Homeಕರ್ನಾಟಕಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಈ ಮಧ್ಯೆ ಸಚಿವ ಸಿ.ಟಿ. ರವಿ, "ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಬೆಳಗಾವಿ ಜಿಲ್ಲೆಯ ಪಿರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಬುಧವಾರ ತಡರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಿದ್ದು ಶುಕ್ರವಾರ ಬೆಳಿಗ್ಗೆ ಉದ್ವಿಗ್ನಗೊಂಡು, ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.

ಇಲ್ಲಿ ಪ್ರತಿಮೆ ಸ್ಥಾಪನೆಯ ನಂತರ ಕೆರಳಿದ ಜನಸಮೂಹವೊಂದು ಧಾವಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪಟ್ಟು ಹಿಡಿದಿತ್ತು.

ಶುಕ್ರವಾರ ಮುಂಜಾನೆ ಪೀರನ‌ವಾಡಿ ವೃತ್ತದಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ನಿಯಂತ್ರಣಕ್ಕೆ ತರುವ ಪೋಲಿಸರ ಪ್ರಯತ್ನಗಳಿಗೆ ತೊಡಕಾಯಿತು.

ನೆರೆದಿದ್ದ ಸಮೂಹ ‘ಜೈ ಭವಾನಿ, ಜೈ ಶಿವಾಜಿ’ ಎಂದು ಘೋಷಣೆಗಳನ್ನು ಕೂಗಿ, ರಾಯಣ್ಣನ ಪ್ರತಿಮೆಯನ್ನು ವೃತ್ತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದೆ.

ವೃತ್ತಕ್ಕೆ ಶಿವಾಜಿ ಹೆಸರಿದೆ, ಶಿವಾಜಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನೋಡಿದರೆ ಪ್ರಯಾಣಿಕರಿಗೆ ಗೊಂದಲವಾಗುತ್ತದೆ ಎಂದು ಮರಾಠಿಗರು ವಾದಿಸಿದ್ದಾರೆ.

ಪ್ರತಿಮೆಯನ್ನು ಅನುಮತಿಯಿಲ್ಲದೆ ಸ್ಥಾಪಿಸಲಾಗಿದೆ. ಹಾಗಾಗಿ ಕಾನೂನುಬದ್ಧವಾಗಿ ವ್ಯವಹರಿಸಲಾಗುವುದು. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಇದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಟ್ವಿಟರ್ ನಲ್ಲಿಯೂ ಈ ಚರ್ಚೆ ಟ್ರೆಂಡಿಂಗ್ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, “ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, “ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ” ಎಂದಿದ್ದಾರೆ.

“ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೀರನವಾಡಿಯಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, “ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ” ಎಂದು ಸೂಚನೆ ನೀಡಿದ್ದಾರೆ.

ಈ ವಿವಾದ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, “ನಾನು ಬೆಳಗಾವಿ ಡಿಸಿ ಮತ್ತು ಎಸ್ಪಿ ಜೊತೆ ಮಾತನಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಇಬ್ಬರೂ ದೇಶಭಕ್ತರು. ಅವರ ಗೌರವ ಕಾಪಾಡುವ ಕೆಲಸ ಮಾಡುತ್ತೇವೆ. ಎರಡೂ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿಂದ ಎಡಿಜಿಪಿ ಸ್ಥಳಕ್ಕೆ ಹೋಗುತ್ತಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಈ ಮಧ್ಯೆ ಕನ್ನಡ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, “ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು” ಎಂದು ಪ್ರಶ್ನಿಸಿದ್ದಾಗಿ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ಹೋರಾಟವನ್ನು ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಗೆ ಹೊಲಿಸಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕೂ ಇಲ್ಲವೇ? ಎಂದು ಶೃತಿ ಎಂಬುವವರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಎಂಬುವವರು ಟ್ವೀಟ್ ಮಾಡಿ ರಾಜಕಾರಣಿಗಳು ಮರಾಠಿಗರ ಓಲೈಕೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.


ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...