Homeಕರ್ನಾಟಕಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು: ಡಿ ಎನ್‌ ಗುರುಪ್ರಸಾದ್

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು: ಡಿ ಎನ್‌ ಗುರುಪ್ರಸಾದ್

- Advertisement -
- Advertisement -

“ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು. ಕೇಂದ್ರ ಸರ್ಕಾರ ತಮ್ಮ ನೀತಿಗಳನ್ನು ರಾಜ್ಯಗಳ ಮೇಲೆ ಹೇರಬಾರದು” ಎಂದು ಪತ್ರಕರ್ತ ಡಿ ಎನ್‌ ಗುರುಪ್ರಸಾದ್‌ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಆಯೋಜಿಸಿರುವ ಎರಡು ದಿನಗಳ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ, ಭಾರತದ ಸಂವಿಧಾನ ರಚನೆಯ ಅಮೃತಮಹೋತ್ಸವ ಸಮಾರಂಭದಲ್ಲಿ’ ಒಕ್ಕೂಟ ವ್ಯವಸ್ಥೆಯಲ್ಲಿನ ಅಂತರಗಳ ಸಮತೋಲನಾ ಆಯಾಮಗಳು’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“22 ಭಾಷೆಗಳನ್ನು ಅಧಿಕೃತ ಭಾಷಾ ಪಟ್ಟಿಯಲ್ಲಿ ಸೇರಿಸಲಾಯಿತು. ತದನಂತರ ಎಂಟು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಯಿತು. ಇನ್ನೂ ಅನೇಕ ಭಾಷೆಗಳು ಶಾಸ್ತ್ರೀಯ ಸ್ಥಾನಮಾನಕ್ಕೆ ಹೊರಟಿವೆ. ಆದರೆ, ನಮ್ಮ ಸಂವಿಧಾನ ಸಮಾನತೆಯ ತಳಹದಿಯ ಮೇಲೆ ಇದೆ. ಎಲ್ಲ ಭಾಷೆಗಳು ಶಾಸ್ತ್ರೀಯ ಭಾಷೆಗಳೇ” ಎಂದು ಹೇಳಿದರು.

“ಹಿಂದಿಯನ್ನು ರಾಷ್ಟ್ರಭಾಷೆ ಮಾಡಬೇಕು ಎಂಬುದರ ವಿರುದ್ಧ ತಮಿಳುನಾಡು ದೊಡ್ಡಮಟ್ಟದಲ್ಲಿ ಪ್ರತಿಭಟಿಸಿತು. ಆದರೆ ಸಂವಿಧಾನದಲ್ಲಿ ಒಂದು ಆರ್ಟಿಕಲ್ ಹಿಂದಿಯನ್ನು ಪ್ರಮೋಟ್ ಮಾಡಬೇಕೆಂಬ ಅಂಶವನ್ನು ಹೊಂದಿದೆ. ಇದರ ವಿರುದ್ಧ ದಿಟ್ಟ ನಿಲುವನ್ನು ತೆಗೆದುಕೊಳ್ಳಲು ಈ ವರೆಗೂ ಆಗಿಲ್ಲ. ಹಿಂದಿ ಹೇರಿಕೆ ವಿರುದ್ಧ ಹೋರಾಡಿದರೂ ಕೂಡ ಸಣ್ಣ ಸಣ್ಣ ಭಾಷೆಗಳನ್ನು ಅದು ಒಳಗೊಂಡಿದೆಯಾ ಎಂಬುದನ್ನು ನೋಡಬೇಕಾಗುತ್ತದೆ. ಕರ್ನಾಟಕದಲ್ಲೂ ಇದು ಆಗುವ ಸಾಧ್ಯತೆ ಇದೆ. ಇಲ್ಲಿ ಯಾರೋ ತಮಿಳು, ತೆಲುಗು ಕಲಿಯಬೇಕು ಎಂದಾಗ ಆಗುತ್ತಿಲ್ಲ ಎಂದರು.

“ರಾಜ್ಯ ಸರ್ಕಾರದ ಪ್ರತಿನಿಧಿಗಳು ರಾಜ್ಯಸಭೆಯಲ್ಲಿ ಚರ್ಚೆ ಮಾಡಬೇಕು. ಆಯಾ ರಾಜ್ಯಗಳ ಸಂಗತಿಗಳನ್ನು ಚರ್ಚಿಸಬೇಕು. ಈಗ ರಾಜ್ಯಗಳ ಹಿತಾಸಕ್ತಿಯನ್ನು ಕಳೆದುಕೊಂಡು ಪಕ್ಷದ ಹಿತಾಸಕ್ತಿಯನ್ನೇ ನೋಡುತ್ತಿರುವವರನ್ನು ಕಾಣುತ್ತಿದ್ದೇವೆ. ಮೊದಲೆಲ್ಲ ಆಯಾ ರಾಜ್ಯದ ಪ್ರತಿನಿಧಿಗಳಾಗಬೇಕಾದವರು ಆಯಾ ರಾಜ್ಯದ ನಿವಾಸಿಯಾಗಿರಬೇಕು ಎಂಬ ನಿಯಮವಿತ್ತು. ಆದರೆ 2003ರಲ್ಲಿ ತಿದ್ದುಪಡಿ ತಂದು ಯಾರು ಎಲ್ಲಿಂದ ಬೇಕಾದರೂ ಆಯ್ಕೆಯಾಗಬಹುದು ಎಂಬ ನಿಯಮ ತಂದಿದ್ದಾರೆ. ಹೀಗಾಗಿ ಇಲ್ಲಿಂದ ನಿರ್ಮಲಾ ಸೀತಾರಾಮನ್ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

“ಕ್ಷೇತ್ರ ಮರು ವಿಂಗಡಣೆ ಪ್ರಶ್ನೆ ಬಂದಾಗ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಇದೆ. ಇಲ್ಲಿನ ಪ್ರಾತಿನಿಧ್ಯ ಕಡಿಮೆಯಾಗುತ್ತದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹೆಚ್ಚಿದ್ದರೆ, ಅವರಿಗೆ ಎಷ್ಟು ಸ್ಥಾನ ಸಿಗುತ್ತದೆ ಎಂಬುವುದನ್ನು ನೋಡಬೇಕಾಗುತ್ತದೆ”.

“ಒಂದು ರಾಷ್ಟ್ರ ಒಂದು ಚುನಾವಣೆ’ ಎನ್ನುತ್ತಿದ್ದಾರೆ. ಇದು ಒಕ್ಕೂಟ ತತ್ವದ ಮೇಲೆ ಹಲ್ಲೆಯಲ್ಲದೆ ಮತ್ತೇನೂ ಅಲ್ಲ. ಇದು ಯಾವತ್ತೂ ಆಗದಂತೆ ನೋಡಿಕೊಳ್ಳಬೇಕಿದೆ. ಈಗ ಚುನಾವಣೆ ಬರುತ್ತಿದೆ. ಬಿಜೆಪಿ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಸಲ್ಲಿಸಲಿಲ್ಲ. ಕನಿಷ್ಠ ಪಕ್ಷ ಇಂಡಿಯಾ ಮೈತ್ರಿ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ, ಒಕ್ಕೂಟ ವ್ಯವಸ್ಥೆ ಕಾಪಾಡುತ್ತೇವೆ ಎಂಬುವುದನ್ನು ಸೇರಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...