Homeಕರ್ನಾಟಕ‘ಹಿಂದಿ ದಿನ’ ವಿರೋಧಿಸಿ ‘ಕರವೇ’ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ

‘ಹಿಂದಿ ದಿನ’ ವಿರೋಧಿಸಿ ‘ಕರವೇ’ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ

ಈಗಾಗಲೆ ಸುಮಾರು 1500 ಕಡೆ ಪ್ರತಿಭಟನೆಗಳು ನಡೆದಿದ್ದು, ಸಂಜೆಯ ಹೊತ್ತಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ದಾಖಲಾಗಲಿದೆ ಎಂದು ಕರವೇ ಹೇಳಿದೆ.

- Advertisement -
- Advertisement -

‘ಹಿಂದಿ ದಿವಸ್’ ಆಚರಣೆಯನ್ನು ವಿರೋಧಿಸಿ ‘ಕರ್ನಾಟಕ ರಕ್ಷಣಾ ವೇದಿಕೆ’(ಕರವೇ) ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ನೂರಾರು ಕರವೇ ಕಾರ್ಯಕರ್ತರು ರಾಜ್ಯದಲ್ಲಿರುವ ಬ್ಯಾಂಕುಗಳ ಮುಂದೆ ಜಮಾಯಿಸಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಘೋಷನೆಗಳನ್ನು ಕೂಗುತ್ತಿದ್ದಾರೆ. ಈಗಾಗಲೆ ಸುಮಾರು 1500 ಕಡೆ ಪ್ರತಿಭಟನೆಗಳು ನಡೆದಿದ್ದು, ಸಂಜೆಯ ಹೊತ್ತಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ದಾಖಲಾಗಲಿದೆ ಎಂದು ಕರವೇ ಹೇಳಿದೆ.

‘ಹಿಂದಿ ದಿನ’ ವಿರೋಧಿ ಪ್ರತಿಭಟನೆಗಾಗಿ ವೇದಿಕೆ ಸುಮಾರು 300 ಕ್ಕೂ ಹೆಚ್ಚು ಪೂರ್ವಭಾವಿ ಸಭೆಗಳನ್ನು ನಡೆಸಿತ್ತು ಎಂದು ವೇದಿಕೆಯ ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿರುವ ದಿನೇಶ್ ಕುಮಾರ್‌ ಅವರು ಈ ಹಿಂದೆ ಹೇಳಿದ್ದರು. ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಮಟ್ಟಗಳಲ್ಲಿ ಈ ಸಭೆಗಳನ್ನು ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕ ರ ವೇ ಕರೆ

ಇಂದಿನ ಪ್ರತಿಭಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ದಿನೇಶ್ ಕುಮಾರ್‌ ಅವರು, “ನಾವು ಮೊದಲಿಗೆ 1 ಸಾವಿರ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಂದೆ ಮಾತ್ರ ಪ್ರತಿಭಟನೆ ಮಾಡಲಿದ್ದೇವೆ ಎಂದು ತೀರ್ಮಾನಿಸಿದ್ದೆವು. ಆದರೆ ನಮ್ಮ ಕಾರ್ಯಕರ್ತರು ಖಾಸಗಿ ಬ್ಯಾಂಕುಗಳ ಮುಂದೆ ಕೂಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯದಾದದ್ಯಂತ 1500 ಕ್ಕೂ ಹೆಚ್ಚು ಕಡೆಯಲ್ಲಿ ಪ್ರತಿಭಟನೆಗಳು ನಡೆದಿವೆ. ಸಂಜೆಯ ಹೊತ್ತಿಗೆ 2 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ದಾಖಲಾಗಲಿದೆ” ಎಂದು ತಿಳಿಸಿದ್ದಾರೆ.

‘ಹಿಂದಿ ದಿನ’ ವಿರೋಧಿಸಿ ‘ಕರ್ನಾಟಕ ರಕ್ಷಣಾ ವೇದಿಕೆ’ ವತಿಯಿಂದ ಪ್ರತಿಭಟನೆಗಳ ಝಲಕ್‌

‘ಕರವೇ’ ಪ್ರತಿಭಟನೆ ಮಾತ್ರವಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಹಿಂದಿ ಹೇರಿಕೆಯನ್ನು ವಿರೋಧಿಸಿ ಹ್ಯಾಶ್ ಟ್ಯಾಗ್ ಚಳುವಳಿಗೆ ಕರೆ ನೀಡಿದೆ. ಸೆಪ್ಟೆಂಬರ್ 14 ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 12 ಗಂಟೆಗಳು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನವನ್ನು ಕರವೇ ಹಮ್ಮಿಕೊಂಡಿದೆ. ವೇದಿಕೆಯ ಕರೆಗೆ ಜನರು ಸಾಮಾಜಿಕ ಜಾಲತಾಣದಲ್ಲೂ ಕೈಜೋಡಿಸಿದ್ದಾರೆ. ಈಗಾಗಲೆ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ.

ಇದನ್ನೂ ಓದಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕ ರ ವೇ ಸಜ್ಜು: ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...