Homeಮುಖಪುಟವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ.

- Advertisement -
- Advertisement -

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು, ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆ ನೀಡಿದ್ದಾರೆ.

“ಸರ್ಕಾರ ಯಾವ ಮಾಧ್ಯಮದಲ್ಲಿ ವ್ಯವಹಿಸುತ್ತದೆಯೋ ಅದೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ. ಇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ, ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಅಮಿತ್‌ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹೇಳಿರುವುದಾಗಿ ಗೃಹ ಸಚಿವಾಲಯವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು. ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸುವ ಅಗತ್ಯವಿಲ್ಲ ಎಂದು ಶಾ ಸ್ಪಷ್ಟಪಡಿಸಿದ್ದಾರೆ. ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅಮಿತ್‌ ಶಾ ಅವರು ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಡಿಯ ಬಿ ಮಹತಾಬ್ ಅದರ ಉಪಾಧ್ಯಕ್ಷರಾಗಿದ್ದಾರೆ.

ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಮತ್ತು ಹಿಂದಿ ಬೋಧನಾ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಗೃಹ ಸಚಿವರು ಒತ್ತಿ ಹೇಳಿದ್ದಾರೆ.

ಸಚಿವ ಸಂಪುಟದ 70 ಪ್ರತಿಶತದಷ್ಟು ಕಾರ್ಯಸೂಚಿಯನ್ನು ಈಗ ಹಿಂದಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸಮಿತಿಯ ಸದಸ್ಯರಿಗೆ ಅವರು ತಿಳಿಸಿದ್ದಾರೆ. ಈಶಾನ್ಯದ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಾಗರಿಗೆ ಪರಿವರ್ತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

‘ಈ ಎಲ್ಲಾ ರಾಜ್ಯಗಳು ಹತ್ತನೇ ತರಗತಿಯವರೆಗಿನ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ’ ಎಂದು ಅವರು ತಿಳಿಸಿದ್ದಾರೆ.

ಸಮಿತಿಯ ವರದಿಯ 11ನೇ ಸಂಪುಟವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ಸಮಿತಿಯು ಸರ್ವಾನುಮತದಿಂದ ಅನುಮೋದನೆ ನೀಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಅಧಿಕಾರಿಗಳು ಮತ್ತು ಯುವಕರು ಹಿಂದಿಯ ಹೆಚ್ಚಿನ ಬಳಕೆಗೆ ಒತ್ತಾಯಿಸುತ್ತಲೇ ಇದ್ದಾರೆ, ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳು ಪ್ರಾಥಮಿಕವಾಗಿ ಭಾಷೆಯ ಕಾರಣದಿಂದಾಗಿ ರಕ್ಷಿಸಲ್ಪಟ್ಟಿವೆ ಎಂದು ಅಮಿತ್‌ ಷಾ ಅಭಿಪ್ರಾಯಪಟ್ಟಿದ್ದಾರೆ.

2019ರ ಹಿಂದಿ ದಿವಸ್‌ನಲ್ಲಿ ಭಾಷೆಯ ಕುರಿತು ಭಾಷಣ ಮಾಡಿದ್ದ ಅಮಿತ್ ಶಾ, “ಒಂದು ರಾಷ್ಟ್ರ, ಒಂದು ಭಾಷೆ” ಕಲ್ಪನೆಯನ್ನು ಮುಂದಿಟ್ಟಿದ್ದರು. “ಭಾರತ ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಆದರೆ ಪ್ರಪಂಚದ ಎದುರು ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಇಡೀ ದೇಶವು ಹೊಂದುವುದು ಅವಶ್ಯಕವಾಗಿದೆ. ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಹಿಂದಿ” ಎಂದಿದ್ದರು.

ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ, ವಿವಿಧ ರಾಜ್ಯಗಳ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ‘ಭಾರತದ ವೈವಿಧ್ಯತೆಯ ಮೂಲ ತತ್ವಗಳ ಮೇಲಿನ ದಾಳಿ ಇದಾಗಿದೆ’ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟರೆ, ‘ಸಂವಿಧಾನದ 29ನೇ ವಿಧಿ ಬಹು ಭಾಷೆಗಳನ್ನು ಗೌರವಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಿಳಿಸಿದ್ದರು.

ಅಲ್ಲಿಂದೀಚೆಗೆ, ಷಾ ಅವರು ತಮ್ಮ ಭಾಷೆಯ ಪ್ರತಿಪಾದನೆಯನ್ನು ಕಡಿಮೆ ಮಾಡಿದ್ದಾರೆ. ಹಿಂದಿ ಯಾವುದೇ ಪ್ರಾದೇಶಿಕ ಭಾಷೆಯೊಂದಿಗೆ ಸ್ಪರ್ಧಿಸುತ್ತಿಲ್ಲ, ಕೇವಲ ಪ್ರಾದೇಶಿಕ ಭಾಷಿಗರಿಗೆ ಪೂರಕವಾಗಿದೆ ಎಂದು ಪದೇ ಪದೇ  ಹೇಳುತ್ತಾ ಬಂದಿದ್ದಾರೆ.

ಹಿಂದಿ ಹೇರಿಕೆಯನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಅಧಿಕೃತ ಭಾಷೆ ಹಾಗೂ ಸಂವಹನ ಮಾಧ್ಯಮದ ಕುರಿತು ಅಮಿತ್‌ ಶಾ ಹಾಗೂ ಗೃಹ ಸಚಿವಾಲಯದ ನಿಲುವನ್ನು ಒಬ್ಬ ಕನ್ನಡಿಗನಾಗಿ ನಾನು ವಿರೋಧಿಸುತ್ತೇನೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ; ಹಾಗಾಗಲೂ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಂದಿ ಹೇರಿಕೆಯ ಈ ಹುನ್ನಾರ ಕಂಡನಾರ್ಹ. ನಮಗೆ ಇಂಗ್ಲೀಷೇ ಸಂಪರ್ಕ ಬಾಶೆಯಾಗಿರಲಿ, ಹಿಂದಿ ಬೇಡ.

  2. I do not know Hindi and do want to speak. I am kannadiga and i need kannada and English only to live in India.
    Most of the North Indian people work in southern
    States ask them to learn South Indian languages. This will help them to understand local culture.

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...