Homeಮುಖಪುಟಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ತಿಳಿಸಿದೆ

- Advertisement -
- Advertisement -

ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಕನಿಷ್ಠ ಜನಸಂದಣಿಯನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಮಾಜಿಕ ಅಂತರ ಕಾಪಾಡುವ ಪ್ರೋಟೋಕಾಲ್‌ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಹೋಂ ಡೆಲೆವರಿ ಅಥವಾ ಪರೋಕ್ಷ ಮಾರಾಟ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸಲಹೆ ನೀಡಿದೆ.

ಕೊರೊನಾ ಸಮಯದಲ್ಲಿ ಮದ್ಯ ಮಾರಾಟವೂ ಸಾಮಾನ್ಯ ಜನರ ಜೀವನಕ್ಕೆ ಜೀವನಕ್ಕೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿ ಕೋರ್ಟ್ ಮೇಲಿನ ಹೇಳಿಕೆಯನ್ನು ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಿದರು.

“ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ಅರ್ಜಿಗೆ ಪ್ರತಿಕ್ರಿಯೆಯಾಗಿ ತಿಳಿಸಿದೆ. “ಆಲ್ಕೋಹಾಲ್ ಮನೆ ವಿತರಣೆ ಕುರಿತು ಚರ್ಚೆ ನಡೆಯುತ್ತಿದೆ. ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ?” ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿಯ ಪ್ರಕಾರ, ಆ್ಯಪ್ ಆಧಾರಿತ ಆಹಾರ ವಿತರಣಾ ಕಂಪನಿ ಜೊಮಾಟೊ ಮದ್ಯದ ಡೋರ್ ಡೆಲೆವರಿ ಮಾಡುವ ಬಗ್ಗೆ ಯೋಚಿಸುತ್ತಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಮದ್ಯದ ವಿತರಣೆಗೆ ಪ್ರಸ್ತುತ ಯಾವುದೇ ಕಾನೂನು ಅವಕಾಶವಿಲ್ಲ, ಇಂಟರ್ನ್ಯಾಷನಲ್ ಸ್ಪಿರಿಟ್ ಅಂಡ್ ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಐಎಸ್‌ಡಬ್ಲ್ಯುಎಐ), ಜೊಮಾಟೊ ಹಾಗೂ ಇತರರು ಈ ಕಾನೂನಿನ ಬದಲಾವಣೆಗೆ ಲಾಬಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ದೀಪಕ್ ಸಾಯಿ ಅವರು ಮದ್ಯದಂಗಡಿಗಳಲ್ಲಿ ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳುವುದು ಕಷ್ಟ ಎಂದು ವಾದಿಸಿದರು. ಯಾಕೆಂದರೆ ಸೀಮಿತ ಸಂಖ್ಯೆಯ ಮದ್ಯದ ಅಂಗಡಿಗಳನ್ನು ಮರು ತೆರೆಯಲು ಅವಕಾಶವಿದೆ. ಆದರೆ ಪ್ರತಿಯೊಂದು ಮದ್ಯದ ಅಂಗಡಿಗಳ ಹೊರಗೆ ಜನಸಂದಣಿ ಇದೆ ಎಂದಿದ್ದಾರೆ.

“ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರಬಾರದು ಎಂದು ನಾನು ಬಯಸುತ್ತೇನೆ. ಗೃಹ ಸಚಿವಾಲಯ ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟಣೆ ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು.

ಮಾರ್ಚ್ 25 ರಂದು ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನಂತರ ಮದ್ಯದ ಮಳಿಗೆಗಳನ್ನು ಈ ವಾರ ಮತ್ತೆ ತೆರೆಯಲು ಅನುಮತಿ ನೀಡಿದೆ. ಇದರಿಂದಾಗಿ ಸಾಮಾಜಿಕ ಅಂತರವಿಲ್ಲದೆ ಜನರು ಮದ್ಯದ ಮಳಿಗೆಗಳ ಹೊರಗೆ ಗುಂಪುಗೂಡಿ ಆತಂಕ ಸೃಷ್ಟಿಸಿದರು. ಆದರೆ ಸರ್ಕಾರ ಎಲ್ಲಾ ಅಂಗಡಿಗಳಲ್ಲಿ ಸಾಮಾಜಿಕ ಅಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಹಾಗೂ ಯಾವುದೇ ಸಮಯದಲ್ಲಿ ಐದು ಜನರಿಗಿಂತ ಹೆಚ್ಚು ಜನರನ್ನು ಅಂಗಡಿಯೊಳಗೆ ಅನುಮತಿಸದಂತೆ ನೋಡಿಕೊಳ್ಳಬೇಕು ಎಂದಿತ್ತು.

ದೆಹಲಿ ಸೇರಿದಂತೆ ಕೆಲವು ರಾಜ್ಯಗಳು ಮದ್ಯ ಮಾರಾಟಕ್ಕೆ “ಕೊರೊನಾ ತೆರಿಗೆ” ವಿಧಿಸಿವೆ. ದೆಹಲಿ ಸರ್ಕಾರವು ಮದ್ಯದ ಮೇಲೆ ಶೇ 70 ರಷ್ಟು ಭಾರಿ ತೆರಿಗೆ ವಿಧಿಸಿದೆ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೂಡಾ ಇದೇ ರೀತಿಯ ಕ್ರಮಗಳನ್ನು ಪ್ರಕಟಿಸಿವೆ.


ಇದನ್ನೂ ಓದಿ: ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು. ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....