Homeಮುಖಪುಟಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ತಿಳಿಸಿದೆ

- Advertisement -
- Advertisement -

ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಕನಿಷ್ಠ ಜನಸಂದಣಿಯನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಮಾಜಿಕ ಅಂತರ ಕಾಪಾಡುವ ಪ್ರೋಟೋಕಾಲ್‌ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಹೋಂ ಡೆಲೆವರಿ ಅಥವಾ ಪರೋಕ್ಷ ಮಾರಾಟ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸಲಹೆ ನೀಡಿದೆ.

ಕೊರೊನಾ ಸಮಯದಲ್ಲಿ ಮದ್ಯ ಮಾರಾಟವೂ ಸಾಮಾನ್ಯ ಜನರ ಜೀವನಕ್ಕೆ ಜೀವನಕ್ಕೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿ ಕೋರ್ಟ್ ಮೇಲಿನ ಹೇಳಿಕೆಯನ್ನು ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಿದರು.

“ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ಅರ್ಜಿಗೆ ಪ್ರತಿಕ್ರಿಯೆಯಾಗಿ ತಿಳಿಸಿದೆ. “ಆಲ್ಕೋಹಾಲ್ ಮನೆ ವಿತರಣೆ ಕುರಿತು ಚರ್ಚೆ ನಡೆಯುತ್ತಿದೆ. ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ?” ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿಯ ಪ್ರಕಾರ, ಆ್ಯಪ್ ಆಧಾರಿತ ಆಹಾರ ವಿತರಣಾ ಕಂಪನಿ ಜೊಮಾಟೊ ಮದ್ಯದ ಡೋರ್ ಡೆಲೆವರಿ ಮಾಡುವ ಬಗ್ಗೆ ಯೋಚಿಸುತ್ತಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಮದ್ಯದ ವಿತರಣೆಗೆ ಪ್ರಸ್ತುತ ಯಾವುದೇ ಕಾನೂನು ಅವಕಾಶವಿಲ್ಲ, ಇಂಟರ್ನ್ಯಾಷನಲ್ ಸ್ಪಿರಿಟ್ ಅಂಡ್ ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಐಎಸ್‌ಡಬ್ಲ್ಯುಎಐ), ಜೊಮಾಟೊ ಹಾಗೂ ಇತರರು ಈ ಕಾನೂನಿನ ಬದಲಾವಣೆಗೆ ಲಾಬಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ದೀಪಕ್ ಸಾಯಿ ಅವರು ಮದ್ಯದಂಗಡಿಗಳಲ್ಲಿ ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳುವುದು ಕಷ್ಟ ಎಂದು ವಾದಿಸಿದರು. ಯಾಕೆಂದರೆ ಸೀಮಿತ ಸಂಖ್ಯೆಯ ಮದ್ಯದ ಅಂಗಡಿಗಳನ್ನು ಮರು ತೆರೆಯಲು ಅವಕಾಶವಿದೆ. ಆದರೆ ಪ್ರತಿಯೊಂದು ಮದ್ಯದ ಅಂಗಡಿಗಳ ಹೊರಗೆ ಜನಸಂದಣಿ ಇದೆ ಎಂದಿದ್ದಾರೆ.

“ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರಬಾರದು ಎಂದು ನಾನು ಬಯಸುತ್ತೇನೆ. ಗೃಹ ಸಚಿವಾಲಯ ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟಣೆ ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು.

ಮಾರ್ಚ್ 25 ರಂದು ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನಂತರ ಮದ್ಯದ ಮಳಿಗೆಗಳನ್ನು ಈ ವಾರ ಮತ್ತೆ ತೆರೆಯಲು ಅನುಮತಿ ನೀಡಿದೆ. ಇದರಿಂದಾಗಿ ಸಾಮಾಜಿಕ ಅಂತರವಿಲ್ಲದೆ ಜನರು ಮದ್ಯದ ಮಳಿಗೆಗಳ ಹೊರಗೆ ಗುಂಪುಗೂಡಿ ಆತಂಕ ಸೃಷ್ಟಿಸಿದರು. ಆದರೆ ಸರ್ಕಾರ ಎಲ್ಲಾ ಅಂಗಡಿಗಳಲ್ಲಿ ಸಾಮಾಜಿಕ ಅಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಹಾಗೂ ಯಾವುದೇ ಸಮಯದಲ್ಲಿ ಐದು ಜನರಿಗಿಂತ ಹೆಚ್ಚು ಜನರನ್ನು ಅಂಗಡಿಯೊಳಗೆ ಅನುಮತಿಸದಂತೆ ನೋಡಿಕೊಳ್ಳಬೇಕು ಎಂದಿತ್ತು.

ದೆಹಲಿ ಸೇರಿದಂತೆ ಕೆಲವು ರಾಜ್ಯಗಳು ಮದ್ಯ ಮಾರಾಟಕ್ಕೆ “ಕೊರೊನಾ ತೆರಿಗೆ” ವಿಧಿಸಿವೆ. ದೆಹಲಿ ಸರ್ಕಾರವು ಮದ್ಯದ ಮೇಲೆ ಶೇ 70 ರಷ್ಟು ಭಾರಿ ತೆರಿಗೆ ವಿಧಿಸಿದೆ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೂಡಾ ಇದೇ ರೀತಿಯ ಕ್ರಮಗಳನ್ನು ಪ್ರಕಟಿಸಿವೆ.


ಇದನ್ನೂ ಓದಿ: ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು. ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...