Homeಕರ್ನಾಟಕಮತೀಯ ಗೂಂಡಾಗಿರಿ ಸಮರ್ಥನೆ: ಸಿಎಂ ವಿರುದ್ದ ರಾಜ್ಯವ್ಯಾಪಿ ಪ್ರತಿಭಟನೆ

ಮತೀಯ ಗೂಂಡಾಗಿರಿ ಸಮರ್ಥನೆ: ಸಿಎಂ ವಿರುದ್ದ ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಮಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿ ಮಾತನಾಡಿದ್ದರು. ಮುಖ್ಯಮಂತ್ರಿ ತಮ್ಮ ಹೇಳಿಕೆಯನ್ನು ವಾಪಾಸು ಪಡೆಯುವಂತೆ ಆಗ್ರಹಿಸಿ, ಅವರ ವಿರುದ್ದ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಿವೆ. ಇದನ್ನು ಬೆಂಬಲಿಸಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆಯಲಿದೆ.

“ಜಾತಿ, ಧರ್ಮದ ಹೆಸರಿನಲ್ಲಿ ಮತೀಯ ಗುಂಪುಗಳು ನಡೆಸುತ್ತಿರುವ ಗೂಂಡಾಗಿರಿ, ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಕೊಲೆಯಾದ ದಲಿತ, ಅಲ್ಪಸಂಖ್ಯಾತರ ಕುಟುಂಬಗಳಿಗೆ ನ್ಯಾಯ ಸಿಗಬೇಕು” ಎಂದು ಸಂಘಟನೆಗಳ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ಅಕ್ಟೋಬರ್‌ 13 ರ ಬುಧವಾರಂದು, ಕರಾವಳಿಯ ಪ್ರವಾಸದಲ್ಲಿದ್ದ ಸಿಎಂ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಮತೀಯ ಗೂಂಡಾಗಿರಿಯನ್ನು ಸಮರ್ಥನೆ ಮಾಡಿಕೊಂಡಿದ್ದರು.

ಅವರು, “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. ಇಂಥ ಸಂದರ್ಭದಲ್ಲಿ ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕವಾಗಿಯೂ ಸಾಮರಸ್ಯ ಕಾಪಾಡಲು ನಾವೆಲ್ಲರೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು” ಎಂದು ಹೇಳಿದ್ದರು.

ಸಮಾಜದ ಭಾವೆನೆಗಳಿಗೆ ಧಕ್ಕೆಯಾಗದಂತೆ ಅವರು ಕೂಡ ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಇದೊಂದು ಸಮಾಜಿಕವಾಗಿರುವ ಪ್ರಶ್ನೆ ಇದೆ. ಸಮಾಜದಲ್ಲಿ ಮೊರಾಲಿಟಿ ಇರಬೇಕು. ನೈತಿಕತೆ ಇಲ್ಲದೇ ನಾವು ಬದಕಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದರು. ಜೊತೆಗೆ, ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಇವತ್ತು ನಾವು ನಮ್ಮೆಲ್ಲಾ ಸಂಬಂಧಗಳು, ಶಾಂತಿ ಸುವ್ಯವಸ್ಥೇ ಇರುವುದು ನಮ್ಮ ಮೇಲೆ ನಾವು ನಿಯಂತ್ರಣವಿರುವುದರಿಂದ, ನೈತಿಕತೆಯಿಂದ. ನೈತಿಕತೆ ಇಲ್ಲದಾಗ ಎಲ್ಲಾ ಥರದ ಘಟನೆಗಳು ನಡೆಯುತ್ತವೆ ಎಂದಿದ್ದರು.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಅವರ ಹೇಳಿಕೆಯನ್ನು ವಿರೋಧಿಸಿರುವ ವಕೀಲರ ಸಂಘಟನೆಯಾದ ‘ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್’, ಸಿಎಂ ಹೇಳಿಕೆಯನ್ನು ವಾಪಾಸು ಪಡೆಯಬೇಕು ಎಂದು ಭಾನುವಾರ ಕಾನೂನು ನೋಟಿಸ್ ಕಳುಹಿಸಿದೆ.

“ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡುವ ಮೂಲಕ ತಾವು ತೆಗೆದುಕೊಂಡಿರುವ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದೀರಿ. ಕೋಮು ಹಿಂಸಾಚಾರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಮ್ಮ ಹೇಳಿಕೆಗಳು ಆಘಾತಕಾರಿಯಾಗಿವೆ ಮತ್ತು ಸಾಂವಿಧಾನಿಕ ಪ್ರತಿಜ್ಞೆಯನ್ನು ಉಲ್ಲಂಘಿಸಿವೆ. ಹಾಗಾಗಿ ಹೇಳಿಕೆಯನ್ನು ಹಿಂಪಡೆಯಿರಿ” ಎಂದು ನೋಟಿಸ್‌ನಲ್ಲಿ ಅದು ಉಲ್ಲೇಖಿಸಿತ್ತು.

ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...