Homeಮುಖಪುಟಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ತಿಳಿಸಿದೆ

- Advertisement -
- Advertisement -

ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಕನಿಷ್ಠ ಜನಸಂದಣಿಯನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಮಾಜಿಕ ಅಂತರ ಕಾಪಾಡುವ ಪ್ರೋಟೋಕಾಲ್‌ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಹೋಂ ಡೆಲೆವರಿ ಅಥವಾ ಪರೋಕ್ಷ ಮಾರಾಟ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸಲಹೆ ನೀಡಿದೆ.

ಕೊರೊನಾ ಸಮಯದಲ್ಲಿ ಮದ್ಯ ಮಾರಾಟವೂ ಸಾಮಾನ್ಯ ಜನರ ಜೀವನಕ್ಕೆ ಜೀವನಕ್ಕೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿ ಕೋರ್ಟ್ ಮೇಲಿನ ಹೇಳಿಕೆಯನ್ನು ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಿದರು.

“ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ಅರ್ಜಿಗೆ ಪ್ರತಿಕ್ರಿಯೆಯಾಗಿ ತಿಳಿಸಿದೆ. “ಆಲ್ಕೋಹಾಲ್ ಮನೆ ವಿತರಣೆ ಕುರಿತು ಚರ್ಚೆ ನಡೆಯುತ್ತಿದೆ. ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ?” ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿಯ ಪ್ರಕಾರ, ಆ್ಯಪ್ ಆಧಾರಿತ ಆಹಾರ ವಿತರಣಾ ಕಂಪನಿ ಜೊಮಾಟೊ ಮದ್ಯದ ಡೋರ್ ಡೆಲೆವರಿ ಮಾಡುವ ಬಗ್ಗೆ ಯೋಚಿಸುತ್ತಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಮದ್ಯದ ವಿತರಣೆಗೆ ಪ್ರಸ್ತುತ ಯಾವುದೇ ಕಾನೂನು ಅವಕಾಶವಿಲ್ಲ, ಇಂಟರ್ನ್ಯಾಷನಲ್ ಸ್ಪಿರಿಟ್ ಅಂಡ್ ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಐಎಸ್‌ಡಬ್ಲ್ಯುಎಐ), ಜೊಮಾಟೊ ಹಾಗೂ ಇತರರು ಈ ಕಾನೂನಿನ ಬದಲಾವಣೆಗೆ ಲಾಬಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ದೀಪಕ್ ಸಾಯಿ ಅವರು ಮದ್ಯದಂಗಡಿಗಳಲ್ಲಿ ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳುವುದು ಕಷ್ಟ ಎಂದು ವಾದಿಸಿದರು. ಯಾಕೆಂದರೆ ಸೀಮಿತ ಸಂಖ್ಯೆಯ ಮದ್ಯದ ಅಂಗಡಿಗಳನ್ನು ಮರು ತೆರೆಯಲು ಅವಕಾಶವಿದೆ. ಆದರೆ ಪ್ರತಿಯೊಂದು ಮದ್ಯದ ಅಂಗಡಿಗಳ ಹೊರಗೆ ಜನಸಂದಣಿ ಇದೆ ಎಂದಿದ್ದಾರೆ.

“ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರಬಾರದು ಎಂದು ನಾನು ಬಯಸುತ್ತೇನೆ. ಗೃಹ ಸಚಿವಾಲಯ ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟಣೆ ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು.

ಮಾರ್ಚ್ 25 ರಂದು ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನಂತರ ಮದ್ಯದ ಮಳಿಗೆಗಳನ್ನು ಈ ವಾರ ಮತ್ತೆ ತೆರೆಯಲು ಅನುಮತಿ ನೀಡಿದೆ. ಇದರಿಂದಾಗಿ ಸಾಮಾಜಿಕ ಅಂತರವಿಲ್ಲದೆ ಜನರು ಮದ್ಯದ ಮಳಿಗೆಗಳ ಹೊರಗೆ ಗುಂಪುಗೂಡಿ ಆತಂಕ ಸೃಷ್ಟಿಸಿದರು. ಆದರೆ ಸರ್ಕಾರ ಎಲ್ಲಾ ಅಂಗಡಿಗಳಲ್ಲಿ ಸಾಮಾಜಿಕ ಅಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಹಾಗೂ ಯಾವುದೇ ಸಮಯದಲ್ಲಿ ಐದು ಜನರಿಗಿಂತ ಹೆಚ್ಚು ಜನರನ್ನು ಅಂಗಡಿಯೊಳಗೆ ಅನುಮತಿಸದಂತೆ ನೋಡಿಕೊಳ್ಳಬೇಕು ಎಂದಿತ್ತು.

ದೆಹಲಿ ಸೇರಿದಂತೆ ಕೆಲವು ರಾಜ್ಯಗಳು ಮದ್ಯ ಮಾರಾಟಕ್ಕೆ “ಕೊರೊನಾ ತೆರಿಗೆ” ವಿಧಿಸಿವೆ. ದೆಹಲಿ ಸರ್ಕಾರವು ಮದ್ಯದ ಮೇಲೆ ಶೇ 70 ರಷ್ಟು ಭಾರಿ ತೆರಿಗೆ ವಿಧಿಸಿದೆ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೂಡಾ ಇದೇ ರೀತಿಯ ಕ್ರಮಗಳನ್ನು ಪ್ರಕಟಿಸಿವೆ.


ಇದನ್ನೂ ಓದಿ: ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು. ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...