Homeಮುಖಪುಟವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ.

- Advertisement -
- Advertisement -

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹನ ನಡೆಸಬೇಕು, ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಸಲಹೆ ನೀಡಿದ್ದಾರೆ.

“ಸರ್ಕಾರ ಯಾವ ಮಾಧ್ಯಮದಲ್ಲಿ ವ್ಯವಹಿಸುತ್ತದೆಯೋ ಅದೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

“ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ. ಇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸುವಾಗ, ಅದು ಭಾರತದ ಭಾಷೆಯಲ್ಲಿರಬೇಕು” ಎಂದು ಅಮಿತ್‌ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಹೇಳಿರುವುದಾಗಿ ಗೃಹ ಸಚಿವಾಲಯವು ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ಭಾಷೆಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು. ಆದರೆ ಸ್ಥಳೀಯ ಭಾಷೆಗಳಿಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸುವ ಅಗತ್ಯವಿಲ್ಲ ಎಂದು ಶಾ ಸ್ಪಷ್ಟಪಡಿಸಿದ್ದಾರೆ. ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸುವ ಮೂಲಕ ಹಿಂದಿಯನ್ನು ಹೆಚ್ಚು ಹೊಂದಿಕೊಳ್ಳುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅಮಿತ್‌ ಶಾ ಅವರು ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಬಿಜೆಡಿಯ ಬಿ ಮಹತಾಬ್ ಅದರ ಉಪಾಧ್ಯಕ್ಷರಾಗಿದ್ದಾರೆ.

ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಮತ್ತು ಹಿಂದಿ ಬೋಧನಾ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ಅಗತ್ಯವನ್ನು ಗೃಹ ಸಚಿವರು ಒತ್ತಿ ಹೇಳಿದ್ದಾರೆ.

ಸಚಿವ ಸಂಪುಟದ 70 ಪ್ರತಿಶತದಷ್ಟು ಕಾರ್ಯಸೂಚಿಯನ್ನು ಈಗ ಹಿಂದಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸಮಿತಿಯ ಸದಸ್ಯರಿಗೆ ಅವರು ತಿಳಿಸಿದ್ದಾರೆ. ಈಶಾನ್ಯದ ಎಂಟು ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಒಂಬತ್ತು ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಾಗರಿಗೆ ಪರಿವರ್ತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

‘ಈ ಎಲ್ಲಾ ರಾಜ್ಯಗಳು ಹತ್ತನೇ ತರಗತಿಯವರೆಗಿನ ಶಾಲೆಗಳಲ್ಲಿ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ’ ಎಂದು ಅವರು ತಿಳಿಸಿದ್ದಾರೆ.

ಸಮಿತಿಯ ವರದಿಯ 11ನೇ ಸಂಪುಟವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲು ಸಮಿತಿಯು ಸರ್ವಾನುಮತದಿಂದ ಅನುಮೋದನೆ ನೀಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಅಧಿಕಾರಿಗಳು ಮತ್ತು ಯುವಕರು ಹಿಂದಿಯ ಹೆಚ್ಚಿನ ಬಳಕೆಗೆ ಒತ್ತಾಯಿಸುತ್ತಲೇ ಇದ್ದಾರೆ, ಭಾರತದ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಗಳು ಪ್ರಾಥಮಿಕವಾಗಿ ಭಾಷೆಯ ಕಾರಣದಿಂದಾಗಿ ರಕ್ಷಿಸಲ್ಪಟ್ಟಿವೆ ಎಂದು ಅಮಿತ್‌ ಷಾ ಅಭಿಪ್ರಾಯಪಟ್ಟಿದ್ದಾರೆ.

2019ರ ಹಿಂದಿ ದಿವಸ್‌ನಲ್ಲಿ ಭಾಷೆಯ ಕುರಿತು ಭಾಷಣ ಮಾಡಿದ್ದ ಅಮಿತ್ ಶಾ, “ಒಂದು ರಾಷ್ಟ್ರ, ಒಂದು ಭಾಷೆ” ಕಲ್ಪನೆಯನ್ನು ಮುಂದಿಟ್ಟಿದ್ದರು. “ಭಾರತ ವಿವಿಧ ಭಾಷೆಗಳ ದೇಶ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವವಿದೆ. ಆದರೆ ಪ್ರಪಂಚದ ಎದುರು ರಾಷ್ಟ್ರದ ಗುರುತಾಗುವ ಒಂದು ಭಾಷೆಯನ್ನು ಇಡೀ ದೇಶವು ಹೊಂದುವುದು ಅವಶ್ಯಕವಾಗಿದೆ. ಇಡೀ ದೇಶವನ್ನು ಒಂದೇ ದಾರದಲ್ಲಿ ಕಟ್ಟಿಕೊಡುವ ಭಾಷೆ ಯಾವುದಾದರೂ ಇದ್ದರೆ ಅದು ಹಿಂದಿ” ಎಂದಿದ್ದರು.

ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ, ವಿವಿಧ ರಾಜ್ಯಗಳ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ‘ಭಾರತದ ವೈವಿಧ್ಯತೆಯ ಮೂಲ ತತ್ವಗಳ ಮೇಲಿನ ದಾಳಿ ಇದಾಗಿದೆ’ ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟರೆ, ‘ಸಂವಿಧಾನದ 29ನೇ ವಿಧಿ ಬಹು ಭಾಷೆಗಳನ್ನು ಗೌರವಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಿಳಿಸಿದ್ದರು.

ಅಲ್ಲಿಂದೀಚೆಗೆ, ಷಾ ಅವರು ತಮ್ಮ ಭಾಷೆಯ ಪ್ರತಿಪಾದನೆಯನ್ನು ಕಡಿಮೆ ಮಾಡಿದ್ದಾರೆ. ಹಿಂದಿ ಯಾವುದೇ ಪ್ರಾದೇಶಿಕ ಭಾಷೆಯೊಂದಿಗೆ ಸ್ಪರ್ಧಿಸುತ್ತಿಲ್ಲ, ಕೇವಲ ಪ್ರಾದೇಶಿಕ ಭಾಷಿಗರಿಗೆ ಪೂರಕವಾಗಿದೆ ಎಂದು ಪದೇ ಪದೇ  ಹೇಳುತ್ತಾ ಬಂದಿದ್ದಾರೆ.

ಹಿಂದಿ ಹೇರಿಕೆಯನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಅಧಿಕೃತ ಭಾಷೆ ಹಾಗೂ ಸಂವಹನ ಮಾಧ್ಯಮದ ಕುರಿತು ಅಮಿತ್‌ ಶಾ ಹಾಗೂ ಗೃಹ ಸಚಿವಾಲಯದ ನಿಲುವನ್ನು ಒಬ್ಬ ಕನ್ನಡಿಗನಾಗಿ ನಾನು ವಿರೋಧಿಸುತ್ತೇನೆ. ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ; ಹಾಗಾಗಲೂ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಂದಿ ಹೇರಿಕೆಯ ಈ ಹುನ್ನಾರ ಕಂಡನಾರ್ಹ. ನಮಗೆ ಇಂಗ್ಲೀಷೇ ಸಂಪರ್ಕ ಬಾಶೆಯಾಗಿರಲಿ, ಹಿಂದಿ ಬೇಡ.

  2. I do not know Hindi and do want to speak. I am kannadiga and i need kannada and English only to live in India.
    Most of the North Indian people work in southern
    States ask them to learn South Indian languages. This will help them to understand local culture.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...