Homeಕರ್ನಾಟಕಅಮುಲ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಕರವೇ ಕಾರ್ಯಕರ್ತರ ಬಂಧನ

ಅಮುಲ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಕರವೇ ಕಾರ್ಯಕರ್ತರ ಬಂಧನ

- Advertisement -
- Advertisement -

ರಾಜ್ಯದಲ್ಲಿ ಅಮುಲ್ ಹಾಲು ಮತ್ತು ಮೊಸರು ಮಾರಾಟವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಬೆಂಗಳೂರು, ಚಾಮರಾಜನಗರ ಮತ್ತು ಸಿಂಧನೂರಿನಲ್ಲಿ ಪ್ರತಿಭಟನೆ ದಾಖಲಾಗಿದೆ.

ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್ ಉತ್ಪನ್ನಗಳಾದ ಬೀದಿಗೆಸೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಅಮೂಲ್ ಭೂತದಹನ ಮಾಡಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ವಿರೋಧದ ನಡುವೆಯೂ ಭೂತದಹನಕ್ಕೆ ಮುಂದಾದ ಕರವೇ ಕಾರ್ಯಕರ್ತರನ್ನು ಬಂಧಿಸಲಾಯಿತು.

ಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್‌ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ನಂದಿನಿಯನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡಿದರೆ ಲಕ್ಷಾಂತರ ಜನರು ಬೀದಿಪಾಲಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಲೀನ ಮಾಡಬಾರದು. ಒಂದು ವೇಳೆ ಮಾಡಿದರೆ ರಾಜ್ಯದಾದ್ಯಂತ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಂಧನೂರಿನಲ್ಲಿ ಸಿಪಿಐ (ಎಂಎಲ್) ಲಿಬರೇಶನ್ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, “ಕೆಎಂಎಫ್‌ ಅನ್ನು ಅಮೂಲ್‌ನಲ್ಲಿ ವಿಲೀನಗೊಳಿಸಿ ತದನಂತರ ಕಾರ್ಪೊರೇಟ್ ಉದ್ಯಮಪತಿಗಳ ಕೈಗಿಡುವ ಇಂಗಿತವನ್ನು ಈಗಾಗಲೇ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೃಹ ಸಚಿವ ಅಮಿತ್ ಶಾ ಮುನ್ಸೂಚನೆ ನೀಡಿದ್ದು, ಇದನ್ನು ಸಾರಾಸಗಟಾಗಿ ಪ್ರತಿರೋಧಿಸುತ್ತೇವೆ. ಕೂಡಲೇ ಸರ್ಕಾರ ಕೆಎಂಎಫ್‌ನೊಂದಿಗೆ ಅಮೂಲ್ ವಿಲೀನದ ಪ್ರಸ್ತಾಪವನ್ನು ಕೈಬಿಡಬೇಕು” ಎಂದು ಒತ್ತಾಯಿಸಲಾಯಿತು.

ಸಿಂಧನೂರಿನಲ್ಲಿ ಪ್ರತಿಭಟನೆ

ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್‌ ಹಾಸನದ ಹೇಮಾವತಿ ಪ್ರತಿಮೆ ಬಳಿ ಇದ್ದ ನಂದಿನಿ ಹಾಲಿನ ಕೇಂದ್ರದ ಬಳಿ ‘ಫ್ಲೇವರ್ಡ್ ಮಿಲ್ಕ್’ ಕುಡಿಯುತ್ತಾ ಸಾರ್ವಜನಿಕರೊಂದಿಗೆ ಚರ್ಚಿಸಿದರು. ನಂತರ, ನಂದಿನಿ ಕೇಂದ್ರದಲ್ಲಿದ್ದ ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿದಂತೆ ಹಲವಾರು ಉತ್ಪನ್ನಗಳನ್ನು ಖರೀದಿಸಿ, ಸ್ಥಳದಲ್ಲಿದ್ದ ಸಾರ್ವಜನಿಕರಿಗೆ, ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಹಂಚಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...