Homeಮುಖಪುಟಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ

ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ತಿಳಿಸಿದೆ

- Advertisement -
- Advertisement -

ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಕನಿಷ್ಠ ಜನಸಂದಣಿಯನ್ನು ಖಚಿತಪಡಿಸಿಕೊಳ್ಳುವ ಮತ್ತು ಸಾಮಾಜಿಕ ಅಂತರ ಕಾಪಾಡುವ ಪ್ರೋಟೋಕಾಲ್‌ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಹೋಂ ಡೆಲೆವರಿ ಅಥವಾ ಪರೋಕ್ಷ ಮಾರಾಟ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸಲಹೆ ನೀಡಿದೆ.

ಕೊರೊನಾ ಸಮಯದಲ್ಲಿ ಮದ್ಯ ಮಾರಾಟವೂ ಸಾಮಾನ್ಯ ಜನರ ಜೀವನಕ್ಕೆ ಜೀವನಕ್ಕೆ ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿ ಕೋರ್ಟ್ ಮೇಲಿನ ಹೇಳಿಕೆಯನ್ನು ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್. ಗವಾಯಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಲಿಸಿದರು.

“ನಾವು ಯಾವುದೇ ಆದೇಶವನ್ನು ಮಾಡುವುದಿಲ್ಲ ಆದರೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ರಾಜ್ಯಗಳು ಹೋಂ ಡೆಲೆವರಿ  ಅಥವಾ ಪರೋಕ್ಷ ಮದ್ಯ ಮಾರಾಟವನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟಿನ ಮೂರು ನ್ಯಾಯಾಧೀಶರ ಪೀಠವು ಅರ್ಜಿಗೆ ಪ್ರತಿಕ್ರಿಯೆಯಾಗಿ ತಿಳಿಸಿದೆ. “ಆಲ್ಕೋಹಾಲ್ ಮನೆ ವಿತರಣೆ ಕುರಿತು ಚರ್ಚೆ ನಡೆಯುತ್ತಿದೆ. ನಾವು ಏನು ಮಾಡಬೇಕೆಂದು ನೀವು ಬಯಸುತ್ತೀರಿ?” ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿಯ ಪ್ರಕಾರ, ಆ್ಯಪ್ ಆಧಾರಿತ ಆಹಾರ ವಿತರಣಾ ಕಂಪನಿ ಜೊಮಾಟೊ ಮದ್ಯದ ಡೋರ್ ಡೆಲೆವರಿ ಮಾಡುವ ಬಗ್ಗೆ ಯೋಚಿಸುತ್ತಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಮದ್ಯದ ವಿತರಣೆಗೆ ಪ್ರಸ್ತುತ ಯಾವುದೇ ಕಾನೂನು ಅವಕಾಶವಿಲ್ಲ, ಇಂಟರ್ನ್ಯಾಷನಲ್ ಸ್ಪಿರಿಟ್ ಅಂಡ್ ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಐಎಸ್‌ಡಬ್ಲ್ಯುಎಐ), ಜೊಮಾಟೊ ಹಾಗೂ ಇತರರು ಈ ಕಾನೂನಿನ ಬದಲಾವಣೆಗೆ ಲಾಬಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ದೀಪಕ್ ಸಾಯಿ ಅವರು ಮದ್ಯದಂಗಡಿಗಳಲ್ಲಿ ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳುವುದು ಕಷ್ಟ ಎಂದು ವಾದಿಸಿದರು. ಯಾಕೆಂದರೆ ಸೀಮಿತ ಸಂಖ್ಯೆಯ ಮದ್ಯದ ಅಂಗಡಿಗಳನ್ನು ಮರು ತೆರೆಯಲು ಅವಕಾಶವಿದೆ. ಆದರೆ ಪ್ರತಿಯೊಂದು ಮದ್ಯದ ಅಂಗಡಿಗಳ ಹೊರಗೆ ಜನಸಂದಣಿ ಇದೆ ಎಂದಿದ್ದಾರೆ.

“ಮದ್ಯ ಮಾರಾಟದಿಂದಾಗಿ ಸಾಮಾನ್ಯ ಜನರ ಜೀವನದ ಮೇಲೆ ಪರಿಣಾಮ ಬೀರಬಾರದು ಎಂದು ನಾನು ಬಯಸುತ್ತೇನೆ. ಗೃಹ ಸಚಿವಾಲಯ ಮದ್ಯ ಮಾರಾಟದ ಬಗ್ಗೆ ರಾಜ್ಯಗಳಿಗೆ ಸ್ಪಷ್ಟಣೆ ನೀಡಬೇಕು” ಎಂದು ವಕೀಲ ದೀಪಕ್ ಸಾಯಿ ವಾದಿಸಿದರು.

ಮಾರ್ಚ್ 25 ರಂದು ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನಂತರ ಮದ್ಯದ ಮಳಿಗೆಗಳನ್ನು ಈ ವಾರ ಮತ್ತೆ ತೆರೆಯಲು ಅನುಮತಿ ನೀಡಿದೆ. ಇದರಿಂದಾಗಿ ಸಾಮಾಜಿಕ ಅಂತರವಿಲ್ಲದೆ ಜನರು ಮದ್ಯದ ಮಳಿಗೆಗಳ ಹೊರಗೆ ಗುಂಪುಗೂಡಿ ಆತಂಕ ಸೃಷ್ಟಿಸಿದರು. ಆದರೆ ಸರ್ಕಾರ ಎಲ್ಲಾ ಅಂಗಡಿಗಳಲ್ಲಿ ಸಾಮಾಜಿಕ ಅಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಹಾಗೂ ಯಾವುದೇ ಸಮಯದಲ್ಲಿ ಐದು ಜನರಿಗಿಂತ ಹೆಚ್ಚು ಜನರನ್ನು ಅಂಗಡಿಯೊಳಗೆ ಅನುಮತಿಸದಂತೆ ನೋಡಿಕೊಳ್ಳಬೇಕು ಎಂದಿತ್ತು.

ದೆಹಲಿ ಸೇರಿದಂತೆ ಕೆಲವು ರಾಜ್ಯಗಳು ಮದ್ಯ ಮಾರಾಟಕ್ಕೆ “ಕೊರೊನಾ ತೆರಿಗೆ” ವಿಧಿಸಿವೆ. ದೆಹಲಿ ಸರ್ಕಾರವು ಮದ್ಯದ ಮೇಲೆ ಶೇ 70 ರಷ್ಟು ಭಾರಿ ತೆರಿಗೆ ವಿಧಿಸಿದೆ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೂಡಾ ಇದೇ ರೀತಿಯ ಕ್ರಮಗಳನ್ನು ಪ್ರಕಟಿಸಿವೆ.


ಇದನ್ನೂ ಓದಿ: ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು. ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಬರಹ


ನಮ್ಮ ಇಂಗ್ಲಿಷ್ ವೆಬ್ಸೈಟಿಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...