Homeಕರ್ನಾಟಕಮತೀಯ ಗೂಂಡಾಗಿರಿ ಸಮರ್ಥನೆ: ಸಿಎಂ ವಿರುದ್ದ ರಾಜ್ಯವ್ಯಾಪಿ ಪ್ರತಿಭಟನೆ

ಮತೀಯ ಗೂಂಡಾಗಿರಿ ಸಮರ್ಥನೆ: ಸಿಎಂ ವಿರುದ್ದ ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿ ಮಾತನಾಡಿದ್ದರು. ಮುಖ್ಯಮಂತ್ರಿ ತಮ್ಮ ಹೇಳಿಕೆಯನ್ನು ವಾಪಾಸು ಪಡೆಯುವಂತೆ ಆಗ್ರಹಿಸಿ, ಅವರ ವಿರುದ್ದ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಿವೆ. ಇದನ್ನು ಬೆಂಬಲಿಸಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆಯಲಿದೆ.

“ಜಾತಿ, ಧರ್ಮದ ಹೆಸರಿನಲ್ಲಿ ಮತೀಯ ಗುಂಪುಗಳು ನಡೆಸುತ್ತಿರುವ ಗೂಂಡಾಗಿರಿ, ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಕೊಲೆಯಾದ ದಲಿತ, ಅಲ್ಪಸಂಖ್ಯಾತರ ಕುಟುಂಬಗಳಿಗೆ ನ್ಯಾಯ ಸಿಗಬೇಕು” ಎಂದು ಸಂಘಟನೆಗಳ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ಅಕ್ಟೋಬರ್‌ 13 ರ ಬುಧವಾರಂದು, ಕರಾವಳಿಯ ಪ್ರವಾಸದಲ್ಲಿದ್ದ ಸಿಎಂ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಮತೀಯ ಗೂಂಡಾಗಿರಿಯನ್ನು ಸಮರ್ಥನೆ ಮಾಡಿಕೊಂಡಿದ್ದರು.

ಅವರು, “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. ಇಂಥ ಸಂದರ್ಭದಲ್ಲಿ ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕವಾಗಿಯೂ ಸಾಮರಸ್ಯ ಕಾಪಾಡಲು ನಾವೆಲ್ಲರೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು” ಎಂದು ಹೇಳಿದ್ದರು.

ಸಮಾಜದ ಭಾವೆನೆಗಳಿಗೆ ಧಕ್ಕೆಯಾಗದಂತೆ ಅವರು ಕೂಡ ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಇದೊಂದು ಸಮಾಜಿಕವಾಗಿರುವ ಪ್ರಶ್ನೆ ಇದೆ. ಸಮಾಜದಲ್ಲಿ ಮೊರಾಲಿಟಿ ಇರಬೇಕು. ನೈತಿಕತೆ ಇಲ್ಲದೇ ನಾವು ಬದಕಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದರು. ಜೊತೆಗೆ, ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಇವತ್ತು ನಾವು ನಮ್ಮೆಲ್ಲಾ ಸಂಬಂಧಗಳು, ಶಾಂತಿ ಸುವ್ಯವಸ್ಥೇ ಇರುವುದು ನಮ್ಮ ಮೇಲೆ ನಾವು ನಿಯಂತ್ರಣವಿರುವುದರಿಂದ, ನೈತಿಕತೆಯಿಂದ. ನೈತಿಕತೆ ಇಲ್ಲದಾಗ ಎಲ್ಲಾ ಥರದ ಘಟನೆಗಳು ನಡೆಯುತ್ತವೆ ಎಂದಿದ್ದರು.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಅವರ ಹೇಳಿಕೆಯನ್ನು ವಿರೋಧಿಸಿರುವ ವಕೀಲರ ಸಂಘಟನೆಯಾದ ‘ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್’, ಸಿಎಂ ಹೇಳಿಕೆಯನ್ನು ವಾಪಾಸು ಪಡೆಯಬೇಕು ಎಂದು ಭಾನುವಾರ ಕಾನೂನು ನೋಟಿಸ್ ಕಳುಹಿಸಿದೆ.

“ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡುವ ಮೂಲಕ ತಾವು ತೆಗೆದುಕೊಂಡಿರುವ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದೀರಿ. ಕೋಮು ಹಿಂಸಾಚಾರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಮ್ಮ ಹೇಳಿಕೆಗಳು ಆಘಾತಕಾರಿಯಾಗಿವೆ ಮತ್ತು ಸಾಂವಿಧಾನಿಕ ಪ್ರತಿಜ್ಞೆಯನ್ನು ಉಲ್ಲಂಘಿಸಿವೆ. ಹಾಗಾಗಿ ಹೇಳಿಕೆಯನ್ನು ಹಿಂಪಡೆಯಿರಿ” ಎಂದು ನೋಟಿಸ್‌ನಲ್ಲಿ ಅದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....