆ ಎಂದು ವರದಿ ಹೇಳಿದೆ. 2010-12 ರಲ್ಲಿ 34.9 ಇದ್ದ ಐಎಂಆರ್‌ ಸರಾಸರಿ 17.3 ಕ್ಕೆ ಇಳಿದಿದೆ. ಕರ್ನಾಟಕದ ನಗರ ಮತ್ತು ಗ್ರಾಮೀಣ ಪ್ರದೇಶಗಳು ಇದೇ ರೀತಿಯ ಬೆಳವಣಿಗೆಯನ್ನು ಕಂಡಿವೆ, ಸುಮಾರು ಶೇಕಡಾ 50 ರಷ್ಟು ಕುಸಿತ ಕಂಡಿವೆ. ವೈದ್ಯರು ಇದಕ್ಕೆ ಉತ್ತಮ ಆರೋಗ್ಯ ನಿರ್ವಹಣೆ ಮತ್ತು ರಾಜ್ಯದಲ್ಲಿ ಸುಧಾರಿತ ನವಜಾತ ಶಿಶು ಆರೈಕೆ ಕಾರಣ ಎಂದು ಹೇಳುತ್ತಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಪ್ರಮುಖ ನವಜಾತ ಶಿಶುಶಾಸ್ತ್ರಜ್ಞ ಮತ್ತು ಹಿರಿಯ ಸಲಹೆಗಾರ ಡಾ. ರಜತ್ ಆತ್ರೇಯ, ಸರ್ಕಾರಿ ಮತ್ತು ಖಾಸಗಿ ಅರೋಗ್ಯ ಕೇಂದ್ರಗಳು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ಕಳೆದ ಕೆಲವು ವರ್ಷಗಳಿಂದ, ಸಾಂಸ್ಥಿಕ ಹೆರಿಗೆಗಳು ಮತ್ತು ಸುರಕ್ಷಿತ ಹೆರಿಗೆ ಪದ್ಧತಿಗಳು ಹೆಚ್ಚಿವೆ. ಅನೇಕ ಸರ್ಕಾರಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಮತ್ತು ವಿಶೇಷ ನವಜಾತ ಶಿಶು ಆರೈಕೆ ಘಟಕಗಳನ್ನು (SNCU) ಸ್ಥಾಪಿಸಲಾಗಿದೆ. ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳು ಸಹ ಸುಧಾರಿಸಿವೆ” ಎಂದು ಅವರು ಹೇಳಿದ್ದಾರೆ.

ಸೋಂಕು, ಅಕಾಲಿಕ ಜನನಗಳು ಮತ್ತು ಜನ್ಮಜಾತ ದೋಷಗಳು ಶಿಶು ಮರಣದ ಪ್ರಮುಖ ಕಾರಣಗಳು ಇನ್ನೂ ಸವಾಲುಗಳಾಗಿ ಉಳಿದಿವೆ ಎಂದು ಅವರು ಹೇಳಿದ್ದಾರೆ. “ಸೋಂಕುಗಳನ್ನು ನಿಯಂತ್ರಿಸುವ ಮೂಲಕ ಮತ್ತು ಅಕಾಲಿಕ ಶಿಶುಗಳಿಗೆ ಉತ್ತಮ ಆರೈಕೆಯನ್ನು ನೀಡುವ ಮೂಲಕ ಸಾವುಗಳು ಕಡಿಮೆಯಾಗುತ್ತಿವೆ. ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ಖಾಸಗಿ ಸೌಲಭ್ಯಗಳಿಗೆ ಜನರಿಗೆ ಪ್ರವೇಶ ಸುಧಾರಿಸಿದೆ ಮತ್ತು ಲಸಿಕೆ ವ್ಯಾಪ್ತಿಯೂ ಸುಧಾರಿಸಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವುದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಮಾಡಿರುವುದನ್ನು ಪುನರಾವರ್ತಿಸುವ ಮೂಲಕ ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯವನ್ನು ಸುಧಾರಿಸುವುದು ಮತ್ತು ಲಭ್ಯವಿರುವ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದು ಸುಧಾರಣೆಯ ಕ್ಷೇತ್ರಗಳಾಗಿರಬೇಕು ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ.

ನವಜಾತ ಶಿಶು ಮರಣವು ಅತ್ಯಂತ ದೊಡ್ಡ ಕಳವಳಕಾರಿ ವಿಷಯವಾಗಿದೆ ಎಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನವಜಾತ ಶಿಶುಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಮನ್ ರಾವ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2030 ರ ವೇಳೆಗೆ ನವಜಾತ ಶಿಶು ಮರಣವನ್ನು ಒಂದೇ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸಲು ಸರ್ಕಾರದೊಂದಿಗೆ ಸಹಭಾಗಿತ್ವ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವಜಾತ ಶಿಶು ಮರಣ ಪ್ರಮಾಣ, ಅಂದರೆ ಜನನದ 28 ದಿನಗಳಲ್ಲಿ ಸಾಯುವ ಶಿಶುಗಳ ಸಂಖ್ಯೆ, ಒಂದು ಪ್ರಮುಖ ಕಳವಳಕಾರಿ ವಿಷಯವಾಗಿದೆ. 2021 ರಲ್ಲಿ ಭಾರತದ ನವಜಾತ ಶಿಶು ಮರಣ ಪ್ರಮಾಣ(NMR) 19 ರಷ್ಟಿತ್ತು, ಆದರೆ ಕರ್ನಾಟಕದ ಪ್ರಮಾಣ 13 ರಷ್ಟಿತ್ತು. 2022ರಲ್ಲಿ ಇದು ಭಾರತದಾದ್ಯಂತ ಸರಾಸರಿ 19 ರಷ್ಟಿದ್ದರೆ, ಕರ್ನಾಟಕದಲ್ಲಿ 12 ಕ್ಕೆ ಇಳಿದಿದೆ.

ರಾಜ್ಯದಲ್ಲಿ ಕಾಂಗರೂ ತಾಯಿಯ ಆರೈಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಆರೈಕೆಯ ಗುಣಮಟ್ಟದಲ್ಲಿನ ಒಟ್ಟಾರೆ ಸುಧಾರಣೆಯು ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಕಾಂಗರೂ ಆರೈಕೆ ಅಥವಾ ಕಾಂಗರೂ ತಾಯಿಯ ಆರೈಕೆ ಎಂದರೆ ನವಜಾತ ಶಿಶುಗಳನ್ನು ತಾಯಿಯ ಎದೆಯ ಮೇಲೆ ಇರಿಸಿ ಬೆಚ್ಚಗೆ ಇಡುವ ವಿಧಾನ. ಇದು ವಿಶೇಷವಾಗಿ ಕಡಿಮೆ ತೂಕದ ಅಥವಾ ಅಕಾಲಿಕವಾಗಿ ಜನಿಸಿದ ಶಿಶುಗಳಿಗೆ ಬಹಳ ಮುಖ್ಯವಾಗಿದೆ.

“ಅವಧಿಪೂರ್ವ ಜನನವಾದ ಮಹಿಳೆಯರಿಗೆ ಪ್ರಸವಪೂರ್ವ ಕಾರ್ಟಿಕೊಸ್ಟೆರಾಯ್ಡ್‌ಗಳನ್ನು ಸರಿಯಾದ ಸಮದಯದಲ್ಲಿ ನೀಡುವುದನ್ನು ನಾವು ಸುಧಾರಿಸಬೇಕಾಗಿದೆ. ಇದರಿಂದಾಗಿ ಶಿಶುಗಳು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಜನನದ ಸಮಯದಲ್ಲಿ ನವಜಾತ ಶಿಶುಗಳಿಗೆ ನೀಡಲಾಗುವ ಆರೈಕೆ ಸುಧಾರಿಸಬೇಕಾಗಿದೆ. ಪ್ರತಿಯೊಂದು ಹೆರಿಗೆ ಸೌಲಭ್ಯದಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯಾದರೂ ಮೂಲಭೂತ ನವಜಾತ ಶಿಶು ಪುನರುಜ್ಜೀವನದಲ್ಲಿ ತರಬೇತಿ ಪಡೆಯುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕಾರ್ಟಿಕೊಸ್ಟೆರಾಯ್ಡ್‌ಗಳು ಗರ್ಭಿಣಿಯರಿಗೆ ನೀಡಲಾಗುವ ಔಷಧಿಗಳಾಗಿದ್ದು, ಸಾಮಾನ್ಯವಾಗಿ ಇಂಜೆಕ್ಷನ್ ಮೂಲಕ ಇದನ್ನು ನೀಡಲಾಗುತ್ತದೆ. ವಿಶೇಷವಾಗಿ ಅವಧಿಪೂರ್ವ ಜನನದ ಅಪಾಯವಿದ್ದಾಗ, ಇದು ಭ್ರೂಣದಲ್ಲಿ ಶ್ವಾಸಕೋಶದ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಈ ಸ್ಟೀರಾಯ್ಡ್‌ಗಳು ಅವಧಿಪೂರ್ವ ಜನನವಾಗುವ ಶಿಶುಗಳಿಗೆ ಉಸಿರಾಟದ ತೊಂದರೆಗಳು ಮತ್ತು ಇತರ ತೊಡಕುಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಕಳೆದ 10 ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...