Homeಕರ್ನಾಟಕಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು: ಡಿ ಎನ್‌ ಗುರುಪ್ರಸಾದ್

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು: ಡಿ ಎನ್‌ ಗುರುಪ್ರಸಾದ್

- Advertisement -
- Advertisement -

“ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು. ಕೇಂದ್ರ ಸರ್ಕಾರ ತಮ್ಮ ನೀತಿಗಳನ್ನು ರಾಜ್ಯಗಳ ಮೇಲೆ ಹೇರಬಾರದು” ಎಂದು ಪತ್ರಕರ್ತ ಡಿ ಎನ್‌ ಗುರುಪ್ರಸಾದ್‌ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಆಯೋಜಿಸಿರುವ ಎರಡು ದಿನಗಳ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ, ಭಾರತದ ಸಂವಿಧಾನ ರಚನೆಯ ಅಮೃತಮಹೋತ್ಸವ ಸಮಾರಂಭದಲ್ಲಿ’ ಒಕ್ಕೂಟ ವ್ಯವಸ್ಥೆಯಲ್ಲಿನ ಅಂತರಗಳ ಸಮತೋಲನಾ ಆಯಾಮಗಳು’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“22 ಭಾಷೆಗಳನ್ನು ಅಧಿಕೃತ ಭಾಷಾ ಪಟ್ಟಿಯಲ್ಲಿ ಸೇರಿಸಲಾಯಿತು. ತದನಂತರ ಎಂಟು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಯಿತು. ಇನ್ನೂ ಅನೇಕ ಭಾಷೆಗಳು ಶಾಸ್ತ್ರೀಯ ಸ್ಥಾನಮಾನಕ್ಕೆ ಹೊರಟಿವೆ. ಆದರೆ, ನಮ್ಮ ಸಂವಿಧಾನ ಸಮಾನತೆಯ ತಳಹದಿಯ ಮೇಲೆ ಇದೆ. ಎಲ್ಲ ಭಾಷೆಗಳು ಶಾಸ್ತ್ರೀಯ ಭಾಷೆಗಳೇ” ಎಂದು ಹೇಳಿದರು.

“ಹಿಂದಿಯನ್ನು ರಾಷ್ಟ್ರಭಾಷೆ ಮಾಡಬೇಕು ಎಂಬುದರ ವಿರುದ್ಧ ತಮಿಳುನಾಡು ದೊಡ್ಡಮಟ್ಟದಲ್ಲಿ ಪ್ರತಿಭಟಿಸಿತು. ಆದರೆ ಸಂವಿಧಾನದಲ್ಲಿ ಒಂದು ಆರ್ಟಿಕಲ್ ಹಿಂದಿಯನ್ನು ಪ್ರಮೋಟ್ ಮಾಡಬೇಕೆಂಬ ಅಂಶವನ್ನು ಹೊಂದಿದೆ. ಇದರ ವಿರುದ್ಧ ದಿಟ್ಟ ನಿಲುವನ್ನು ತೆಗೆದುಕೊಳ್ಳಲು ಈ ವರೆಗೂ ಆಗಿಲ್ಲ. ಹಿಂದಿ ಹೇರಿಕೆ ವಿರುದ್ಧ ಹೋರಾಡಿದರೂ ಕೂಡ ಸಣ್ಣ ಸಣ್ಣ ಭಾಷೆಗಳನ್ನು ಅದು ಒಳಗೊಂಡಿದೆಯಾ ಎಂಬುದನ್ನು ನೋಡಬೇಕಾಗುತ್ತದೆ. ಕರ್ನಾಟಕದಲ್ಲೂ ಇದು ಆಗುವ ಸಾಧ್ಯತೆ ಇದೆ. ಇಲ್ಲಿ ಯಾರೋ ತಮಿಳು, ತೆಲುಗು ಕಲಿಯಬೇಕು ಎಂದಾಗ ಆಗುತ್ತಿಲ್ಲ ಎಂದರು.

“ರಾಜ್ಯ ಸರ್ಕಾರದ ಪ್ರತಿನಿಧಿಗಳು ರಾಜ್ಯಸಭೆಯಲ್ಲಿ ಚರ್ಚೆ ಮಾಡಬೇಕು. ಆಯಾ ರಾಜ್ಯಗಳ ಸಂಗತಿಗಳನ್ನು ಚರ್ಚಿಸಬೇಕು. ಈಗ ರಾಜ್ಯಗಳ ಹಿತಾಸಕ್ತಿಯನ್ನು ಕಳೆದುಕೊಂಡು ಪಕ್ಷದ ಹಿತಾಸಕ್ತಿಯನ್ನೇ ನೋಡುತ್ತಿರುವವರನ್ನು ಕಾಣುತ್ತಿದ್ದೇವೆ. ಮೊದಲೆಲ್ಲ ಆಯಾ ರಾಜ್ಯದ ಪ್ರತಿನಿಧಿಗಳಾಗಬೇಕಾದವರು ಆಯಾ ರಾಜ್ಯದ ನಿವಾಸಿಯಾಗಿರಬೇಕು ಎಂಬ ನಿಯಮವಿತ್ತು. ಆದರೆ 2003ರಲ್ಲಿ ತಿದ್ದುಪಡಿ ತಂದು ಯಾರು ಎಲ್ಲಿಂದ ಬೇಕಾದರೂ ಆಯ್ಕೆಯಾಗಬಹುದು ಎಂಬ ನಿಯಮ ತಂದಿದ್ದಾರೆ. ಹೀಗಾಗಿ ಇಲ್ಲಿಂದ ನಿರ್ಮಲಾ ಸೀತಾರಾಮನ್ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

“ಕ್ಷೇತ್ರ ಮರು ವಿಂಗಡಣೆ ಪ್ರಶ್ನೆ ಬಂದಾಗ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಇಲ್ಲಿನ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹೆಚ್ಚಿದ್ದರೆ, ಅವರಿಗೆ ಎಷ್ಟು ಸ್ಥಾನ ಸಿಗುತ್ತದೆ ಎಂಬುವುದನ್ನು ನೋಡಬೇಕಾಗುತ್ತದೆ”.

“ಒಂದು ರಾಷ್ಟ್ರ ಒಂದು ಚುನಾವಣೆ’ ಎನ್ನುತ್ತಿದ್ದಾರೆ. ಇದು ಒಕ್ಕೂಟ ತತ್ವದ ಮೇಲೆ ಹಲ್ಲೆಯಲ್ಲದೆ ಮತ್ತೇನೂ ಅಲ್ಲ. ಇದು ಯಾವತ್ತೂ ಆಗದಂತೆ ನೋಡಿಕೊಳ್ಳಬೇಕಿದೆ. ಈಗ ಚುನಾವಣೆ ಬರುತ್ತಿದೆ. ಬಿಜೆಪಿ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಸಲ್ಲಿಸಲಿಲ್ಲ. ಕನಿಷ್ಠ ಪಕ್ಷ ಇಂಡಿಯಾ ಮೈತ್ರಿ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ, ಒಕ್ಕೂಟ ವ್ಯವಸ್ಥೆ ಕಾಪಾಡುತ್ತೇವೆ ಎಂಬುವುದನ್ನು ಸೇರಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...