Homeಮುಖಪುಟಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ತಿಳಿಸಿದೆ

- Advertisement -
- Advertisement -

ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಕನಿಷ್ಠ ಜನಸಂದಣಿಯನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಮಾಜಿಕ ಅಂತರ ಕಾಪಾಡುವ ಪ್ರೋಟೋಕಾಲ್‌ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಹೋಂ ಡೆಲೆವರಿ ಅಥವಾ ಪರೋಕ್ಷ ಮಾರಾಟ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸಲಹೆ ನೀಡಿದೆ.

ಕೊರೊನಾ ಸಮಯದಲ್ಲಿ ಮದ್ಯ ಮಾರಾಟವೂ ಸಾಮಾನ್ಯ ಜನರ ಜೀವನಕ್ಕೆ ಜೀವನಕ್ಕೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿ ಕೋರ್ಟ್ ಮೇಲಿನ ಹೇಳಿಕೆಯನ್ನು ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಿದರು.

“ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ಅರ್ಜಿಗೆ ಪ್ರತಿಕ್ರಿಯೆಯಾಗಿ ತಿಳಿಸಿದೆ. “ಆಲ್ಕೋಹಾಲ್ ಮನೆ ವಿತರಣೆ ಕುರಿತು ಚರ್ಚೆ ನಡೆಯುತ್ತಿದೆ. ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ?” ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿಯ ಪ್ರಕಾರ, ಆ್ಯಪ್ ಆಧಾರಿತ ಆಹಾರ ವಿತರಣಾ ಕಂಪನಿ ಜೊಮಾಟೊ ಮದ್ಯದ ಡೋರ್ ಡೆಲೆವರಿ ಮಾಡುವ ಬಗ್ಗೆ ಯೋಚಿಸುತ್ತಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಮದ್ಯದ ವಿತರಣೆಗೆ ಪ್ರಸ್ತುತ ಯಾವುದೇ ಕಾನೂನು ಅವಕಾಶವಿಲ್ಲ, ಇಂಟರ್ನ್ಯಾಷನಲ್ ಸ್ಪಿರಿಟ್ ಅಂಡ್ ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಐಎಸ್‌ಡಬ್ಲ್ಯುಎಐ), ಜೊಮಾಟೊ ಹಾಗೂ ಇತರರು ಈ ಕಾನೂನಿನ ಬದಲಾವಣೆಗೆ ಲಾಬಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ದೀಪಕ್ ಸಾಯಿ ಅವರು ಮದ್ಯದಂಗಡಿಗಳಲ್ಲಿ ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳುವುದು ಕಷ್ಟ ಎಂದು ವಾದಿಸಿದರು. ಯಾಕೆಂದರೆ ಸೀಮಿತ ಸಂಖ್ಯೆಯ ಮದ್ಯದ ಅಂಗಡಿಗಳನ್ನು ಮರು ತೆರೆಯಲು ಅವಕಾಶವಿದೆ. ಆದರೆ ಪ್ರತಿಯೊಂದು ಮದ್ಯದ ಅಂಗಡಿಗಳ ಹೊರಗೆ ಜನಸಂದಣಿ ಇದೆ ಎಂದಿದ್ದಾರೆ.

“ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರಬಾರದು ಎಂದು ನಾನು ಬಯಸುತ್ತೇನೆ. ಗೃಹ ಸಚಿವಾಲಯ ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟಣೆ ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು.

ಮಾರ್ಚ್ 25 ರಂದು ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನಂತರ ಮದ್ಯದ ಮಳಿಗೆಗಳನ್ನು ಈ ವಾರ ಮತ್ತೆ ತೆರೆಯಲು ಅನುಮತಿ ನೀಡಿದೆ. ಇದರಿಂದಾಗಿ ಸಾಮಾಜಿಕ ಅಂತರವಿಲ್ಲದೆ ಜನರು ಮದ್ಯದ ಮಳಿಗೆಗಳ ಹೊರಗೆ ಗುಂಪುಗೂಡಿ ಆತಂಕ ಸೃಷ್ಟಿಸಿದರು. ಆದರೆ ಸರ್ಕಾರ ಎಲ್ಲಾ ಅಂಗಡಿಗಳಲ್ಲಿ ಸಾಮಾಜಿಕ ಅಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಹಾಗೂ ಯಾವುದೇ ಸಮಯದಲ್ಲಿ ಐದು ಜನರಿಗಿಂತ ಹೆಚ್ಚು ಜನರನ್ನು ಅಂಗಡಿಯೊಳಗೆ ಅನುಮತಿಸದಂತೆ ನೋಡಿಕೊಳ್ಳಬೇಕು ಎಂದಿತ್ತು.

ದೆಹಲಿ ಸೇರಿದಂತೆ ಕೆಲವು ರಾಜ್ಯಗಳು ಮದ್ಯ ಮಾರಾಟಕ್ಕೆ “ಕೊರೊನಾ ತೆರಿಗೆ” ವಿಧಿಸಿವೆ. ದೆಹಲಿ ಸರ್ಕಾರವು ಮದ್ಯದ ಮೇಲೆ ಶೇ 70 ರಷ್ಟು ಭಾರಿ ತೆರಿಗೆ ವಿಧಿಸಿದೆ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೂಡಾ ಇದೇ ರೀತಿಯ ಕ್ರಮಗಳನ್ನು ಪ್ರಕಟಿಸಿವೆ.


ಇದನ್ನೂ ಓದಿ: ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು. ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...