Homeಕರ್ನಾಟಕಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಈ ಮಧ್ಯೆ ಸಚಿವ ಸಿ.ಟಿ. ರವಿ, "ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಬೆಳಗಾವಿ ಜಿಲ್ಲೆಯ ಪಿರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಬುಧವಾರ ತಡರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಿದ್ದು ಶುಕ್ರವಾರ ಬೆಳಿಗ್ಗೆ ಉದ್ವಿಗ್ನಗೊಂಡು, ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.

ಇಲ್ಲಿ ಪ್ರತಿಮೆ ಸ್ಥಾಪನೆಯ ನಂತರ ಕೆರಳಿದ ಜನಸಮೂಹವೊಂದು ಧಾವಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪಟ್ಟು ಹಿಡಿದಿತ್ತು.

ಶುಕ್ರವಾರ ಮುಂಜಾನೆ ಪೀರನ‌ವಾಡಿ ವೃತ್ತದಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ನಿಯಂತ್ರಣಕ್ಕೆ ತರುವ ಪೋಲಿಸರ ಪ್ರಯತ್ನಗಳಿಗೆ ತೊಡಕಾಯಿತು.

ನೆರೆದಿದ್ದ ಸಮೂಹ ‘ಜೈ ಭವಾನಿ, ಜೈ ಶಿವಾಜಿ’ ಎಂದು ಘೋಷಣೆಗಳನ್ನು ಕೂಗಿ, ರಾಯಣ್ಣನ ಪ್ರತಿಮೆಯನ್ನು ವೃತ್ತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದೆ.

ವೃತ್ತಕ್ಕೆ ಶಿವಾಜಿ ಹೆಸರಿದೆ, ಶಿವಾಜಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನೋಡಿದರೆ ಪ್ರಯಾಣಿಕರಿಗೆ ಗೊಂದಲವಾಗುತ್ತದೆ ಎಂದು ಮರಾಠಿಗರು ವಾದಿಸಿದ್ದಾರೆ.

ಪ್ರತಿಮೆಯನ್ನು ಅನುಮತಿಯಿಲ್ಲದೆ ಸ್ಥಾಪಿಸಲಾಗಿದೆ. ಹಾಗಾಗಿ ಕಾನೂನುಬದ್ಧವಾಗಿ ವ್ಯವಹರಿಸಲಾಗುವುದು. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಇದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಟ್ವಿಟರ್ ನಲ್ಲಿಯೂ ಈ ಚರ್ಚೆ ಟ್ರೆಂಡಿಂಗ್ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, “ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, “ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ” ಎಂದಿದ್ದಾರೆ.

“ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೀರನವಾಡಿಯಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, “ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ” ಎಂದು ಸೂಚನೆ ನೀಡಿದ್ದಾರೆ.

ಈ ವಿವಾದ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, “ನಾನು ಬೆಳಗಾವಿ ಡಿಸಿ ಮತ್ತು ಎಸ್ಪಿ ಜೊತೆ ಮಾತನಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಇಬ್ಬರೂ ದೇಶಭಕ್ತರು. ಅವರ ಗೌರವ ಕಾಪಾಡುವ ಕೆಲಸ ಮಾಡುತ್ತೇವೆ. ಎರಡೂ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿಂದ ಎಡಿಜಿಪಿ ಸ್ಥಳಕ್ಕೆ ಹೋಗುತ್ತಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಈ ಮಧ್ಯೆ ಕನ್ನಡ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, “ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು” ಎಂದು ಪ್ರಶ್ನಿಸಿದ್ದಾಗಿ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ಹೋರಾಟವನ್ನು ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಗೆ ಹೊಲಿಸಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕೂ ಇಲ್ಲವೇ? ಎಂದು ಶೃತಿ ಎಂಬುವವರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಎಂಬುವವರು ಟ್ವೀಟ್ ಮಾಡಿ ರಾಜಕಾರಣಿಗಳು ಮರಾಠಿಗರ ಓಲೈಕೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.


ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...