Homeಮುಖಪುಟವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ.

- Advertisement -
- Advertisement -

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು, ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆ ನೀಡಿದ್ದಾರೆ.

“ಸರ್ಕಾರ ಯಾವ ಮಾಧ್ಯಮದಲ್ಲಿ ವ್ಯವಹಿಸುತ್ತದೆಯೋ ಅದೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ. ಇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ, ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಅಮಿತ್‌ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹೇಳಿರುವುದಾಗಿ ಗೃಹ ಸಚಿವಾಲಯವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು. ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸುವ ಅಗತ್ಯವಿಲ್ಲ ಎಂದು ಶಾ ಸ್ಪಷ್ಟಪಡಿಸಿದ್ದಾರೆ. ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅಮಿತ್‌ ಶಾ ಅವರು ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಡಿಯ ಬಿ ಮಹತಾಬ್ ಅದರ ಉಪಾಧ್ಯಕ್ಷರಾಗಿದ್ದಾರೆ.

ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಮತ್ತು ಹಿಂದಿ ಬೋಧನಾ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಗೃಹ ಸಚಿವರು ಒತ್ತಿ ಹೇಳಿದ್ದಾರೆ.

ಸಚಿವ ಸಂಪುಟದ 70 ಪ್ರತಿಶತದಷ್ಟು ಕಾರ್ಯಸೂಚಿಯನ್ನು ಈಗ ಹಿಂದಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸಮಿತಿಯ ಸದಸ್ಯರಿಗೆ ಅವರು ತಿಳಿಸಿದ್ದಾರೆ. ಈಶಾನ್ಯದ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಾಗರಿಗೆ ಪರಿವರ್ತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

‘ಈ ಎಲ್ಲಾ ರಾಜ್ಯಗಳು ಹತ್ತನೇ ತರಗತಿಯವರೆಗಿನ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ’ ಎಂದು ಅವರು ತಿಳಿಸಿದ್ದಾರೆ.

ಸಮಿತಿಯ ವರದಿಯ 11ನೇ ಸಂಪುಟವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ಸಮಿತಿಯು ಸರ್ವಾನುಮತದಿಂದ ಅನುಮೋದನೆ ನೀಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಅಧಿಕಾರಿಗಳು ಮತ್ತು ಯುವಕರು ಹಿಂದಿಯ ಹೆಚ್ಚಿನ ಬಳಕೆಗೆ ಒತ್ತಾಯಿಸುತ್ತಲೇ ಇದ್ದಾರೆ, ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳು ಪ್ರಾಥಮಿಕವಾಗಿ ಭಾಷೆಯ ಕಾರಣದಿಂದಾಗಿ ರಕ್ಷಿಸಲ್ಪಟ್ಟಿವೆ ಎಂದು ಅಮಿತ್‌ ಷಾ ಅಭಿಪ್ರಾಯಪಟ್ಟಿದ್ದಾರೆ.

2019ರ ಹಿಂದಿ ದಿವಸ್‌ನಲ್ಲಿ ಭಾಷೆಯ ಕುರಿತು ಭಾಷಣ ಮಾಡಿದ್ದ ಅಮಿತ್ ಶಾ, “ಒಂದು ರಾಷ್ಟ್ರ, ಒಂದು ಭಾಷೆ” ಕಲ್ಪನೆಯನ್ನು ಮುಂದಿಟ್ಟಿದ್ದರು. “ಭಾರತ ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಆದರೆ ಪ್ರಪಂಚದ ಎದುರು ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಇಡೀ ದೇಶವು ಹೊಂದುವುದು ಅವಶ್ಯಕವಾಗಿದೆ. ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಹಿಂದಿ” ಎಂದಿದ್ದರು.

ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ, ವಿವಿಧ ರಾಜ್ಯಗಳ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ‘ಭಾರತದ ವೈವಿಧ್ಯತೆಯ ಮೂಲ ತತ್ವಗಳ ಮೇಲಿನ ದಾಳಿ ಇದಾಗಿದೆ’ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟರೆ, ‘ಸಂವಿಧಾನದ 29ನೇ ವಿಧಿ ಬಹು ಭಾಷೆಗಳನ್ನು ಗೌರವಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಿಳಿಸಿದ್ದರು.

ಅಲ್ಲಿಂದೀಚೆಗೆ, ಷಾ ಅವರು ತಮ್ಮ ಭಾಷೆಯ ಪ್ರತಿಪಾದನೆಯನ್ನು ಕಡಿಮೆ ಮಾಡಿದ್ದಾರೆ. ಹಿಂದಿ ಯಾವುದೇ ಪ್ರಾದೇಶಿಕ ಭಾಷೆಯೊಂದಿಗೆ ಸ್ಪರ್ಧಿಸುತ್ತಿಲ್ಲ, ಕೇವಲ ಪ್ರಾದೇಶಿಕ ಭಾಷಿಗರಿಗೆ ಪೂರಕವಾಗಿದೆ ಎಂದು ಪದೇ ಪದೇ  ಹೇಳುತ್ತಾ ಬಂದಿದ್ದಾರೆ.

ಹಿಂದಿ ಹೇರಿಕೆಯನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಅಧಿಕೃತ ಭಾಷೆ ಹಾಗೂ ಸಂವಹನ ಮಾಧ್ಯಮದ ಕುರಿತು ಅಮಿತ್‌ ಶಾ ಹಾಗೂ ಗೃಹ ಸಚಿವಾಲಯದ ನಿಲುವನ್ನು ಒಬ್ಬ ಕನ್ನಡಿಗನಾಗಿ ನಾನು ವಿರೋಧಿಸುತ್ತೇನೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ; ಹಾಗಾಗಲೂ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಂದಿ ಹೇರಿಕೆಯ ಈ ಹುನ್ನಾರ ಕಂಡನಾರ್ಹ. ನಮಗೆ ಇಂಗ್ಲೀಷೇ ಸಂಪರ್ಕ ಬಾಶೆಯಾಗಿರಲಿ, ಹಿಂದಿ ಬೇಡ.

  2. I do not know Hindi and do want to speak. I am kannadiga and i need kannada and English only to live in India.
    Most of the North Indian people work in southern
    States ask them to learn South Indian languages. This will help them to understand local culture.

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...